ಪ್ರಾಥಮಿಕ ವರದಿಗಳ ಪ್ರಕಾರ ರಾಜೇಶ್ ಅವರ ಮಕ್ಕಳು ನಿರುದ್ಯೋಗಿಗಳಾಗಿದ್ದು ಇದರಿಂದ ಅವರು ಬೇಸತ್ತಿದ್ದರು. ರಾಜೇಶ್ ಅವರು ಕೆಲವು ದಿನಗಳ ಹಿಂದೆ ನವದೆಹಲಿಯ ಹರ್ಯಾಣ ಭವನದಲ್ಲಿ ಖಟ್ಟರ್ ಅವರನ್ನು ಭೇಟಿಯಾಗಿ ಮಕ್ಕಳ ನಿರುದ್ಯೋಗದ ಬಗ್ಗೆ ಹೇಳಿದ್ದರು. ಮಕ್ಕಳಿಗೆ ಗ್ರೂಪ್ ಡಿ ಹುದ್ದೆ ನೀಡುವುದಾಗಿ ಖಟ್ಟರ್ಭರವಸೆ ನೀಡಿದ್ದರು. ಆದರೆ ಮುಖ್ಯಮಂತ್ರಿ ಭರವಸೆ ಪೂರೈಸದೇ ಇದ್ದಾಗ ರಾಜೇಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.