<p><strong>ಬಹರಿಚ್:</strong> ಮಾಜಿ ಪತ್ನಿಯನ್ನು ಬೈಕ್ಗೆ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋಗಿ ಕೊಲೆ ಮಾಡಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶದ ಬಹರಿಚ್ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.ಉತ್ತರ ಪ್ರದೇಶ: ಸಮಾಜಕ್ಕೆ ಹೆದರಿ ಮಗಳ ಅಪಹರಣದ ಸುದ್ದಿಯನ್ನೇ ಮುಚ್ಚಿಟ್ಟ ತಂದೆ ! .<p>ನನ್ಪಾರ ಕೊತ್ವಾಲಿ ಪ್ರದೇಶದಲ್ಲಿ ಘಟನೆ ಜರುಗಿದ್ದು, ಆರೋಪಿ ಹಾಗೂ ಸಂತ್ರಸ್ತೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ರಾಮಗಾಂವ್ ಪ್ರದೇಶದ ಮುಸಲ್ಲಂಪುರ ಗ್ರಾಮದ ನಿವಾಸಿ ರಹೀಸ್ ಆರೋಪಿ. ಆತ ಒಂದು ವರ್ಷದ ಹಿಂದೆ ನನ್ಪಾರದ ರೇಷ್ಮಾ ಎಂಬುವವರನ್ನು ಮದುವೆಯಾಗಿದ್ದ. ಇಬ್ಬರ ನಡುವೆ ವೈಮನಸ್ಸು ಉಂಟಾಗಿ ಇದೇ ಜನವರಿಯಲ್ಲಿ ವಿಚ್ಚೇದನ ಪಡೆದುಕೊಂಡಿದ್ದರು. ಆ ಬಳಿಕ ಮಹಿಳೆ ತನ್ನ ಪೋಷಕರೊಂದಿಗೆ ವಾಸವಾಗಿದ್ದರು.</p><p>ಆರೋಪಿ ಬುಧವಾರ ನನ್ಪಾರಕ್ಕೆ ಬಂದಿದ್ದು, ಮಾಜಿ ಪತ್ನಿ ಮನೆಗೆ ಮರುಳುತ್ತಿದ್ದ ವೇಳೆ ಲಕ್ಷ್ಮಣ್ಪುರ ಮತೇಹಿ ಎಂಬಲ್ಲಿ ಗಲಾಟೆ ಮಾಡಿದ್ದಾನೆ. ಅದು ಹಿಂಸಾಚಾರಕ್ಕೆ ತಿರುಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.</p>.ಉತ್ತರ ಪ್ರದೇಶ| ಪ್ರಧಾನಿ ವಿರುದ್ಧ 'ಆಕ್ಷೇಪಾರ್ಹ' ವಿಡಿಯೊ ಪೋಸ್ಟ್: ವ್ಯಕ್ತಿ ಬಂಧನ.<p>ರಹೀಸ್ ಆಕೆಗೆ ಬೈಕ್ನಲ್ಲಿ ಡಿಕ್ಕಿ ಹೊಡೆದಿದ್ದು, ಬಳಿಕ ಆಕೆಯನ್ನು ಬೈಕ್ಗೆ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆಕೆಯ ಅರಚಾಟ ಕೇಳಿ ಸ್ಥಳೀಯರು ದೌಡಾಯಿಸಿ ರಕ್ಷಣೆ ಮಾಡಿದ್ದಾರೆ. ಅಲ್ಲಿದ್ದವರು ಆರೋಪಿಗೆ ಥಳಿಸಿದ್ದಾರೆ. ಇದರಿಂದ ಆತನೂ ಗಾಯಗೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.</p><p>ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇಬ್ಬರನ್ನೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.</p><p>ಕೊಲೆ ಯತ್ನ, ಹಾನಿ ಉಂಟು ಮಾಡುವುದು ಸೇರಿ ಭಾರತೀಯ ನ್ಯಾಯ ಸಂಹಿತೆ ವಿವಿಧ ಕಲಂಗಳಡಿ ದೂರು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ವೃತ್ತ ನಿರೀಕ್ಷಕ ಪಹುಪ್ ಸಿಂಗ್ ತಿಳಿಸಿದ್ದಾರೆ.</p>.