<p><strong>ಇಂದೋರ್</strong>, <strong>ಮಧ್ಯಪ್ರದೇಶ</strong>: ನಾಯಿಯೊಂದು ತನ್ನನ್ನು ನೋಡಿ ನಿರಂತರವಾಗಿ ಬೊಗಳಿದ್ದಕ್ಕೆ ಸಿಟ್ಟಿಗೆದ್ದ ಯುವಕನೊಬ್ಬ ನಾಯಿ ಸಾಕಿದ್ದ ಮಹಿಳೆಯೊಂದಿಗೆ ವಾಗ್ವಾದ ನಡೆಸಿ ಬಳಿಕ ಆಕೆಯನ್ನು ಒದ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p>.<p>ಶಾಂತಿನಗರದ ನಿವಾಸಿಯಾಗಿರುವ ಯುವಕ ಶನಿವಾರ ರಾತ್ರಿ ತನ್ನ ಅಂಗಡಿ ಮುಚ್ಚಿ ಮನೆಗೆ ತೆರಳುವಾಗ ಆತನನ್ನು ನೋಡಿ ನಾಯಿ ನಿರಂತರವಾಗಿ ಬೊಗಳತೊಡಗಿತು. ಇದೇ ಕಾರಣಕ್ಕೆ ಯುವಕ ರಸ್ತೆಯಲ್ಲಿ ಮುಂದೆ ಹೋಗಲು ಆಗಲಿಲ್ಲ. ಆತ ಜೋರಾಗಿ ಕಿರುಚತೊಡಗಿದ.</p>.<p>ಆಗ ನಾಯಿಯನ್ನು ಸಾಕಿದ್ದ ಮಹಿಳೆ (65) ಮನೆಯಿಂದ ಹೊರಬಂದರು. ಈ ವೇಳೆ ಅವರೊಂದಿಗೆ ವಾಗ್ವಾದ ನಡೆಸಿದ ಯುವಕ ಆಕೆಯ ಹೊಟ್ಟೆಗೆ ಒದ್ದ ಕಾರಣ ಮಹಿಳೆ ರಸ್ತೆಯಲ್ಲಿ ಬಿದ್ದರು ಎಂದು ಆಜಾದ್ನಗರ ಪೊಲೀಸ್ಠಾಣೆಯ ನೀರಜ್ ಮೆಧಾ ತಿಳಿಸಿದ್ದಾರೆ.</p>.<p>ಮಹಿಳೆಯನ್ನು ಕೆಲವರು ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಅಲ್ಲಿ ಅವರು ಮೃತಪಟ್ಟರು. ಯುವಕನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್</strong>, <strong>ಮಧ್ಯಪ್ರದೇಶ</strong>: ನಾಯಿಯೊಂದು ತನ್ನನ್ನು ನೋಡಿ ನಿರಂತರವಾಗಿ ಬೊಗಳಿದ್ದಕ್ಕೆ ಸಿಟ್ಟಿಗೆದ್ದ ಯುವಕನೊಬ್ಬ ನಾಯಿ ಸಾಕಿದ್ದ ಮಹಿಳೆಯೊಂದಿಗೆ ವಾಗ್ವಾದ ನಡೆಸಿ ಬಳಿಕ ಆಕೆಯನ್ನು ಒದ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p>.<p>ಶಾಂತಿನಗರದ ನಿವಾಸಿಯಾಗಿರುವ ಯುವಕ ಶನಿವಾರ ರಾತ್ರಿ ತನ್ನ ಅಂಗಡಿ ಮುಚ್ಚಿ ಮನೆಗೆ ತೆರಳುವಾಗ ಆತನನ್ನು ನೋಡಿ ನಾಯಿ ನಿರಂತರವಾಗಿ ಬೊಗಳತೊಡಗಿತು. ಇದೇ ಕಾರಣಕ್ಕೆ ಯುವಕ ರಸ್ತೆಯಲ್ಲಿ ಮುಂದೆ ಹೋಗಲು ಆಗಲಿಲ್ಲ. ಆತ ಜೋರಾಗಿ ಕಿರುಚತೊಡಗಿದ.</p>.<p>ಆಗ ನಾಯಿಯನ್ನು ಸಾಕಿದ್ದ ಮಹಿಳೆ (65) ಮನೆಯಿಂದ ಹೊರಬಂದರು. ಈ ವೇಳೆ ಅವರೊಂದಿಗೆ ವಾಗ್ವಾದ ನಡೆಸಿದ ಯುವಕ ಆಕೆಯ ಹೊಟ್ಟೆಗೆ ಒದ್ದ ಕಾರಣ ಮಹಿಳೆ ರಸ್ತೆಯಲ್ಲಿ ಬಿದ್ದರು ಎಂದು ಆಜಾದ್ನಗರ ಪೊಲೀಸ್ಠಾಣೆಯ ನೀರಜ್ ಮೆಧಾ ತಿಳಿಸಿದ್ದಾರೆ.</p>.<p>ಮಹಿಳೆಯನ್ನು ಕೆಲವರು ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಅಲ್ಲಿ ಅವರು ಮೃತಪಟ್ಟರು. ಯುವಕನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>