ಭಾರತೀಯ ದಂಡ ಸಂಹಿತೆಯ ಕಲಂ 302ರಡಿ (ಕೊಲೆ) ದೂರು ದಾಖಲಿಸಿಕೊಳ್ಳಲಾಗಿದೆ. ಭಾನುವಾರ ಆರೋಪಿಯನ್ನು ನ್ಯಾಯಾಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆ ಹಾಗೂ ದಾಳಿ ಮಾಡಿದ ಆಯುಧ ವಶಪಡಿಸಿಕೊಳ್ಳಲು ಒಂದು ದಿನದ ಕಸ್ಟಡಿಗೆ ನೀಡಲಾಗಿದೆ.
ಮರಣೋತ್ತರ ಪರೀಕ್ಷೆ ಬಳಿಕ ಮನೋಜ್ ಮೃತದೇಹವನ್ನು ಶನಿವಾರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.