<p><strong>ಮುಂಬೈ</strong>: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ನಿವಾಸದ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ 39 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p><p>ಬುಧವಾರ ದಕ್ಷಿಣ ಮುಂಬೈನಲ್ಲಿರುವ ಮುಖ್ಯಮಂತ್ರಿಯವರ ಅಧಿಕೃತ ನಿವಾಸ 'ವರ್ಷ'ದ ಹೊರಗೆ ವ್ಯಕ್ತಿ ಬಂದು ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ, ಆದರೆ ಅಂತಹ ಯಾವುದೇ ಕೃತ್ಯಕ್ಕೆ ಮುಂದಾಗುವ ಮೊದಲೇ ಆತನನ್ನು ಬಂಧಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪೊಲೀಸರು ಆತನಿಂದ 100 ಮಿಲಿ ಪೆಟ್ರೋಲ್ ಬಾಟಲಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.</p><p>ಆತ್ಮಹತ್ಯೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಸೋಲಾಪುರ ಜಿಲ್ಲೆಯ ನಿವಾಸಿ ಅಜಿತ್ ಮೈದಗಿ ಎಂದು ಗುರುತಿಸಲಾದೆ. ಅಜಿತ್ ಯಾವುದೋ ಕೆಲಸಕ್ಕಾಗಿ ರಾಜ್ಯದ ಇಲಾಖೆಯೊಂದರ ಕಚೇರಿಗೆ ಹೋಗಿದ್ದರು. ಕೆಲಸ ಆಗದಿದ್ದಾಗ ಅಸಮಾಧಾನಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ನಂತರ ಆ ವ್ಯಕ್ತಿಯನ್ನು ಮಲಬಾರ್ ಹಿಲ್ ಪೊಲೀಸ್ ಠಾಣೆಗೆ ಕರೆದೊಯ್ದು, ಪ್ರಕರಣ ದಾಖಲಿಸಲಾಯಿತು ಎಂದು ಅವರು ಹೇಳಿದ್ದಾರೆ.</p><p>ಪೊಲೀಸರು ಅವನಿಗೆ ಕೌನ್ಸೆಲಿಂಗ್ ಸಹ ಮನೀಡಿದರು ಎಂದು ಅಧಿಕಾರಿ ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ನಿವಾಸದ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ 39 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p><p>ಬುಧವಾರ ದಕ್ಷಿಣ ಮುಂಬೈನಲ್ಲಿರುವ ಮುಖ್ಯಮಂತ್ರಿಯವರ ಅಧಿಕೃತ ನಿವಾಸ 'ವರ್ಷ'ದ ಹೊರಗೆ ವ್ಯಕ್ತಿ ಬಂದು ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ, ಆದರೆ ಅಂತಹ ಯಾವುದೇ ಕೃತ್ಯಕ್ಕೆ ಮುಂದಾಗುವ ಮೊದಲೇ ಆತನನ್ನು ಬಂಧಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪೊಲೀಸರು ಆತನಿಂದ 100 ಮಿಲಿ ಪೆಟ್ರೋಲ್ ಬಾಟಲಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.</p><p>ಆತ್ಮಹತ್ಯೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಸೋಲಾಪುರ ಜಿಲ್ಲೆಯ ನಿವಾಸಿ ಅಜಿತ್ ಮೈದಗಿ ಎಂದು ಗುರುತಿಸಲಾದೆ. ಅಜಿತ್ ಯಾವುದೋ ಕೆಲಸಕ್ಕಾಗಿ ರಾಜ್ಯದ ಇಲಾಖೆಯೊಂದರ ಕಚೇರಿಗೆ ಹೋಗಿದ್ದರು. ಕೆಲಸ ಆಗದಿದ್ದಾಗ ಅಸಮಾಧಾನಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ನಂತರ ಆ ವ್ಯಕ್ತಿಯನ್ನು ಮಲಬಾರ್ ಹಿಲ್ ಪೊಲೀಸ್ ಠಾಣೆಗೆ ಕರೆದೊಯ್ದು, ಪ್ರಕರಣ ದಾಖಲಿಸಲಾಯಿತು ಎಂದು ಅವರು ಹೇಳಿದ್ದಾರೆ.</p><p>ಪೊಲೀಸರು ಅವನಿಗೆ ಕೌನ್ಸೆಲಿಂಗ್ ಸಹ ಮನೀಡಿದರು ಎಂದು ಅಧಿಕಾರಿ ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>