ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ: ಭೂಕುಸಿತಕ್ಕೆ ಮನಾಲಿ–ಲೇಹ್ ಹೆದ್ದಾರಿ ಬಂದ್‌

Last Updated 29 ಜೂನ್ 2018, 5:29 IST
ಅಕ್ಷರ ಗಾತ್ರ

ಉತ್ತರಾಖಂಡ, ಮನಾಲಿ:ಉತ್ತರಾಖಂಡ, ಹಿಮಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು, ಭೂಕುಸಿತ ಮತ್ತು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಮಾಚಲ ಪ್ರದೇಶ ಮರಾಹಿ ಎಂಬಲ್ಲಿ ಭಾರಿ ಭೂಕುಸಿತ ಉಂಟಾಗಿದ್ದು, ಮನಾಲಿ–ಲೇಹ್‌ ಹೆದ್ದಾರಿ ಬಂದ್‌ ಆಗಿದೆ.

ಬೃಹತ್‌ಗಾತ್ರದ ಕಲ್ಲಿನ ಚಪ್ಪಡಿಗಳು, ಬಂಡೆಗಳು ರಸ್ತೆಗೆ ಬಿದ್ದಿವೆ. ಇದರಿಂದ ಸ್ಥಳೀಯರು ಸೇರಿದಂತೆ ಪ್ರವಾಸಿಗರ ಸಂಚಾರಕ್ಕೆ ಅಡ್ಡಿಯಾಗಿದೆ.

ಹಿಮಾಚಲ ಪ್ರದೇಶದ ಮಾಂಡಿ ಜಿಲ್ಲೆಯಲ್ಲಿ ಉಹ್ಲಿ ನದಿ ಅಪಾಯಮಟ್ಟದಲ್ಲಿ ಹರಿಯುತ್ತಿದೆ.

ಉತ್ತರಾಖಂಡದ ಹೆದ್ದಾರಿ 94ರಲ್ಲಿ ಹಿಂಡೋಲಖಾಲ್‌ ಸಮೀಪ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಸಂಚಾರವನ್ನು ನಿರ್ಭಂಧಿಸಲಾಗಿದ್ದು, ಯಂತ್ರಗಳ ಸಹಾಯದಿಂದ ಕಲ್ಲು, ಮಣ್ಣು ತೆರವುಗೊಳಿಸಲಾಗಿತ್ತಿದೆ.

ರಾಜಸ್ಥಾನದಲ್ಲಿಯೂ ಭಾರಿ ಮಳೆಯಾಗಿದ್ದು, ಶಿವಾನ, ಜಖಹಾಮ ಮತ್ತಿರ ನದಿಗಳು ಅಪಾಯಮಟ್ಟದಲ್ಲಿ ಹರಿಯುತ್ತಿವೆ.

ಮಧ್ಯಪ್ರದೇಶದಲ್ಲಿ ಭಾರಿ ಮಳೆಗೆ ಸಿವಾನ್‌ ನದಿ ಅಪಾಯಮಟ್ಟದಲ್ಲಿ ಹರಿಯುತ್ತಿದ್ದು, ಪ್ರವಾಹದ ನೀರಿನಲ್ಲಿ ವ್ಯಕ್ತಿಯೊಬ್ಬ ಸಿಲುಕಿ ಮರದ ಕೊಂಬೆ ಹಿಡಿದು ರಕ್ಷಣೆ ಪಡೆದಿದ್ದ. ಈ ವ್ಯಕ್ತಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT