<p><strong>ಕೋಟ (ರಾಜಸ್ಥಾನ):</strong> ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಆರು ವರ್ಷದ ಮಗನನ್ನು ಹತ್ಯೆಗೈದು ಬಾವಿಗೆ ಎಸೆದಿರುವ ಘಟನೆ ರಾಜಸ್ಥಾನದ ಜಲವಾರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p>.<p>ಆರೋಪಿ ಗೋಕುಲ್ ಸಿಂಗ್ ಸೊಂಧ್ಯಾ ರಜಪೂತ್ (28) ಮದ್ಯವ್ಯಸನಿಯಾಗಿದ್ದು, ಮೃತದೇಹಗಳನ್ನು ತೋಟದಲ್ಲಿರುವ ಬಾವಿಗೆ ಎಸೆದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸರ್ಕಲ್ ಅಧಿಕಾರಿ ಬ್ರಿಜ್ಮೋಹನ್ ಮೀನಾ ತಿಳಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/delhi-police-receives-complaint-against-swara-bhaskar-twitter-india-md-in-ghaziabad-assault-case-839672.html" itemprop="url">ಗಾಜಿಯಾಬಾದ್ ಹಲ್ಲೆ ಪ್ರಕರಣ: ನಟಿ, ಟ್ವಿಟರ್ ಎಂಡಿ ವಿರುದ್ಧ ಪೊಲೀಸರಿಗೆ ದೂರು </a></p>.<p>ಚನ್ ಗ್ರಾಮದಲ್ಲಿ ಪತ್ನಿ ರಾಮ್ಕುನ್ವಾರ್ (25) ಹಾಗೂ ಮಗ ಇಶ್ವರ್ ಸಿಂಗ್ ಅವರನ್ನು ಬುಧವಾರ ಬೆಳಗ್ಗೆ ಹತ್ಯೆಗೈಯಲಾಗಿದೆಎಂದು ಡಿಎಸ್ಪಿ ತಿಳಿಸಿದ್ದಾರೆ.</p>.<p>ಸಂಜೆಯ ವೇಳೆಗೆ ಬಾವಿಯಲ್ಲಿ ಮೃತದೇಹ ತೇಲಾಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ತಲುಪಿಸಿದ್ದರು. ಬಳಿಕ ಮೃತದೇಹವನ್ನು ಹೊರತೆಗೆಯಲಾಯಿತು. ಮರಣೋತ್ತರ ಪರೀಕ್ಷೆಯ ಬಳಿಕ ಅಂತ್ಯ ಸಂಸ್ಕಾರಕ್ಕಾಗಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.</p>.<p>ಏಳೆಂಟು ವರ್ಷಗಳಿಂದ ಗೋಕಲ್ ಹಾಗೂ ಪತ್ನಿ ಜೊತೆಯಾಗಿ ವಾಸಿಸುತ್ತಿದ್ದಾರೆ. ಆದರೆ ಕೊಲೆಯ ಹಿಂದಿನ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಟ (ರಾಜಸ್ಥಾನ):</strong> ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಆರು ವರ್ಷದ ಮಗನನ್ನು ಹತ್ಯೆಗೈದು ಬಾವಿಗೆ ಎಸೆದಿರುವ ಘಟನೆ ರಾಜಸ್ಥಾನದ ಜಲವಾರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p>.<p>ಆರೋಪಿ ಗೋಕುಲ್ ಸಿಂಗ್ ಸೊಂಧ್ಯಾ ರಜಪೂತ್ (28) ಮದ್ಯವ್ಯಸನಿಯಾಗಿದ್ದು, ಮೃತದೇಹಗಳನ್ನು ತೋಟದಲ್ಲಿರುವ ಬಾವಿಗೆ ಎಸೆದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸರ್ಕಲ್ ಅಧಿಕಾರಿ ಬ್ರಿಜ್ಮೋಹನ್ ಮೀನಾ ತಿಳಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/delhi-police-receives-complaint-against-swara-bhaskar-twitter-india-md-in-ghaziabad-assault-case-839672.html" itemprop="url">ಗಾಜಿಯಾಬಾದ್ ಹಲ್ಲೆ ಪ್ರಕರಣ: ನಟಿ, ಟ್ವಿಟರ್ ಎಂಡಿ ವಿರುದ್ಧ ಪೊಲೀಸರಿಗೆ ದೂರು </a></p>.<p>ಚನ್ ಗ್ರಾಮದಲ್ಲಿ ಪತ್ನಿ ರಾಮ್ಕುನ್ವಾರ್ (25) ಹಾಗೂ ಮಗ ಇಶ್ವರ್ ಸಿಂಗ್ ಅವರನ್ನು ಬುಧವಾರ ಬೆಳಗ್ಗೆ ಹತ್ಯೆಗೈಯಲಾಗಿದೆಎಂದು ಡಿಎಸ್ಪಿ ತಿಳಿಸಿದ್ದಾರೆ.</p>.<p>ಸಂಜೆಯ ವೇಳೆಗೆ ಬಾವಿಯಲ್ಲಿ ಮೃತದೇಹ ತೇಲಾಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ತಲುಪಿಸಿದ್ದರು. ಬಳಿಕ ಮೃತದೇಹವನ್ನು ಹೊರತೆಗೆಯಲಾಯಿತು. ಮರಣೋತ್ತರ ಪರೀಕ್ಷೆಯ ಬಳಿಕ ಅಂತ್ಯ ಸಂಸ್ಕಾರಕ್ಕಾಗಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.</p>.<p>ಏಳೆಂಟು ವರ್ಷಗಳಿಂದ ಗೋಕಲ್ ಹಾಗೂ ಪತ್ನಿ ಜೊತೆಯಾಗಿ ವಾಸಿಸುತ್ತಿದ್ದಾರೆ. ಆದರೆ ಕೊಲೆಯ ಹಿಂದಿನ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>