<p><strong>ನವದೆಹಲಿ (ಪಿಟಿಐ):</strong> ‘ವಿವಾಹದ ಪ್ರಸ್ತಾಪವನ್ನು ನಿರಾಕರಿಸಿದ ಯುವತಿಯನ್ನು ಸುಮಾರು 13 ಬಾರಿ ಇರಿದ 27 ವರ್ಷದ ಯುವಕನೊಬ್ಬನನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ಗೌರವ್ ಪಾಲ್ ಬಂಧಿತ ಯುವಕ. ದಕ್ಷಿಣ ದೆಹಲಿಯ ಲಡೋ ಸರಾಯಿ ಪ್ರದೇಶದಲ್ಲಿ ಯುವತಿಗೆ ಗುರುವಾರ ಮುಂಜಾನೆ ಇರಿಯಲಾಗಿದೆ’ ಎಂದಿದ್ದಾರೆ.</p>.<p>‘ಗೌರವ್ ಪಾಲ್ನ ಚಿಕ್ಕಪ್ಪ ಸೇರಿದಂತೆ ಇಬ್ಬರು ಸಂಬಂಧಿಕರು ಕಳೆದ ತಿಂಗಳು ವಿವಾಹ ಪ್ರಸ್ತಾಪದೊಂದಿಗೆ ಯುವತಿಯ ಕುಟುಂಬವನ್ನು ಭೇಟಿಯಾಗಿದ್ದರು. ಆದರೆ ಜಾತಿಯ ಕಾರಣದಿಂದ ಯುವತಿಯ ತಾಯಿ ಪ್ರಸ್ತಾಪವನ್ನು ತಿರಸ್ಕರಿಸಿದ್ದರು. ಅಲ್ಲದೇ ಯುವತಿ ಸಹ ಪಾಲ್ನ ಮೊಬೈಲ್ ಸಂಖ್ಯೆಯನ್ನು ನಿರ್ಬಂಧಿಸಿದ್ದರು. ಇದನ್ನು ಸಹಿಸಿಕೊಳ್ಳಲಾಗದೇ ಪಾಲ್ ಈ ಕೃತ್ಯ ಎಸಗಿದ್ದಾನೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಆರೋಪಿಯು ಯುವತಿಯ ಮುಖ, ತೊಡೆ ಹಾಗೂ ಕೈಗಳಿಗೆ ಚಾಕುವಿನಿಂದ ಇರಿದಿದ್ದಾನೆ. ಆತನ ವಿರುದ್ಧ ಸೆಕ್ಷನ್ 307ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದು, ಯುವತಿ ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ’ ಎಂದೂ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ‘ವಿವಾಹದ ಪ್ರಸ್ತಾಪವನ್ನು ನಿರಾಕರಿಸಿದ ಯುವತಿಯನ್ನು ಸುಮಾರು 13 ಬಾರಿ ಇರಿದ 27 ವರ್ಷದ ಯುವಕನೊಬ್ಬನನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ಗೌರವ್ ಪಾಲ್ ಬಂಧಿತ ಯುವಕ. ದಕ್ಷಿಣ ದೆಹಲಿಯ ಲಡೋ ಸರಾಯಿ ಪ್ರದೇಶದಲ್ಲಿ ಯುವತಿಗೆ ಗುರುವಾರ ಮುಂಜಾನೆ ಇರಿಯಲಾಗಿದೆ’ ಎಂದಿದ್ದಾರೆ.</p>.<p>‘ಗೌರವ್ ಪಾಲ್ನ ಚಿಕ್ಕಪ್ಪ ಸೇರಿದಂತೆ ಇಬ್ಬರು ಸಂಬಂಧಿಕರು ಕಳೆದ ತಿಂಗಳು ವಿವಾಹ ಪ್ರಸ್ತಾಪದೊಂದಿಗೆ ಯುವತಿಯ ಕುಟುಂಬವನ್ನು ಭೇಟಿಯಾಗಿದ್ದರು. ಆದರೆ ಜಾತಿಯ ಕಾರಣದಿಂದ ಯುವತಿಯ ತಾಯಿ ಪ್ರಸ್ತಾಪವನ್ನು ತಿರಸ್ಕರಿಸಿದ್ದರು. ಅಲ್ಲದೇ ಯುವತಿ ಸಹ ಪಾಲ್ನ ಮೊಬೈಲ್ ಸಂಖ್ಯೆಯನ್ನು ನಿರ್ಬಂಧಿಸಿದ್ದರು. ಇದನ್ನು ಸಹಿಸಿಕೊಳ್ಳಲಾಗದೇ ಪಾಲ್ ಈ ಕೃತ್ಯ ಎಸಗಿದ್ದಾನೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಆರೋಪಿಯು ಯುವತಿಯ ಮುಖ, ತೊಡೆ ಹಾಗೂ ಕೈಗಳಿಗೆ ಚಾಕುವಿನಿಂದ ಇರಿದಿದ್ದಾನೆ. ಆತನ ವಿರುದ್ಧ ಸೆಕ್ಷನ್ 307ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದು, ಯುವತಿ ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ’ ಎಂದೂ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>