<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಬೂತ್ ಮಟ್ಟದ ಅಧಿಕಾರಿಗೆ (ಬಿಎಲ್ಒ) ಬೆದರಿಕೆ ಹಾಕಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ.</p>.<p>ಆರೋಪಿಯನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತ ಜಮೀರುಲ್ ಇಸ್ಲಾಂ ಮೊಲ್ಲಾ ಎಂದು ಗುರುತಿಸಲಾಗಿದೆ. 97 ವರ್ಷದ ವ್ಯಕ್ತಿಯೊಬ್ಬರ ಹೆಸರು 2002ರಲ್ಲಿನ ಮತದಾರರ ಪಟ್ಟಿಯಲ್ಲಿ ಕಾಣಿಸದೇ ಇರುವ ವಿಚಾರದಲ್ಲಿ ಜಮೀರುಲ್ ಅವರು ಬಿಎಲ್ಒ ಜತೆ ಜಗಳವಾಡಿದ್ದಾರೆ. ಆ ಬಳಿಕ ದೂರವಾಣಿ ಕರೆ ಮಾಡಿ ‘ಗಂಭೀರ ಪರಿಣಾಮ ಎದುರಿಸಬೇಕಾದೀತು’ ಎಂದು ಬೆದರಿಕೆ ಹಾಕಿದ್ದಾಗಿ ಆರೋಪಿಸಲಾಗಿದೆ.</p>.<p class="title">ಬಿಎಲ್ಒ ದೀಪಕ್ ಮಹಾತೊ ಈ ಸಂಬಂಧ ನಜಾತ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಬೆನ್ನಲ್ಲೇ ಬಂಧನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮೀರುಲ್ ಅವರನ್ನು ಟಿಎಂಸಿಯು ಬೂತ್ ಮಟ್ಟದ ಏಜೆಂಟ್ ಅಗಿ ನೇಮಿಸಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. </p>.<p>ಭಾವಚಿತ್ರ ಪರಿಶೀಲಿಸಲು ಸೂಚನೆ (ನವದೆಹಲಿ ವರದಿ): ಮತದಾರರ ಪಟ್ಟಿಯಲ್ಲಿರುವ ಭಾವಚಿತ್ರಗಳನ್ನು ಸರಿಯಾಗಿ ಪರಿಶೀಲಿಸಿ ಯಾವುದೇ ಲೋಪ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಅಸ್ಸಾಂನಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವ ಸಿಬ್ಬಂದಿಗೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.</p>.<p>ಬಿಹಾರದ ಮತದಾರರ ಪಟ್ಟಿಯಲ್ಲಿ ಕೆಲವು ಮತದಾರರ ಭಾವಚಿತ್ರದ ಜಾಗದಲ್ಲಿ ಬೆಕ್ಕು ಮತ್ತು ನಾಯಿಯ ಚಿತ್ರಗಳು ಇದ್ದವು ಎಂದು ವರದಿಯಾಗಿದ್ದವು. ಅಂತಹ ಲೋಪ ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಸ್ಸಾಂನ ಮುಖ್ಯ ಚುನಾವಣಾ ಅಧಿಕಾರಿಗೆ ನೀಡಿದ ಸೂಚನೆಯಲ್ಲಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಬೂತ್ ಮಟ್ಟದ ಅಧಿಕಾರಿಗೆ (ಬಿಎಲ್ಒ) ಬೆದರಿಕೆ ಹಾಕಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ.</p>.<p>ಆರೋಪಿಯನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತ ಜಮೀರುಲ್ ಇಸ್ಲಾಂ ಮೊಲ್ಲಾ ಎಂದು ಗುರುತಿಸಲಾಗಿದೆ. 97 ವರ್ಷದ ವ್ಯಕ್ತಿಯೊಬ್ಬರ ಹೆಸರು 2002ರಲ್ಲಿನ ಮತದಾರರ ಪಟ್ಟಿಯಲ್ಲಿ ಕಾಣಿಸದೇ ಇರುವ ವಿಚಾರದಲ್ಲಿ ಜಮೀರುಲ್ ಅವರು ಬಿಎಲ್ಒ ಜತೆ ಜಗಳವಾಡಿದ್ದಾರೆ. ಆ ಬಳಿಕ ದೂರವಾಣಿ ಕರೆ ಮಾಡಿ ‘ಗಂಭೀರ ಪರಿಣಾಮ ಎದುರಿಸಬೇಕಾದೀತು’ ಎಂದು ಬೆದರಿಕೆ ಹಾಕಿದ್ದಾಗಿ ಆರೋಪಿಸಲಾಗಿದೆ.</p>.<p class="title">ಬಿಎಲ್ಒ ದೀಪಕ್ ಮಹಾತೊ ಈ ಸಂಬಂಧ ನಜಾತ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಬೆನ್ನಲ್ಲೇ ಬಂಧನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮೀರುಲ್ ಅವರನ್ನು ಟಿಎಂಸಿಯು ಬೂತ್ ಮಟ್ಟದ ಏಜೆಂಟ್ ಅಗಿ ನೇಮಿಸಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. </p>.<p>ಭಾವಚಿತ್ರ ಪರಿಶೀಲಿಸಲು ಸೂಚನೆ (ನವದೆಹಲಿ ವರದಿ): ಮತದಾರರ ಪಟ್ಟಿಯಲ್ಲಿರುವ ಭಾವಚಿತ್ರಗಳನ್ನು ಸರಿಯಾಗಿ ಪರಿಶೀಲಿಸಿ ಯಾವುದೇ ಲೋಪ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಅಸ್ಸಾಂನಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವ ಸಿಬ್ಬಂದಿಗೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.</p>.<p>ಬಿಹಾರದ ಮತದಾರರ ಪಟ್ಟಿಯಲ್ಲಿ ಕೆಲವು ಮತದಾರರ ಭಾವಚಿತ್ರದ ಜಾಗದಲ್ಲಿ ಬೆಕ್ಕು ಮತ್ತು ನಾಯಿಯ ಚಿತ್ರಗಳು ಇದ್ದವು ಎಂದು ವರದಿಯಾಗಿದ್ದವು. ಅಂತಹ ಲೋಪ ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಸ್ಸಾಂನ ಮುಖ್ಯ ಚುನಾವಣಾ ಅಧಿಕಾರಿಗೆ ನೀಡಿದ ಸೂಚನೆಯಲ್ಲಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>