<p><strong>ಇಂಫಾಲ:</strong> ಸಂಘರ್ಷ ಪೀಡಿತ ಮಣಿಪುರದ ಐದು ಜಿಲ್ಲೆಗಳಲ್ಲಿ 42 ಬಂದೂಕುಗಳನ್ನು ಸಾರ್ವಜನಿಕರು ಒಪ್ಪಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p>.<p>ಇಂಫಾಲ ಪಶ್ಚಿಮ ಮತ್ತು ಪೂರ್ವ, ಚುರಚಂದ್ಪುರ , ಬಿಷ್ಣುಪುರ ಮತ್ತು ತಮೆಂಗ್ಲಾಂಗ್ ಜಿಲ್ಲೆಗಳಲ್ಲಿ ಶನಿವಾರ ಬಂದೂಕುಗಳನ್ನು ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಬಿಷ್ಣುಪುರ ಜಿಲ್ಲೆಯಲ್ಲಿ 6 ಗ್ರೆನೇಡ್ಗಳು ಮತ್ತು 75ಕ್ಕೂ ಹೆಚ್ಚು ಮದ್ದುಗುಂಡುಗಳು, 5 ಬಂದೂಕುಗಳನ್ನು ಒಪ್ಪಿಸಲಾಗಿದೆ. ಯೈಂಗಂಗ್ಪೋಕ್ಪಿ, ಪೊರೊಂಪತ್, ಚುರಚಂದ್ಪುರ ಮತ್ತು ಲಾಮ್ಸಾಂಗ್ ಪೊಲೀಸ್ ಠಾಣೆಗಳಲ್ಲಿ ಕನಿಷ್ಠ 10 ಬಂದೂಕುಗಳನ್ನು ಒಪ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<h2>5 ಅಕ್ರಮ ಬಂಕರ್ಗಳ ನಾಶ</h2>.<p>ಕಾಂಗ್ಪೋಕ್ಪಿ ಜಿಲ್ಲೆಯ ಥಿಂಗ್ಸಾಟ್ ಬೆಟ್ಟ ಶ್ರೇಣಿಯ ಮಾರ್ಕ್ ಬೆಟ್ಟದಲ್ಲಿದ್ದ 2 ಅಕ್ರಮ ಬಂಕರ್ ಹಾಗೂ ಕಾಂಗ್ಪೋಕ್ಪಿ ಮತ್ತು ಇಂಫಾಲ ಪೂರ್ವ ಜಿಲ್ಲೆಗಳ ಪಕ್ಕದ ಪ್ರದೇಶದ ವಾಕನ್ ಬೆಟ್ಟ ಶ್ರೇಣಿಯಲ್ಲಿದ್ದ 3 ಅಕ್ರಮ ಬಂಕರ್ಗಳನ್ನು ಭದ್ರತಾ ಪಡೆಗಳು ಶನಿವಾರ ನಾಶಪಡಿಸಿವೆ.</p>.<h2>ಶಸ್ತ್ರಾಸ್ತ್ರ ಒಪ್ಪಿಸಲು ಗಡುವು ವಿಸ್ತರಣೆ</h2>.<p>ಲೂಟಿ ಮಾಡಿದ ಮತ್ತು ಅಕ್ರಮವಾಗಿ ಇಟ್ಟುಕೊಂಡಿರುವ ಶಸ್ತ್ರಾಸ್ತ್ರಗಳನ್ನು ಒಪ್ಪಿಸುವಂತೆ ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ಫೆ. 20 ರಂದು ಸೂಚಿಸಿದ್ದರು. ಫೆ.27ರೊಳಗೆ ಶಸ್ತ್ರಾಸ್ತ್ರಗಳನ್ನು ಸ್ವಯಂಪ್ರೇರಿತವಾಗಿ ಒಪ್ಪಿಸುವಂತೆ ಸ್ವಯಂಸೇವಕರು ಮತ್ತು ಬಂಡುಕೋರರಿಗೆ ತಿಳಿಸಿದ್ದರು.</p>.