<p><strong>ನವದೆಹಲಿ:</strong> ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p>.<p>ಆರೋಪಿಯನ್ನು ಶ್ಲೋಕ್ ತ್ರಿಪಾಠಿ ಎಂದು ಗುರುತಿಸಲಾಗಿದೆ. ವಂಚಕನಾಗಿರುವ ಆರೋಪಿ ಆಗಾಗ ತನ್ನ ಗುರುತನ್ನು ಬದಲಾಯಿಸುತ್ತಿರುತ್ತಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿ ಆರೋಪಿಯು ಉತ್ತರ ಪ್ರದೇಶದ ನೆರೆಯ ಗಾಜಿಯಾಬಾದ್ನಲ್ಲಿ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಗಾಜಿಯಾಬಾದ್ ಪೊಲೀಸರು ದೆಹಲಿ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಪಂಚವಟಿ ಕಾಲೋನಿಗೆ ತಂಡವನ್ನು ಕಳುಹಿಸಿದ್ದರು. ಪಂಚವಟಿ ಕಾಲೋನಿಯಿಂದಲೇ ಆರೋಪಿ ಕರೆ ಮಾಡಿದ್ದ ಎಂದು ಗಾಜಿಯಾಬಾದ್ನ ಸಹಾಯಕ ಪೊಲೀಸ್ ಆಯುಕ್ತ ರಿತೇಶ್ ತ್ರಿಪಾಠಿ ತಿಳಿಸಿದ್ದಾರೆ.</p>.<p>ಗಾಜಿಯಾಬಾದ್ ಮತ್ತು ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಶನಿವಾರ ಆತನನ್ನು ಬಂಧಿಸಿದ್ದಾರೆ. ನಗರದ ವಾಯವ್ಯ ಭಾಗದಲ್ಲಿರುವ ದೆಹಲಿ ಪೊಲೀಸರ ವಿಶೇಷ ಘಟಕದ ಕಚೇರಿಯಲ್ಲಿ ಆತನನ್ನು ವಿಚಾರಣೆ ನಡೆಸಲಾಗುತ್ತಿದೆ. </p>.<p>ವಿಚಾರಣೆಯ ಸಮಯದಲ್ಲಿ, ಆರೋಪಿ, ಕರೆ ಮಾಡಿದಾಗ ತಾನು ಪಾನಮತ್ತ ಸ್ಥಿತಿಯಲ್ಲಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.ಯೂಟ್ಯೂಬರ್ ಅರ್ಮಾನ್ ಮಲಿಕ್ಗೆ ಜೀವ ಬೆದರಿಕೆ: ಬಂದೂಕು ಪರವಾನಗಿಗೆ ಪೊಲೀಸರ ಮೊರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p>.<p>ಆರೋಪಿಯನ್ನು ಶ್ಲೋಕ್ ತ್ರಿಪಾಠಿ ಎಂದು ಗುರುತಿಸಲಾಗಿದೆ. ವಂಚಕನಾಗಿರುವ ಆರೋಪಿ ಆಗಾಗ ತನ್ನ ಗುರುತನ್ನು ಬದಲಾಯಿಸುತ್ತಿರುತ್ತಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿ ಆರೋಪಿಯು ಉತ್ತರ ಪ್ರದೇಶದ ನೆರೆಯ ಗಾಜಿಯಾಬಾದ್ನಲ್ಲಿ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಗಾಜಿಯಾಬಾದ್ ಪೊಲೀಸರು ದೆಹಲಿ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಪಂಚವಟಿ ಕಾಲೋನಿಗೆ ತಂಡವನ್ನು ಕಳುಹಿಸಿದ್ದರು. ಪಂಚವಟಿ ಕಾಲೋನಿಯಿಂದಲೇ ಆರೋಪಿ ಕರೆ ಮಾಡಿದ್ದ ಎಂದು ಗಾಜಿಯಾಬಾದ್ನ ಸಹಾಯಕ ಪೊಲೀಸ್ ಆಯುಕ್ತ ರಿತೇಶ್ ತ್ರಿಪಾಠಿ ತಿಳಿಸಿದ್ದಾರೆ.</p>.<p>ಗಾಜಿಯಾಬಾದ್ ಮತ್ತು ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಶನಿವಾರ ಆತನನ್ನು ಬಂಧಿಸಿದ್ದಾರೆ. ನಗರದ ವಾಯವ್ಯ ಭಾಗದಲ್ಲಿರುವ ದೆಹಲಿ ಪೊಲೀಸರ ವಿಶೇಷ ಘಟಕದ ಕಚೇರಿಯಲ್ಲಿ ಆತನನ್ನು ವಿಚಾರಣೆ ನಡೆಸಲಾಗುತ್ತಿದೆ. </p>.<p>ವಿಚಾರಣೆಯ ಸಮಯದಲ್ಲಿ, ಆರೋಪಿ, ಕರೆ ಮಾಡಿದಾಗ ತಾನು ಪಾನಮತ್ತ ಸ್ಥಿತಿಯಲ್ಲಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.ಯೂಟ್ಯೂಬರ್ ಅರ್ಮಾನ್ ಮಲಿಕ್ಗೆ ಜೀವ ಬೆದರಿಕೆ: ಬಂದೂಕು ಪರವಾನಗಿಗೆ ಪೊಲೀಸರ ಮೊರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>