<p><strong>ಬಹ್ರೈಚ್ (ಉತ್ತರ ಪ್ರದೇಶ):</strong> ಚಿರತೆಯನ್ನು ಸೆರೆಹಿಡಿಯಲು ಇರಿಸಲಾಗಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಫಖ್ರ್ಪುರ ಪ್ರದೇಶದ ಉಮ್ರಿ ದೆಹಲೋ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಪ್ರದೀಪ್ ಕುಡಿದ ಮತ್ತಿನಲ್ಲಿ ಬಲೆಗೆ ಬಿದ್ದಿದ್ದಾನೆ ಎನ್ನಲಾಗಿದೆ. ಆತ ಬೋನಿನ ಒಳಗೆ ಕಾಲಿಟ್ಟ ತಕ್ಷಣ, ಸ್ವಯಂಚಾಲಿತ ಬಾಗಿಲು ಮುಚ್ಚಿಕೊಂಡಿದೆ. ಆಗ ಆತ ಬೋನಿನಲ್ಲಿ ಸಿಲುಕಿದ್ದಾನೆ ಎಂದು ಅವರು ಹೇಳಿದ್ದಾರೆ.</p><p>ಸಿಕ್ಕಿಬಿದ್ದ ವ್ಯಕ್ತಿ ಸಹಾಯಕ್ಕಾಗಿ ಕೂಗಿದ್ದಾನೆ. ಮೊಬೈಲ್ ಫೋನ್ ಮೂಲಕ ಕರೆ ಮಾಡಿ ಗ್ರಾಮಸ್ಥರನ್ನು ಸಂಪರ್ಕಿಸಿದ್ದಾನೆ. ಬಳಿಕ, ಗ್ರಾಮದ ಮುಖ್ಯಸ್ಥರು, ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p><p>ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರ ಜಂಟಿ ತಂಡ ಸ್ಥಳಕ್ಕೆ ಆಗಮಿಸಿ ವ್ಯಕ್ತಿಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಈ ಕಾರ್ಯಾಚರಣೆ ನಡೆದಿದೆ. ಬಳಿಕ, ಆತನನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಲಾಗಿದೆ ಎಂದು ವಿಭಾಗೀಯ ಅರಣ್ಯ ಅಧಿಕಾರಿ(ಡಿಎಫ್ಒ) ರಾಮ್ ಸಿಂಗ್ ಯಾದವ್ ಪಿಟಿಐಗೆ ತಿಳಿಸಿದ್ದಾರೆ.</p><p>ಆ ವ್ಯಕ್ತಿ ಮದ್ಯದ ಅಮಲಿನಲ್ಲಿದ್ದಂತೆ ಕಂಡುಬಂದಿದೆ ಎಂದು ಯಾದವ್ ಹೇಳಿದ್ದಾರೆ. ಕುತೂಹಲದಿಂದಲೋ ಅಥವಾ ಬೇರೆ ಯಾವುದೋ ಕಾರಣದಿಂದಾಗಿಯೋ ಆತ ಬೋನಿಗೆ ಏಕೆ ಪ್ರವೇಶಿಸಿದನು ಎಂಬುದು ಸ್ಪಷ್ಟವಾಗಿಲ್ಲ. ಆದರೆ, ಅವನ ಕೃತ್ಯ ಖಂಡಿತವಾಗಿಯೂ ತಪ್ಪಾಗಿತ್ತು. ರಾತ್ರಿ ಸಮಯ ಚಿರತೆಗಳು ಹೆಚ್ಚು ಚಟುವಟಿಕೆಯಿದಿರುತ್ತವೆ. ಆ ಸಮಯ.ಗ್ರಾಮಸ್ಥರು ಮನೆಯೊಳಗೇ ಇರಬೇಕೆಂದು ನಾವು ಎಚ್ಚರಿಕೆ ನೀಡಿದ್ದೇವೆ. ಈ ಅತ್ಯಂತ ಅಪಾಯಕಾರಿ ವಲಯದಲ್ಲಿ ಅಲೆದಾಡುವವರು ವನ್ಯಜೀವಿಗಳ ದಾಳಿಗೆ ಗುರಿಯಾಗುವ ಅಪಾಯವಿದೆ ಎಂದು ಅವರು ಹೇಳಿದ್ದಾರೆ.</p><p>ಬುಧವಾರ ಸಂಜೆ ಚಿರತೆ ದಾಳಿಯಲ್ಲಿ 55 ವರ್ಷದ ಶಾಂತಿ ದೇವಿ ಎಂಬ ಮಹಿಳೆ ಸಾವಿಗೀಡಾಗಿದ್ದು, ಚಿರತೆಯನ್ನು ಸೆರೆಹಿಡಿಯಲು, ಗ್ರಾಮದ ಹೊರವಲಯದಲ್ಲಿ ಒಂದು ಬೋನನ್ನು ಇಡಲಾಗಿತ್ತು. ಅದರೊಳಗೆ ಒಂದು ಮೇಕೆಯನ್ನು ಕಟ್ಟಲಾಗಿತ್ತು ಎಂದು ಡಿಎಫ್ಒ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಹ್ರೈಚ್ (ಉತ್ತರ ಪ್ರದೇಶ):</strong> ಚಿರತೆಯನ್ನು ಸೆರೆಹಿಡಿಯಲು ಇರಿಸಲಾಗಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಫಖ್ರ್ಪುರ ಪ್ರದೇಶದ ಉಮ್ರಿ ದೆಹಲೋ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಪ್ರದೀಪ್ ಕುಡಿದ ಮತ್ತಿನಲ್ಲಿ ಬಲೆಗೆ ಬಿದ್ದಿದ್ದಾನೆ ಎನ್ನಲಾಗಿದೆ. ಆತ ಬೋನಿನ ಒಳಗೆ ಕಾಲಿಟ್ಟ ತಕ್ಷಣ, ಸ್ವಯಂಚಾಲಿತ ಬಾಗಿಲು ಮುಚ್ಚಿಕೊಂಡಿದೆ. ಆಗ ಆತ ಬೋನಿನಲ್ಲಿ ಸಿಲುಕಿದ್ದಾನೆ ಎಂದು ಅವರು ಹೇಳಿದ್ದಾರೆ.</p><p>ಸಿಕ್ಕಿಬಿದ್ದ ವ್ಯಕ್ತಿ ಸಹಾಯಕ್ಕಾಗಿ ಕೂಗಿದ್ದಾನೆ. ಮೊಬೈಲ್ ಫೋನ್ ಮೂಲಕ ಕರೆ ಮಾಡಿ ಗ್ರಾಮಸ್ಥರನ್ನು ಸಂಪರ್ಕಿಸಿದ್ದಾನೆ. ಬಳಿಕ, ಗ್ರಾಮದ ಮುಖ್ಯಸ್ಥರು, ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p><p>ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರ ಜಂಟಿ ತಂಡ ಸ್ಥಳಕ್ಕೆ ಆಗಮಿಸಿ ವ್ಯಕ್ತಿಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಈ ಕಾರ್ಯಾಚರಣೆ ನಡೆದಿದೆ. ಬಳಿಕ, ಆತನನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಲಾಗಿದೆ ಎಂದು ವಿಭಾಗೀಯ ಅರಣ್ಯ ಅಧಿಕಾರಿ(ಡಿಎಫ್ಒ) ರಾಮ್ ಸಿಂಗ್ ಯಾದವ್ ಪಿಟಿಐಗೆ ತಿಳಿಸಿದ್ದಾರೆ.</p><p>ಆ ವ್ಯಕ್ತಿ ಮದ್ಯದ ಅಮಲಿನಲ್ಲಿದ್ದಂತೆ ಕಂಡುಬಂದಿದೆ ಎಂದು ಯಾದವ್ ಹೇಳಿದ್ದಾರೆ. ಕುತೂಹಲದಿಂದಲೋ ಅಥವಾ ಬೇರೆ ಯಾವುದೋ ಕಾರಣದಿಂದಾಗಿಯೋ ಆತ ಬೋನಿಗೆ ಏಕೆ ಪ್ರವೇಶಿಸಿದನು ಎಂಬುದು ಸ್ಪಷ್ಟವಾಗಿಲ್ಲ. ಆದರೆ, ಅವನ ಕೃತ್ಯ ಖಂಡಿತವಾಗಿಯೂ ತಪ್ಪಾಗಿತ್ತು. ರಾತ್ರಿ ಸಮಯ ಚಿರತೆಗಳು ಹೆಚ್ಚು ಚಟುವಟಿಕೆಯಿದಿರುತ್ತವೆ. ಆ ಸಮಯ.ಗ್ರಾಮಸ್ಥರು ಮನೆಯೊಳಗೇ ಇರಬೇಕೆಂದು ನಾವು ಎಚ್ಚರಿಕೆ ನೀಡಿದ್ದೇವೆ. ಈ ಅತ್ಯಂತ ಅಪಾಯಕಾರಿ ವಲಯದಲ್ಲಿ ಅಲೆದಾಡುವವರು ವನ್ಯಜೀವಿಗಳ ದಾಳಿಗೆ ಗುರಿಯಾಗುವ ಅಪಾಯವಿದೆ ಎಂದು ಅವರು ಹೇಳಿದ್ದಾರೆ.</p><p>ಬುಧವಾರ ಸಂಜೆ ಚಿರತೆ ದಾಳಿಯಲ್ಲಿ 55 ವರ್ಷದ ಶಾಂತಿ ದೇವಿ ಎಂಬ ಮಹಿಳೆ ಸಾವಿಗೀಡಾಗಿದ್ದು, ಚಿರತೆಯನ್ನು ಸೆರೆಹಿಡಿಯಲು, ಗ್ರಾಮದ ಹೊರವಲಯದಲ್ಲಿ ಒಂದು ಬೋನನ್ನು ಇಡಲಾಗಿತ್ತು. ಅದರೊಳಗೆ ಒಂದು ಮೇಕೆಯನ್ನು ಕಟ್ಟಲಾಗಿತ್ತು ಎಂದು ಡಿಎಫ್ಒ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>