‘ಆರೋಪಿಯು ಮಂಗಳವಾರ ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ, ಜೆಜೆ ಸರ್ಕಾರಿ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಕೊಲೆ ಮಾಡಲು ಪಾತಕಿ ದಾವೂದ್ ಇಬ್ರಾಹಿಂ ಸಹಚರರು ತನಗೆ ಗುತ್ತಿಗೆ ಕೊಟ್ಟಿದ್ದಾರೆ’ ಎಂದು ಹೇಳಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಜೆಜೆ ಆಸ್ಪತ್ರೆಯಲ್ಲಿ ಭಾರಿ ಪ್ರಮಾಣದಲ್ಲಿ ರೋಗಿಗಳು ಇದ್ದಿದ್ದರಿಂದ ತಪಾಸಣೆಗೆ ವೈದ್ಯರು ವಿಳಂಬ ಮಾಡುತ್ತಿದ್ದರು. ಹೀಗಾಗಿ ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.