<p><strong>ಭದೋಹಿ (ಉತ್ತರ ಪ್ರದೇಶ):</strong> ಸಂಸತ್ ಭವನದ ಆವರಣ ಗೋಡೆ ಏರಲು ಯತ್ನಿಸಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡಲಾಗಿದೆ.</p>.<p>ಕೇಂದ್ರೀಯ ಸಂಸ್ಥೆಗಳ ವಿಚಾರಣೆಯ ನಂತರ ರಾಮ್ ಶಂಕರ್ ಬಿಂದ್ (20) ಅವರನ್ನು ಭಾನುವಾರ ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.</p>.<p>ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ರಾಮ್ ಶುಕ್ರವಾರ ಬೆಳಿಗ್ಗೆ ಸಂಸತ್ ಭವನದ ಆವರಣ ಗೋಡೆ ಏರಲು ಯತ್ನಿಸಿದ್ದರು. ಭದ್ರತಾ ಸಿಬ್ಬಂದಿ ಅವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಬಂಧನದ ವೇಳೆ ಅವರು ಮಾನಸಿಕ ಅಸ್ವಸ್ಥನಂತೆ ಕಂಡುಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆವರಣ ಗೋಡೆಯ ಬದಿಯಲ್ಲಿರುವ ಮರವನ್ನು ಹತ್ತುವ ಮೂಲಕ ರಾಮ್ ಸಂಸತ್ ಭವನವನ್ನು ಪ್ರವೇಶಿಸಲು ಯತ್ನಿಸಿದ್ದರು. ಕೃತ್ಯದ ಹಿಂದಿನ ಕಾರಣ ತಿಳಿಯಲು ಗುಪ್ತಚರ ವಿಭಾಗ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ದೆಹಲಿ ಪೊಲೀಸ್ ವಿಶೇಷ ಘಟಕವು ಅವರನ್ನು ವಿಚಾರಣೆಗೆ ಒಳಪಡಿಸಿದ್ದವು.</p> .ಸಂಸತ್ನ ಆವರಣ ಗೋಡೆ ಏರಲು ಯತ್ನ: ಯುವಕ ಪೊಲೀಸ್ ವಶಕ್ಕೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದೋಹಿ (ಉತ್ತರ ಪ್ರದೇಶ):</strong> ಸಂಸತ್ ಭವನದ ಆವರಣ ಗೋಡೆ ಏರಲು ಯತ್ನಿಸಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡಲಾಗಿದೆ.</p>.<p>ಕೇಂದ್ರೀಯ ಸಂಸ್ಥೆಗಳ ವಿಚಾರಣೆಯ ನಂತರ ರಾಮ್ ಶಂಕರ್ ಬಿಂದ್ (20) ಅವರನ್ನು ಭಾನುವಾರ ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.</p>.<p>ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ರಾಮ್ ಶುಕ್ರವಾರ ಬೆಳಿಗ್ಗೆ ಸಂಸತ್ ಭವನದ ಆವರಣ ಗೋಡೆ ಏರಲು ಯತ್ನಿಸಿದ್ದರು. ಭದ್ರತಾ ಸಿಬ್ಬಂದಿ ಅವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಬಂಧನದ ವೇಳೆ ಅವರು ಮಾನಸಿಕ ಅಸ್ವಸ್ಥನಂತೆ ಕಂಡುಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆವರಣ ಗೋಡೆಯ ಬದಿಯಲ್ಲಿರುವ ಮರವನ್ನು ಹತ್ತುವ ಮೂಲಕ ರಾಮ್ ಸಂಸತ್ ಭವನವನ್ನು ಪ್ರವೇಶಿಸಲು ಯತ್ನಿಸಿದ್ದರು. ಕೃತ್ಯದ ಹಿಂದಿನ ಕಾರಣ ತಿಳಿಯಲು ಗುಪ್ತಚರ ವಿಭಾಗ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ದೆಹಲಿ ಪೊಲೀಸ್ ವಿಶೇಷ ಘಟಕವು ಅವರನ್ನು ವಿಚಾರಣೆಗೆ ಒಳಪಡಿಸಿದ್ದವು.</p> .ಸಂಸತ್ನ ಆವರಣ ಗೋಡೆ ಏರಲು ಯತ್ನ: ಯುವಕ ಪೊಲೀಸ್ ವಶಕ್ಕೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>