<p><strong>ನವದೆಹಲಿ:</strong> ಮಂಗಳೂರಿನ ಯುವ ಪ್ರತಿಭೆ ಸಿಂಧೂರ ರಾಜಾ ಉಳ್ಳಾಲ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಸ್ವೀಕರಿಸಿದರು. </p>.<p>ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಮಕ್ಕಳೊಂದಿಗೆ ಸಂವಾದ ನಡೆಸಿದರು. </p>.<p>ವಿಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ ಅನೇಕ ಆವಿಷ್ಕಾರಗಳನ್ನು ಮಾಡಿರುವ ಸಿಂಧೂರ ಅವರು ಪ್ರಸ್ತುತ ಬೆಂಗಳೂರಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸುತ್ತಿದ್ದಾರೆ. ಅವರು ನ್ಯೂ ಹೊರೈಜಾನ್ ಪಬ್ಲಿಕ್ ಸ್ಕೂಲ್ನ ಮಾಜಿ ವಿದ್ಯಾರ್ಥಿನಿ. ಈಗ ಅವರು ಇಂದಿರಾನಗರದ ನ್ಯಾಷನಲ್ ಪಬ್ಲಿಕ್ ಸ್ಕೂಲ್ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ. </p>.<p>ವೈಜ್ಞಾನಿಕ ಸಾಧನೆಗಾಗಿ ಅವರಿಗೆ ಅಮೆರಿಕದ ವರ್ಲ್ಡ್ ಸೈನ್ಸ್ ಸ್ಕಾಲರ್ ಪದವಿ ದೊರೆತಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮತ್ತು ವೊಲ್ಫ್ರಾಮ್ ರಿಸರ್ಚ್ ಸೆಂಟರ್ ಜೊತೆಗೆ ಕ್ರಿಪ್ಟೋಕಾಕಸ್ ನಿಯೋಫಾರ್ಮಾನ್ಸ್ ಎಂಬ ಪ್ಯಾಥೊಜೆನಿಕ್ ಈಸ್ಟ್ ಕುರಿತು ಪ್ರಯೋಗ ನಡೆಸುತ್ತಿದ್ದಾರೆ.</p>.<p>‘ಪ್ರಶಸ್ತಿ ಬಂದಿರುವುದು ತುಂಬಾ ಖುಷಿಯಾಗಿದೆ. ಈ ಪ್ರಶಸ್ತಿ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಪ್ರಧಾನಿ ಅವರೊಂದಿಗೆ ಸಂವಾದ ನಡೆಸುವ ಅವಕಾಶ ಸಿಕ್ಕಿತು. ಈ ಪ್ರಶಸ್ತಿಯಿಂದ ಇನ್ನಷ್ಟು ಪ್ರಯತ್ನ ಮಾಡಲು ಪ್ರೇರಣೆ ಸಿಕ್ಕಿದೆ. ಗ್ರಾಮೀಣ ಭಾರತಕ್ಕೆ ಅನುಕೂಲವಾಗುವಂತಹ ಇನ್ನಷ್ಟು ಕೆಲಸ ಮಾಡಲಿದ್ದೇನೆ’ ಎಂದು ಸಿಂಧೂರ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಂಗಳೂರಿನ ಯುವ ಪ್ರತಿಭೆ ಸಿಂಧೂರ ರಾಜಾ ಉಳ್ಳಾಲ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಸ್ವೀಕರಿಸಿದರು. </p>.<p>ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಮಕ್ಕಳೊಂದಿಗೆ ಸಂವಾದ ನಡೆಸಿದರು. </p>.<p>ವಿಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ ಅನೇಕ ಆವಿಷ್ಕಾರಗಳನ್ನು ಮಾಡಿರುವ ಸಿಂಧೂರ ಅವರು ಪ್ರಸ್ತುತ ಬೆಂಗಳೂರಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸುತ್ತಿದ್ದಾರೆ. ಅವರು ನ್ಯೂ ಹೊರೈಜಾನ್ ಪಬ್ಲಿಕ್ ಸ್ಕೂಲ್ನ ಮಾಜಿ ವಿದ್ಯಾರ್ಥಿನಿ. ಈಗ ಅವರು ಇಂದಿರಾನಗರದ ನ್ಯಾಷನಲ್ ಪಬ್ಲಿಕ್ ಸ್ಕೂಲ್ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ. </p>.<p>ವೈಜ್ಞಾನಿಕ ಸಾಧನೆಗಾಗಿ ಅವರಿಗೆ ಅಮೆರಿಕದ ವರ್ಲ್ಡ್ ಸೈನ್ಸ್ ಸ್ಕಾಲರ್ ಪದವಿ ದೊರೆತಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮತ್ತು ವೊಲ್ಫ್ರಾಮ್ ರಿಸರ್ಚ್ ಸೆಂಟರ್ ಜೊತೆಗೆ ಕ್ರಿಪ್ಟೋಕಾಕಸ್ ನಿಯೋಫಾರ್ಮಾನ್ಸ್ ಎಂಬ ಪ್ಯಾಥೊಜೆನಿಕ್ ಈಸ್ಟ್ ಕುರಿತು ಪ್ರಯೋಗ ನಡೆಸುತ್ತಿದ್ದಾರೆ.</p>.<p>‘ಪ್ರಶಸ್ತಿ ಬಂದಿರುವುದು ತುಂಬಾ ಖುಷಿಯಾಗಿದೆ. ಈ ಪ್ರಶಸ್ತಿ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಪ್ರಧಾನಿ ಅವರೊಂದಿಗೆ ಸಂವಾದ ನಡೆಸುವ ಅವಕಾಶ ಸಿಕ್ಕಿತು. ಈ ಪ್ರಶಸ್ತಿಯಿಂದ ಇನ್ನಷ್ಟು ಪ್ರಯತ್ನ ಮಾಡಲು ಪ್ರೇರಣೆ ಸಿಕ್ಕಿದೆ. ಗ್ರಾಮೀಣ ಭಾರತಕ್ಕೆ ಅನುಕೂಲವಾಗುವಂತಹ ಇನ್ನಷ್ಟು ಕೆಲಸ ಮಾಡಲಿದ್ದೇನೆ’ ಎಂದು ಸಿಂಧೂರ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>