ಈ ಬಗ್ಗೆ ರಾತ್ರಿ 11.30ರ ಸುಮಾರಿಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿದ್ದು, ಡಿಎನ್ಡಿ ಮೇಲ್ಸೇತುವೆ ಮೂಲಕ ನೋಯ್ಡಾಗೆ ತೆರಳುವ ವೇಳೆ ಘಟನೆ ನಡೆದಿದ್ದಾಗಿ ಕರೆ ಮಾಡಿದ ವ್ಯಕ್ತಿ ತಿಳಿಸಿದ್ದಾನೆ. ಲಜ್ಪತ್ನಗರದಲ್ಲಿ ಮಿನಿಬಸ್ ವ್ಯಕ್ತಿಗೆ ಗುದ್ದಿದ್ದು, ತುಸು ದೂರು ಎಳೆದುಕೊಂಡು ಹೋಗಿದೆ.
ಕರೆ ಮಾಡಿದ ವ್ಯಕ್ತಿ ಮಿನಿಬಸ್ ಅನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯ ಆಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಬಳಿಕ ಕರೆ ಮಾಡಿದ ವ್ಯಕ್ತಿಯನ್ನು ಸಂಪರ್ಕಿಸಿದಾಗ, ತಾನು ಉತ್ತರ ಪ್ರದೇಶದಲ್ಲಿರುವುದಾಗಿಯೂ, ದೆಹಲಿಗೆ ಬರಲು ಅಸಾಧ್ಯ ಎಂದು ಹೇಳಿದ್ದಾಗಿಯೂ ಪೊಲೀಸರು ತಿಳಿಸಿದ್ದಾರೆ.