ಇಂಫಾಲ: ಮಣಿಪುರದ ಚಂದೇಲ್ ಜಿಲ್ಲೆಯ ಸಾಜಿಕ್ ತಂಪಕ್ ಪ್ರದೇಶದಲ್ಲಿ ಅಸ್ಸಾಂ ರೈಫಲ್ಸ್ನ ಯೋಧರೊಬ್ಬರು ಸಹೋದ್ಯೋಗಿಗಳಿಗೆ ಗುಂಡು ಹಾರಿಸಿ, ಬಳಿಕ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳವಾರ ರಾತ್ರಿ ಈ ಪ್ರಕರಣ ನಡೆದಿದ್ದು, ಅಸ್ಸಾಂ ರೈಫಲ್ಸ್ನ ಆರು ಮಂದಿ ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
‘ಈ ಪ್ರಕರಣಕ್ಕೂ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಗಲಭೆಗೂ ಯಾವುದೇ ನಂಟಿಲ್ಲ. ಗಾಯಗೊಂಡಿರುವ ಯೋಧರು ಮಣಿಪುರದವರಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ’ ಎಂದು ಮಣಿಪುರ ಪೊಲೀಸರು ಎಕ್ಸ್ ವೇದಿಕೆಯಲ್ಲಿ ಹೇಳಿದ್ದಾರೆ.
ಗಾಯಗೊಂಡಿರುವ ಯೋಧರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದೂ ತಿಳಿಸಿದ್ದಾರೆ.