ಗುರುಗ್ರಾಮ: ಹರಿಯಾಣದ ನೂಹ್ ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಮೆರವಣಿಗೆ ವೇಳೆ ಪ್ರಾರಂಭವಾದ ಘರ್ಷಣೆ ಪಕ್ಕದ ಗುರುಗ್ರಾಮ ಜಿಲ್ಲೆಗೂ ವ್ಯಾಪಿಸಿದೆ.
ಗುರುಗ್ರಾಮದ ಸೆಕ್ಟರ್ 57ರಲ್ಲಿ ಮಸೀದಿಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, 26 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಪೊಂದು ಬೆಂಕಿ ಹಂಚಿದ್ದು, ಇದರಲ್ಲಿ ಇಬ್ಬರು ಗಾಯಗೊಂಡಿದ್ದರು. ಆ ಪೈಕಿ ಓರ್ವ ಮೃತಪಟ್ಟಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಬಿಹಾರ ಮೂಲದ ಸಾದ್ ಎಂಬವರೇ ಮೃತಪಟ್ಟವರು. ನೂಹ್ನಲ್ಲಿ ಘರ್ಷಣೆ ಪ್ರಾರಂಭವಾದ ಬಳಿಕ ಈ ಸಂಬಂಧ ನಡೆದ ನಾಲ್ಕನೇ ಸಾವು ಇದಾಗಿದೆ.
ಸೆಕ್ಟರ್ 57ರಲ್ಲಿರುವ ಅಂಜುಮನ್ ಮಸೀದಿಗೆ ಮಧ್ಯರಾತ್ರಿ ಗುಂಪು ತಲಿಪಿದ್ದು, ಗುಂಪಿನಲ್ಲಿದ್ದವರು ಮಸೀದಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.