<p><strong>ಮುಂಬೈ:</strong> ಸಾರ್ವಜನಿಕ ಶೌಚಾಲಯ ಬಳಕೆ ಮಾಡಿ, ಹಣ ಪಾವತಿ ಮಾಡು ಎಂದಿದ್ದಕ್ಕೆ ವ್ಯಕ್ತಿಯೊಬ್ಬ, ಶೌಚಾಲಯ ನೋಡಿಕೊಳ್ಳುವ ಸಿಬ್ಬಂದಿಯನ್ನೇ ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ.</p>.<p>ಕೇಂದ್ರ ಮುಂಬೈ ದಾದರ್ನ ಬಸ್ ನಿಲ್ದಾಣದ ಮುಂಭಾಗದಲ್ಲಿ ಇರುವ ಸಾರ್ವಜನಿಕ ಶೌಚಾಲಯದ ಆವರಣದಲ್ಲಿ ಗುರುವಾರ ತಡರಾತ್ರಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆ ಸಂಬಂಧ ಆರೋಪಿ ರಾಹುಲ್ ಪವಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಶೌಚಾಲಯ ಬಳಕೆ ಮಾಡಿದ ಬಳಿಕ ಆರೋಪಿಯು, ಹಣ ಪಾವತಿ ಮಾಡದೆ ತೆರಳಲು ಯತ್ನಿಸಿದ್ದಾನೆ. ಈ ವೇಳೆ ಆತನನ್ನು ಶೌಚಾಲಯ ಸಿಬ್ಬಂದಿ ವಿಶ್ವಜೀತ್, ರಾಹುಲ್ನನ್ನು ತಡೆದಿದ್ದಾರೆ.</p>.<p>ಹಣ ಪಾವತಿ ಸಂಬಂಧ, ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಆರೋಪಿ ರಾಹುಲ್ ಚಾಕು ಹಾಗೂ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ವಿಶ್ವಜೀತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ಮಾತುಂಗಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಸಾರ್ವಜನಿಕ ಶೌಚಾಲಯ ಬಳಕೆ ಮಾಡಿ, ಹಣ ಪಾವತಿ ಮಾಡು ಎಂದಿದ್ದಕ್ಕೆ ವ್ಯಕ್ತಿಯೊಬ್ಬ, ಶೌಚಾಲಯ ನೋಡಿಕೊಳ್ಳುವ ಸಿಬ್ಬಂದಿಯನ್ನೇ ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ.</p>.<p>ಕೇಂದ್ರ ಮುಂಬೈ ದಾದರ್ನ ಬಸ್ ನಿಲ್ದಾಣದ ಮುಂಭಾಗದಲ್ಲಿ ಇರುವ ಸಾರ್ವಜನಿಕ ಶೌಚಾಲಯದ ಆವರಣದಲ್ಲಿ ಗುರುವಾರ ತಡರಾತ್ರಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆ ಸಂಬಂಧ ಆರೋಪಿ ರಾಹುಲ್ ಪವಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಶೌಚಾಲಯ ಬಳಕೆ ಮಾಡಿದ ಬಳಿಕ ಆರೋಪಿಯು, ಹಣ ಪಾವತಿ ಮಾಡದೆ ತೆರಳಲು ಯತ್ನಿಸಿದ್ದಾನೆ. ಈ ವೇಳೆ ಆತನನ್ನು ಶೌಚಾಲಯ ಸಿಬ್ಬಂದಿ ವಿಶ್ವಜೀತ್, ರಾಹುಲ್ನನ್ನು ತಡೆದಿದ್ದಾರೆ.</p>.<p>ಹಣ ಪಾವತಿ ಸಂಬಂಧ, ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಆರೋಪಿ ರಾಹುಲ್ ಚಾಕು ಹಾಗೂ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ವಿಶ್ವಜೀತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ಮಾತುಂಗಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>