<p class="title"><strong>ನವದೆಹಲಿ:</strong>ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಹಬ್ಬಗಳನ್ನು ಆಚರಿಸದಿದ್ದರೆ ಈಗಿನ ಸೋಂಕಿನ ನಿಯಂತ್ರಣವು ಹಳಿ ತಪ್ಪಬಹುದು ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಶನಿವಾರ ಎಚ್ಚರಿಸಿದ್ದಾರೆ.</p>.<p class="title">ಹಂಚಿಕೆಯಲ್ಲಿ ಹಿಂದಿರುವ 19 ರಾಜ್ಯಗಳು ತಮ್ಮ ಲಸಿಕೆ ನೀಡುವ ವೇಗವನ್ನು ಹೆಚ್ಚಿಸಬೇಕಿದೆ. ಇದರಿಂದ ಮುಂದಿನ ದಿನಗಳಲ್ಲಿ ಭಾರತವು 100 ಕೋಟಿ ಲಸಿಕೆ ಡೋಸ್ಗಳ ಗುರಿ ತಲುಪಲಿದೆ ಎಂದೂ ಅವರು ಹೇಳಿದರು.</p>.<p class="title">ಭಾರತವು ಈವರೆಗೆ ಸುಮಾರು 94 ಕೋಟಿ ಕೋವಿಡ್ ಲಸಿಕೆಯ ಡೋಸ್ಗಳನ್ನು ಹಂಚಿಕೆ ಮಾಡಿದೆ.</p>.<p class="bodytext">ಎಲ್ಲಾ ಪ್ರಮುಖ ರಾಜ್ಯಗಳ ರಾಷ್ಟ್ರೀಯ ಆರೋಗ್ಯ ಮಿಷನ್ನ ಪ್ರಧಾನ ಕಾರ್ಯದರ್ಶಿಗಳು ಮತ್ತು ನಿರ್ದೇಶಕರೊಂದಿಗಿನ ಸಭೆಯಲ್ಲಿ ಸಚಿವ ಮಾಂಡವೀಯ ಅವರು ಕೋವಿಡ್ ಲಸಿಕೆಯ ಪ್ರಗತಿಯನ್ನು ಪರಿಶೀಲಿಸಿ ಮಾತನಾಡಿದರು.</p>.<p class="bodytext">ಲಸಿಕಾ ಅಭಿಯಾನದ ಮೂಲಕ ಭಾರತದಲ್ಲಿ 100 ಕೋಟಿ ಲಸಿಕೆಯ ಡೋಸ್ಗಳನ್ನು ನೀಡುವುದು ತಕ್ಷಣದ ಗುರಿಯಾಗಿದೆ ಎಂದು ಹೇಳಿದರು.</p>.<p class="bodytext">ಕೋವಿಡ್ ಮಾರ್ಗಸೂಚಿಗಳನ್ನು ಮೀರಿ ದೊಡ್ಡ ಮಟ್ಟದ ಜನಸಮೂಹ ಕೂಡುವಿಕೆಯ ಮೂಲಕ ಹಬ್ಬಗಳನ್ನು ಆಚರಿಸಿದರೆ ಈಗಿನ ಕೋವಿಡ್ ನಿಯಂತ್ರಣವು ಹಳಿತಪ್ಪಬಹುದು ಎಂದು ಸಚಿವ ಮಾಂಡವೀಯ ಅವರು ಎಚ್ಚರಿಸಿರುವುದಾಗಿ ಆರೋಗ್ಯ ಸಚಿವಾಲಯ ಹೇಳಿಕೆ ನೀಡಿದೆ.</p>.<p class="bodytext">‘ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದು ಮತ್ತು ಲಸಿಕೆಯ ವೇಗವನ್ನು ಹೆಚ್ಚಿಸುವುದು ಸೋಂಕಿನ ನಿಯಂತ್ರಣಕ್ಕೆ ಪ್ರಮುಖವಾಗಿವೆ’ ಎಂದು ಸಚಿವರು ಹೇಳಿದರು. </p>.<p>ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಡ, ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.</p>.