‘ಕೊಲೆಗಾರ ವಿಕ್ರಮ್ ಮತ್ತು ಮಗುವಿನ ತಾಯಿ ಕಿರಣಾ ನಡುವೆ ಅಕ್ರಮ ಸಂಬಂಧವಿತ್ತು. ಕಿರಣಾಳನ್ನು ಮದುವೆಯಾಗಲು ವಿಕ್ರಮ್ ಬಯಸಿದ್ದು, ತನ್ನನ್ನು ಮದುವೆಯಾಗುವಂತೆ ಕಿರಣಾ ಬಳಿ ಕೇಳಿದ್ದಾನೆ. ಮದುವೆಯಾಗಲು ಕಿರಣಾ ನಿರಾಕರಿಸಿದ್ದು, ಇದೇ ಕೋಪಕ್ಕೆ ಮಗುವನ್ನು ಕೊಂದಿದ್ದಾನೆ‘ ಎಂದು ಹಿರಿಯ ಇನ್ಸ್ಪೆಕ್ಟರ್ ವೈಭವ್ ಶಿಂಗಾರೆ ಹೇಳಿದ್ದಾರೆ
‘ಈ ಕೃತ್ಯ ನಡೆಯುವ ವೇಳೆ ಮಗುವಿನ ತಾಯಿ ಇದ್ದಳು. ಭಯದಿಂದ ವಿಷಯವನ್ನು ಪೊಲೀಸರಿಗೆ ತಿಳಿಸಿರಲಿಲ್ಲ. ಇದೀಗ ದೂರು ನೀಡಿದ್ದಾರೆ‘ ಎಂದು ಪೊಲೀಸರು ತಿಳಿಸಿದ್ದಾರೆ.
‘ನಾನು ಮದುವೆಯಾಗಲು ನಿರಾಕರಿಸುವುದೇ ನನ್ನ ಮಗುವಿನ ಕೊಲೆಗೆ ಕಾರಣವಾಗಿದೆ ಎಂದು ಕಿರಣಾ ದೂರಿನಲ್ಲಿ ಉಲ್ಲೇಖಸಿದ್ದಾರೆ. ದೂರಿನನ್ವಯ ವಿಕ್ರಮ್ನನ್ನು ಬಂಧಿಸಲಾಗಿದೆ' ಎಂದು ಪೊಲೀಸರು ಹೇಳಿದ್ದಾರೆ.