<p><strong>ಭದೋಹಿ (ಉತ್ತರಪ್ರದೇಶ)</strong>: ಹದಿನಾರು ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ 30 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p>.<p>ಮೇ 17ರಂದು ಬಾಲಕಿ ಬಹಿರ್ದೆಸೆಗೆ ಹೋದಾಗ ಘಟನೆ ನಡೆದಿದೆ. ಆರೋಪಿ ಜಿತೇಂದ್ರ ಪ್ರಜಾಪತಿ ಬಾಲಕಿಯ ಬಾಯಿ ಮುಚ್ಚಿ, ತನ್ನ ಮನೆಗೆ ಕರೆದೊಯ್ದು ಹಲ್ಲೆ ನಡೆಸಿದ್ದಾನೆ. ಬಳಿಕ ಚಾಕು ತೋರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಭದೋಹಿ ಪೊಲೀಸ್ ವರಿಷ್ಠಾಧಿಕಾರಿ ಅಭಿಮನ್ಯು ಮಾಂಗ್ಲಿಕ್ ತಿಳಿಸಿದ್ದಾರೆ.</p>.<p>‘ರಾತ್ರಿಯಾದರೂ ಮನೆಗೆ ಮಗಳು ಬಾರದಿರುವುದನ್ನು ಕಂಡು ಪೋಷಕರು ಬಾಲಕಿಯನ್ನು ಹುಡುಕಲು ಆರಂಭಿಸಿದ್ದಾರೆ. ಬಾಲಕಿಯ ತಂದೆ ಕೆಲಸ ಮಾಡುವ ಪೆಟ್ರೋಲ್ ಪಂಪ್ಗೆ ಬಂದಿದ್ದ ಆರೋಪಿಯು, ತನ್ನ ಮನೆಯಲ್ಲಿರುವ ಮಗಳನ್ನು ಕರೆದುಕೊಂಡು ಹೋಗುವಂತೆ ಆಕೆಯ ತಂದೆಗೆ ಹೇಳಿದ್ದಾನೆ. ಅಲ್ಲದೇ ಈ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಬೆದರಿಕೆ ಹಾಕಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">ಬಾಲಕಿಯ ತಂದೆ ಮೊದಲು ಬೆದರಿಕೆಗೆ ಮತ್ತು ಸಮಾಜಕ್ಕೆ ಹೆದರಿ ವಿಷಯವನ್ನು ಯಾರಿಗೂ ತಿಳಿಸಿರಲಿಲ್ಲ. ಆದರೆ, ಬಾಲಕಿ ಪ್ರಜಾಪತಿಯ ವಿರುದ್ಧ ದೂರು ದಾಖಲಿಸದಿದ್ದರೆ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸಿದ್ದಾಳೆ. ಬಳಿಕ ಬಾಲಕಿಯ ತಂದೆ ಮೇ 25ರಂದು ಕೊಯಿರೌನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದೋಹಿ (ಉತ್ತರಪ್ರದೇಶ)</strong>: ಹದಿನಾರು ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ 30 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p>.<p>ಮೇ 17ರಂದು ಬಾಲಕಿ ಬಹಿರ್ದೆಸೆಗೆ ಹೋದಾಗ ಘಟನೆ ನಡೆದಿದೆ. ಆರೋಪಿ ಜಿತೇಂದ್ರ ಪ್ರಜಾಪತಿ ಬಾಲಕಿಯ ಬಾಯಿ ಮುಚ್ಚಿ, ತನ್ನ ಮನೆಗೆ ಕರೆದೊಯ್ದು ಹಲ್ಲೆ ನಡೆಸಿದ್ದಾನೆ. ಬಳಿಕ ಚಾಕು ತೋರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಭದೋಹಿ ಪೊಲೀಸ್ ವರಿಷ್ಠಾಧಿಕಾರಿ ಅಭಿಮನ್ಯು ಮಾಂಗ್ಲಿಕ್ ತಿಳಿಸಿದ್ದಾರೆ.</p>.<p>‘ರಾತ್ರಿಯಾದರೂ ಮನೆಗೆ ಮಗಳು ಬಾರದಿರುವುದನ್ನು ಕಂಡು ಪೋಷಕರು ಬಾಲಕಿಯನ್ನು ಹುಡುಕಲು ಆರಂಭಿಸಿದ್ದಾರೆ. ಬಾಲಕಿಯ ತಂದೆ ಕೆಲಸ ಮಾಡುವ ಪೆಟ್ರೋಲ್ ಪಂಪ್ಗೆ ಬಂದಿದ್ದ ಆರೋಪಿಯು, ತನ್ನ ಮನೆಯಲ್ಲಿರುವ ಮಗಳನ್ನು ಕರೆದುಕೊಂಡು ಹೋಗುವಂತೆ ಆಕೆಯ ತಂದೆಗೆ ಹೇಳಿದ್ದಾನೆ. ಅಲ್ಲದೇ ಈ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಬೆದರಿಕೆ ಹಾಕಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">ಬಾಲಕಿಯ ತಂದೆ ಮೊದಲು ಬೆದರಿಕೆಗೆ ಮತ್ತು ಸಮಾಜಕ್ಕೆ ಹೆದರಿ ವಿಷಯವನ್ನು ಯಾರಿಗೂ ತಿಳಿಸಿರಲಿಲ್ಲ. ಆದರೆ, ಬಾಲಕಿ ಪ್ರಜಾಪತಿಯ ವಿರುದ್ಧ ದೂರು ದಾಖಲಿಸದಿದ್ದರೆ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸಿದ್ದಾಳೆ. ಬಳಿಕ ಬಾಲಕಿಯ ತಂದೆ ಮೇ 25ರಂದು ಕೊಯಿರೌನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>