ಉತ್ತರ ಪ್ರದೇಶ | ಸರ್ಕಾರಿ ಭೂಮಿಯಲ್ಲಿದ್ದ ಮಸೀದಿ ನೆಲಸಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಹರಿಚ್:</strong> ಮಾಜಿ ಪತ್ನಿಯನ್ನು ಬೈಕ್ಗೆ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋಗಿ ಕೊಲೆ ಮಾಡಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶದ ಬಹರಿಚ್ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.ಉತ್ತರ ಪ್ರದೇಶ: ಸಮಾಜಕ್ಕೆ ಹೆದರಿ ಮಗಳ ಅಪಹರಣದ ಸುದ್ದಿಯನ್ನೇ ಮುಚ್ಚಿಟ್ಟ ತಂದೆ ! .<p>ನನ್ಪಾರ ಕೊತ್ವಾಲಿ ಪ್ರದೇಶದಲ್ಲಿ ಘಟನೆ ಜರುಗಿದ್ದು, ಆರೋಪಿ ಹಾಗೂ ಸಂತ್ರಸ್ತೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ರಾಮಗಾಂವ್ ಪ್ರದೇಶದ ಮುಸಲ್ಲಂಪುರ ಗ್ರಾಮದ ನಿವಾಸಿ ರಹೀಸ್ ಆರೋಪಿ. ಆತ ಒಂದು ವರ್ಷದ ಹಿಂದೆ ನನ್ಪಾರದ ರೇಷ್ಮಾ ಎಂಬುವವರನ್ನು ಮದುವೆಯಾಗಿದ್ದ. ಇಬ್ಬರ ನಡುವೆ ವೈಮನಸ್ಸು ಉಂಟಾಗಿ ಇದೇ ಜನವರಿಯಲ್ಲಿ ವಿಚ್ಚೇದನ ಪಡೆದುಕೊಂಡಿದ್ದರು. ಆ ಬಳಿಕ ಮಹಿಳೆ ತನ್ನ ಪೋಷಕರೊಂದಿಗೆ ವಾಸವಾಗಿದ್ದರು.</p><p>ಆರೋಪಿ ಬುಧವಾರ ನನ್ಪಾರಕ್ಕೆ ಬಂದಿದ್ದು, ಮಾಜಿ ಪತ್ನಿ ಮನೆಗೆ ಮರುಳುತ್ತಿದ್ದ ವೇಳೆ ಲಕ್ಷ್ಮಣ್ಪುರ ಮತೇಹಿ ಎಂಬಲ್ಲಿ ಗಲಾಟೆ ಮಾಡಿದ್ದಾನೆ. ಅದು ಹಿಂಸಾಚಾರಕ್ಕೆ ತಿರುಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.</p>.ಉತ್ತರ ಪ್ರದೇಶ| ಪ್ರಧಾನಿ ವಿರುದ್ಧ 'ಆಕ್ಷೇಪಾರ್ಹ' ವಿಡಿಯೊ ಪೋಸ್ಟ್: ವ್ಯಕ್ತಿ ಬಂಧನ.<p>ರಹೀಸ್ ಆಕೆಗೆ ಬೈಕ್ನಲ್ಲಿ ಡಿಕ್ಕಿ ಹೊಡೆದಿದ್ದು, ಬಳಿಕ ಆಕೆಯನ್ನು ಬೈಕ್ಗೆ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆಕೆಯ ಅರಚಾಟ ಕೇಳಿ ಸ್ಥಳೀಯರು ದೌಡಾಯಿಸಿ ರಕ್ಷಣೆ ಮಾಡಿದ್ದಾರೆ. ಅಲ್ಲಿದ್ದವರು ಆರೋಪಿಗೆ ಥಳಿಸಿದ್ದಾರೆ. ಇದರಿಂದ ಆತನೂ ಗಾಯಗೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.</p><p>ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇಬ್ಬರನ್ನೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.</p><p>ಕೊಲೆ ಯತ್ನ, ಹಾನಿ ಉಂಟು ಮಾಡುವುದು ಸೇರಿ ಭಾರತೀಯ ನ್ಯಾಯ ಸಂಹಿತೆ ವಿವಿಧ ಕಲಂಗಳಡಿ ದೂರು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ವೃತ್ತ ನಿರೀಕ್ಷಕ ಪಹುಪ್ ಸಿಂಗ್ ತಿಳಿಸಿದ್ದಾರೆ.</p>.ಉತ್ತರ ಪ್ರದೇಶ | ಸರ್ಕಾರಿ ಭೂಮಿಯಲ್ಲಿದ್ದ ಮಸೀದಿ ನೆಲಸಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>