<p>ಶಸ್ತ್ರಾಸ್ತ್ರಗಳನ್ನು ಒಪ್ಪಿಸಲು ನೀಡಿದ ಗಡುವು ವಿಸ್ತರಿಸುವಂತೆ ಮೈತೇಯಿ ಮತ್ತು ಕುಕಿ ಸಮುದಾಯಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳು ರಾಜ್ಯಪಾಲರಿಗೆ ಮನವಿ ಮಾಡಿದ್ದವು. ವಿವಿಧ ಸಂಘಟನೆಗಳ ಮನವಿಯನ್ನು ಪರಿಗಣಿಸಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ಮಾರ್ಚ್ 6ರವರೆಗೆ ವಿಸ್ತರಿಸಿ ಅಂತಿಮ ಅವಕಾಶ ನೀಡಿದ್ದಾರೆ.</p>.<p>2023ರಿಂದ ರಾಜ್ಯದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನ ಮೃತಪಟ್ಟು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.</p>.<p>ಹಿಂಸಾಚಾರದ ವೇಳೆ ಪೊಲೀಸ್ ಠಾಣೆಗಳು ಮತ್ತು ಶಸ್ತ್ರಾಗಾರದಿಂದ 6 ಸಾವಿರಕ್ಕೂ ಅಧಿಕ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಲಾಗಿತ್ತು. ಅದರಲ್ಲಿ ಇದುವರೆಗೆ ಸುಮಾರು ಎರಡು ಸಾವಿರ ಶಸ್ತ್ರಾಸ್ತ್ರಗಳನ್ನು ಮಾತ್ರ ಮರಳಿ ವಶಕ್ಕೆ ಪಡೆಯಲಾಗಿದೆ.</p>.ಮಣಿಪುರ | ಶಸ್ತ್ರಾಸ್ತ್ರ ಒಪ್ಪಿಸಲು ಕೊನೆಯ ಅವಕಾಶ: ಗಡುವು ವಿಸ್ತರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ:</strong> ಸಂಘರ್ಷ ಪೀಡಿತ ಮಣಿಪುರದ ಐದು ಜಿಲ್ಲೆಗಳಲ್ಲಿ 42 ಬಂದೂಕುಗಳನ್ನು ಸಾರ್ವಜನಿಕರು ಒಪ್ಪಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p>.<p>ಇಂಫಾಲ ಪಶ್ಚಿಮ ಮತ್ತು ಪೂರ್ವ, ಚುರಚಂದ್ಪುರ , ಬಿಷ್ಣುಪುರ ಮತ್ತು ತಮೆಂಗ್ಲಾಂಗ್ ಜಿಲ್ಲೆಗಳಲ್ಲಿ ಶನಿವಾರ ಬಂದೂಕುಗಳನ್ನು ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಬಿಷ್ಣುಪುರ ಜಿಲ್ಲೆಯಲ್ಲಿ 6 ಗ್ರೆನೇಡ್ಗಳು ಮತ್ತು 75ಕ್ಕೂ ಹೆಚ್ಚು ಮದ್ದುಗುಂಡುಗಳು, 5 ಬಂದೂಕುಗಳನ್ನು ಒಪ್ಪಿಸಲಾಗಿದೆ. ಯೈಂಗಂಗ್ಪೋಕ್ಪಿ, ಪೊರೊಂಪತ್, ಚುರಚಂದ್ಪುರ ಮತ್ತು ಲಾಮ್ಸಾಂಗ್ ಪೊಲೀಸ್ ಠಾಣೆಗಳಲ್ಲಿ ಕನಿಷ್ಠ 10 ಬಂದೂಕುಗಳನ್ನು ಒಪ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<h2>5 ಅಕ್ರಮ ಬಂಕರ್ಗಳ ನಾಶ</h2>.<p>ಕಾಂಗ್ಪೋಕ್ಪಿ ಜಿಲ್ಲೆಯ ಥಿಂಗ್ಸಾಟ್ ಬೆಟ್ಟ ಶ್ರೇಣಿಯ ಮಾರ್ಕ್ ಬೆಟ್ಟದಲ್ಲಿದ್ದ 2 ಅಕ್ರಮ ಬಂಕರ್ ಹಾಗೂ ಕಾಂಗ್ಪೋಕ್ಪಿ ಮತ್ತು ಇಂಫಾಲ ಪೂರ್ವ ಜಿಲ್ಲೆಗಳ ಪಕ್ಕದ ಪ್ರದೇಶದ ವಾಕನ್ ಬೆಟ್ಟ ಶ್ರೇಣಿಯಲ್ಲಿದ್ದ 3 ಅಕ್ರಮ ಬಂಕರ್ಗಳನ್ನು ಭದ್ರತಾ ಪಡೆಗಳು ಶನಿವಾರ ನಾಶಪಡಿಸಿವೆ.</p>.<h2>ಶಸ್ತ್ರಾಸ್ತ್ರ ಒಪ್ಪಿಸಲು ಗಡುವು ವಿಸ್ತರಣೆ</h2>.<p>ಲೂಟಿ ಮಾಡಿದ ಮತ್ತು ಅಕ್ರಮವಾಗಿ ಇಟ್ಟುಕೊಂಡಿರುವ ಶಸ್ತ್ರಾಸ್ತ್ರಗಳನ್ನು ಒಪ್ಪಿಸುವಂತೆ ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ಫೆ. 20 ರಂದು ಸೂಚಿಸಿದ್ದರು. ಫೆ.27ರೊಳಗೆ ಶಸ್ತ್ರಾಸ್ತ್ರಗಳನ್ನು ಸ್ವಯಂಪ್ರೇರಿತವಾಗಿ ಒಪ್ಪಿಸುವಂತೆ ಸ್ವಯಂಸೇವಕರು ಮತ್ತು ಬಂಡುಕೋರರಿಗೆ ತಿಳಿಸಿದ್ದರು.</p>.<p>ಶಸ್ತ್ರಾಸ್ತ್ರಗಳನ್ನು ಒಪ್ಪಿಸಲು ನೀಡಿದ ಗಡುವು ವಿಸ್ತರಿಸುವಂತೆ ಮೈತೇಯಿ ಮತ್ತು ಕುಕಿ ಸಮುದಾಯಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳು ರಾಜ್ಯಪಾಲರಿಗೆ ಮನವಿ ಮಾಡಿದ್ದವು. ವಿವಿಧ ಸಂಘಟನೆಗಳ ಮನವಿಯನ್ನು ಪರಿಗಣಿಸಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ಮಾರ್ಚ್ 6ರವರೆಗೆ ವಿಸ್ತರಿಸಿ ಅಂತಿಮ ಅವಕಾಶ ನೀಡಿದ್ದಾರೆ.</p>.<p>2023ರಿಂದ ರಾಜ್ಯದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನ ಮೃತಪಟ್ಟು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.</p>.<p>ಹಿಂಸಾಚಾರದ ವೇಳೆ ಪೊಲೀಸ್ ಠಾಣೆಗಳು ಮತ್ತು ಶಸ್ತ್ರಾಗಾರದಿಂದ 6 ಸಾವಿರಕ್ಕೂ ಅಧಿಕ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಲಾಗಿತ್ತು. ಅದರಲ್ಲಿ ಇದುವರೆಗೆ ಸುಮಾರು ಎರಡು ಸಾವಿರ ಶಸ್ತ್ರಾಸ್ತ್ರಗಳನ್ನು ಮಾತ್ರ ಮರಳಿ ವಶಕ್ಕೆ ಪಡೆಯಲಾಗಿದೆ.</p>.ಮಣಿಪುರ | ಶಸ್ತ್ರಾಸ್ತ್ರ ಒಪ್ಪಿಸಲು ಕೊನೆಯ ಅವಕಾಶ: ಗಡುವು ವಿಸ್ತರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>