ಇಂತೆಖಾಬ್ ಆಲಂ (21) ಬಂಧಿತ ವ್ಯಕ್ತಿ. ಈತ ಜನವರಿ 19ರಂದು 112 ತುರ್ತು ಸಹಾಯ ಸಂಖ್ಯೆಗೆ ಕರೆ ಮಾಡಿ, ‘ನನ್ನ ಹೆಸರು ಛೋಟಾ ಶಕೀಲ್. ನಾನು ದಾವೂದ್ ಇಬ್ರಾಹಿಂ ಸಹಚರ. ಜ.22ರಂದು ರಾಮಮಂದಿರವನ್ನು ಸ್ಫೋಟಿಸುತ್ತೇನೆ’ ಎಂದು ಹೇಳಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ.