<p><strong>ಮುಂಬೈ:</strong> ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪರವಾಗಿ ದುಬೈನಿಂದ ಕರೆ ಮಾಡುತ್ತಿದ್ದೇನೆ ಎಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ ನಂತರ ಮುಂಬೈನ ಬಾಂದ್ರಾದಲ್ಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸ ‘ಮಾತೋಶ್ರೀ’ಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.</p>.<p>'ಮಾತೋಶ್ರೀ ನಿವಾಸದಲ್ಲಿನ ಲ್ಯಾಂಡ್ಲೈನ್ಗೆ ಎರಡು ಕರೆಗಳು ಬಂದ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರ ಸಿಎಂ ಅವರ ನಿವಾಸದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಕರೆ ಮಾಡಿದವರು ದಾವೂದ್ ಪರವಾಗಿ ಕರೆ ಮಾಡುತ್ತಿರುವುದಾಗಿ ಹೇಳಿದ್ದಾರೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>'ಸಿಎಂ ಠಾಕ್ರೆ ಅವರ ನಿವಾಸದಲ್ಲಿನ ಫೋನ್ ಶನಿವಾರ ರಾತ್ರಿ 10.30ರ ಸುಮಾರಿಗೆ ಎರಡು ಬಾರಿ ರಿಂಗಣಿಸಿತು. ಕರೆ ಮಾಡಿದವರು ಸಿಎಂ ಅವರೊಂದಿಗೆ ಮಾತನಾಡಲು ಬಯಸಿದ್ದರು. ನಾವು ಕರೆ ಮಾಡಿದವರನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ' ಎಂದು ಹೇಳಿದ್ದಾರೆ.</p>.<p>ಕರೆಗಳ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಬಳಿಕ ಬಂಗಲೆಯ ಹೊರಗೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>'ನಾವು ಸ್ವೀಕರಿಸಿದ ಕರೆಗಳು ದುಬೈ ಅಥವಾ ಇನ್ನಾವುದೇ ಸ್ಥಳದಿಂದ ಬಂದಿದೆಯೇ ಎನ್ನುವ ಕುರಿತು ಪರಿಶೀಲಿಸಲು ಪ್ರಯತ್ನಿಸುತ್ತಿದ್ದೇವೆ. ತನಿಖೆ ಮುಂದುವರೆದಿದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪರವಾಗಿ ದುಬೈನಿಂದ ಕರೆ ಮಾಡುತ್ತಿದ್ದೇನೆ ಎಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ ನಂತರ ಮುಂಬೈನ ಬಾಂದ್ರಾದಲ್ಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸ ‘ಮಾತೋಶ್ರೀ’ಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.</p>.<p>'ಮಾತೋಶ್ರೀ ನಿವಾಸದಲ್ಲಿನ ಲ್ಯಾಂಡ್ಲೈನ್ಗೆ ಎರಡು ಕರೆಗಳು ಬಂದ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರ ಸಿಎಂ ಅವರ ನಿವಾಸದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಕರೆ ಮಾಡಿದವರು ದಾವೂದ್ ಪರವಾಗಿ ಕರೆ ಮಾಡುತ್ತಿರುವುದಾಗಿ ಹೇಳಿದ್ದಾರೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>'ಸಿಎಂ ಠಾಕ್ರೆ ಅವರ ನಿವಾಸದಲ್ಲಿನ ಫೋನ್ ಶನಿವಾರ ರಾತ್ರಿ 10.30ರ ಸುಮಾರಿಗೆ ಎರಡು ಬಾರಿ ರಿಂಗಣಿಸಿತು. ಕರೆ ಮಾಡಿದವರು ಸಿಎಂ ಅವರೊಂದಿಗೆ ಮಾತನಾಡಲು ಬಯಸಿದ್ದರು. ನಾವು ಕರೆ ಮಾಡಿದವರನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ' ಎಂದು ಹೇಳಿದ್ದಾರೆ.</p>.<p>ಕರೆಗಳ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಬಳಿಕ ಬಂಗಲೆಯ ಹೊರಗೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>'ನಾವು ಸ್ವೀಕರಿಸಿದ ಕರೆಗಳು ದುಬೈ ಅಥವಾ ಇನ್ನಾವುದೇ ಸ್ಥಳದಿಂದ ಬಂದಿದೆಯೇ ಎನ್ನುವ ಕುರಿತು ಪರಿಶೀಲಿಸಲು ಪ್ರಯತ್ನಿಸುತ್ತಿದ್ದೇವೆ. ತನಿಖೆ ಮುಂದುವರೆದಿದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>