<p>ರಾಜ್ಯಗಳಲ್ಲಿ ಎಂಟು ಕೋಟಿಗೂ ಹೆಚ್ಚು ಲಸಿಕೆಯ ಡೋಸ್ಗಳು ಬಾಕಿ ಇರುವುದನ್ನು ಸಚಿವರ ಗಮನಕ್ಕೆ ತರಲಾಯಿತು ಎಂದು ಆರೋಗ್ಯ ಸಚಿವಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong>ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಹಬ್ಬಗಳನ್ನು ಆಚರಿಸದಿದ್ದರೆ ಈಗಿನ ಸೋಂಕಿನ ನಿಯಂತ್ರಣವು ಹಳಿ ತಪ್ಪಬಹುದು ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಶನಿವಾರ ಎಚ್ಚರಿಸಿದ್ದಾರೆ.</p>.<p class="title">ಹಂಚಿಕೆಯಲ್ಲಿ ಹಿಂದಿರುವ 19 ರಾಜ್ಯಗಳು ತಮ್ಮ ಲಸಿಕೆ ನೀಡುವ ವೇಗವನ್ನು ಹೆಚ್ಚಿಸಬೇಕಿದೆ. ಇದರಿಂದ ಮುಂದಿನ ದಿನಗಳಲ್ಲಿ ಭಾರತವು 100 ಕೋಟಿ ಲಸಿಕೆ ಡೋಸ್ಗಳ ಗುರಿ ತಲುಪಲಿದೆ ಎಂದೂ ಅವರು ಹೇಳಿದರು.</p>.<p class="title">ಭಾರತವು ಈವರೆಗೆ ಸುಮಾರು 94 ಕೋಟಿ ಕೋವಿಡ್ ಲಸಿಕೆಯ ಡೋಸ್ಗಳನ್ನು ಹಂಚಿಕೆ ಮಾಡಿದೆ.</p>.<p class="bodytext">ಎಲ್ಲಾ ಪ್ರಮುಖ ರಾಜ್ಯಗಳ ರಾಷ್ಟ್ರೀಯ ಆರೋಗ್ಯ ಮಿಷನ್ನ ಪ್ರಧಾನ ಕಾರ್ಯದರ್ಶಿಗಳು ಮತ್ತು ನಿರ್ದೇಶಕರೊಂದಿಗಿನ ಸಭೆಯಲ್ಲಿ ಸಚಿವ ಮಾಂಡವೀಯ ಅವರು ಕೋವಿಡ್ ಲಸಿಕೆಯ ಪ್ರಗತಿಯನ್ನು ಪರಿಶೀಲಿಸಿ ಮಾತನಾಡಿದರು.</p>.<p class="bodytext">ಲಸಿಕಾ ಅಭಿಯಾನದ ಮೂಲಕ ಭಾರತದಲ್ಲಿ 100 ಕೋಟಿ ಲಸಿಕೆಯ ಡೋಸ್ಗಳನ್ನು ನೀಡುವುದು ತಕ್ಷಣದ ಗುರಿಯಾಗಿದೆ ಎಂದು ಹೇಳಿದರು.</p>.<p class="bodytext">ಕೋವಿಡ್ ಮಾರ್ಗಸೂಚಿಗಳನ್ನು ಮೀರಿ ದೊಡ್ಡ ಮಟ್ಟದ ಜನಸಮೂಹ ಕೂಡುವಿಕೆಯ ಮೂಲಕ ಹಬ್ಬಗಳನ್ನು ಆಚರಿಸಿದರೆ ಈಗಿನ ಕೋವಿಡ್ ನಿಯಂತ್ರಣವು ಹಳಿತಪ್ಪಬಹುದು ಎಂದು ಸಚಿವ ಮಾಂಡವೀಯ ಅವರು ಎಚ್ಚರಿಸಿರುವುದಾಗಿ ಆರೋಗ್ಯ ಸಚಿವಾಲಯ ಹೇಳಿಕೆ ನೀಡಿದೆ.</p>.<p class="bodytext">‘ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದು ಮತ್ತು ಲಸಿಕೆಯ ವೇಗವನ್ನು ಹೆಚ್ಚಿಸುವುದು ಸೋಂಕಿನ ನಿಯಂತ್ರಣಕ್ಕೆ ಪ್ರಮುಖವಾಗಿವೆ’ ಎಂದು ಸಚಿವರು ಹೇಳಿದರು. </p>.<p>ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಡ, ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.</p>.<p>ರಾಜ್ಯಗಳಲ್ಲಿ ಎಂಟು ಕೋಟಿಗೂ ಹೆಚ್ಚು ಲಸಿಕೆಯ ಡೋಸ್ಗಳು ಬಾಕಿ ಇರುವುದನ್ನು ಸಚಿವರ ಗಮನಕ್ಕೆ ತರಲಾಯಿತು ಎಂದು ಆರೋಗ್ಯ ಸಚಿವಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>