<p><strong>ಗುವಾಹಟಿ:</strong> ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಕುಕಿ ಸಮುದಾಯದ ಮಹಿಳಾ ವೈದ್ಯರೊಬ್ಬರನ್ನು ಕ್ರೂರವಾಗಿ ಹತ್ಯೆ ಮಾಡಿದ್ದ ಆರೋಪಿಯನ್ನು ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬಂಧಿಸಲಾಗಿದೆ.</p>.<p>ರಾಜ್ಕುಮಾರ್ ಮೈಪಕ್ಸಾನಾ ಬಂಧಿತ ಆರೋಪಿ.</p>.<p>ಈತ ನಿಷೇಧಿತ ಬಂಡುಕೋರರ ಗುಂಪು ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಂಗ್ಲೀಪಾಕ್ನ ಕೇಡರ್ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ಸೋಮವಾರ ತಿಳಿಸಿದೆ.</p>.<p>ಝೈರಾನ್ ಗ್ರಾಮದಲ್ಲಿ ಕಳೆದ ವರ್ಷದ ನವೆಂಬರ್ನಲ್ಲಿ ಜೋಸಾಂಗ್ಕಿಮ್ ಎಂಬ ಮಹಿಳೆಯನ್ನು ಹತ್ಯೆ ಮಾಡಲಾಗಿತ್ತು. ನಂತರ ಹಲವು ಮನೆಗಳಿಗೆ ಬೆಂಕಿ ಹಚ್ಚಿ ಲೂಟಿ ಮಾಡಲಾಗಿತ್ತು ಎಂದು ಎನ್ಐಎ ಹೇಳಿದೆ.</p>.<p>ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕಣಿವೆ ಮೂಲದ ಬಂಡುಕೋರ ಗುಂಪುಗಳಾದ ಯುಎನ್ಎಲ್ಎಫ್ ಮತ್ತು ಕೆಕೆಎಲ್ನ ಇಬ್ಬರು ಕಾರ್ಯಕರ್ತರನ್ನು ಎನ್ಐಎ ಬಂಧಿಸಿದೆ.</p>.<h2>ಅಸ್ಸಾಂನಲ್ಲಿ ಬಂಧನ</h2>.<p>ಮಣಿಪುರದ ಕುಕಿ ಪ್ರಾಬಲ್ಯದ ಟೆಂಗ್ನೌಪಾಲ್ ಜಿಲ್ಲೆಯ ಮೊರೆಹ್ನಲ್ಲಿರುವ ಐಆರ್ಬಿ ಪೋಸ್ಟ್ ಮೇಲೆ ಕಳೆದ ವರ್ಷದ ಜ. 17ರಂದು ದಾಳಿ ನಡೆಸಿದ ಆರೋಪಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ.</p>.<p>ಟೆಂಗ್ನೌಪಾಲ್ ನಿವಾಸಿ ಥಾಂಗ್ಮಿನ್ಲಾರ್ ಅಲಿಯಾಸ್ ಲೆನಿನ್ನನ್ನು ಅಸ್ಸಾಂನ ಸಿಲ್ಚಾರ್ನಲ್ಲಿ ಭಾನುವಾರ ಬಂಧಿಸಲಾಗಿದ್ದು, ಈತ ಬಂಡುಕೋರ ಗುಂಪುಗಳೊಂದಿಗೆ ನಂಟು ಹೊಂದಿರುವ ಮಾಹಿತಿ ಇನ್ನೂ ಖಚಿತಪಟ್ಟಿಲ್ಲ ಎಂದು ಎನ್ಐಎ ಹೇಳಿದೆ.</p>.<p>ಈ ಪ್ರಕರಣದಲ್ಲಿ ಬಂಧನಕ್ಕೊಳಗಾದ ಮೊದಲ ವ್ಯಕ್ತಿ ಈತನಾಗಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಕುಕಿ ಸಮುದಾಯದ ಮಹಿಳಾ ವೈದ್ಯರೊಬ್ಬರನ್ನು ಕ್ರೂರವಾಗಿ ಹತ್ಯೆ ಮಾಡಿದ್ದ ಆರೋಪಿಯನ್ನು ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬಂಧಿಸಲಾಗಿದೆ.</p>.<p>ರಾಜ್ಕುಮಾರ್ ಮೈಪಕ್ಸಾನಾ ಬಂಧಿತ ಆರೋಪಿ.</p>.<p>ಈತ ನಿಷೇಧಿತ ಬಂಡುಕೋರರ ಗುಂಪು ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಂಗ್ಲೀಪಾಕ್ನ ಕೇಡರ್ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ಸೋಮವಾರ ತಿಳಿಸಿದೆ.</p>.<p>ಝೈರಾನ್ ಗ್ರಾಮದಲ್ಲಿ ಕಳೆದ ವರ್ಷದ ನವೆಂಬರ್ನಲ್ಲಿ ಜೋಸಾಂಗ್ಕಿಮ್ ಎಂಬ ಮಹಿಳೆಯನ್ನು ಹತ್ಯೆ ಮಾಡಲಾಗಿತ್ತು. ನಂತರ ಹಲವು ಮನೆಗಳಿಗೆ ಬೆಂಕಿ ಹಚ್ಚಿ ಲೂಟಿ ಮಾಡಲಾಗಿತ್ತು ಎಂದು ಎನ್ಐಎ ಹೇಳಿದೆ.</p>.<p>ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕಣಿವೆ ಮೂಲದ ಬಂಡುಕೋರ ಗುಂಪುಗಳಾದ ಯುಎನ್ಎಲ್ಎಫ್ ಮತ್ತು ಕೆಕೆಎಲ್ನ ಇಬ್ಬರು ಕಾರ್ಯಕರ್ತರನ್ನು ಎನ್ಐಎ ಬಂಧಿಸಿದೆ.</p>.<h2>ಅಸ್ಸಾಂನಲ್ಲಿ ಬಂಧನ</h2>.<p>ಮಣಿಪುರದ ಕುಕಿ ಪ್ರಾಬಲ್ಯದ ಟೆಂಗ್ನೌಪಾಲ್ ಜಿಲ್ಲೆಯ ಮೊರೆಹ್ನಲ್ಲಿರುವ ಐಆರ್ಬಿ ಪೋಸ್ಟ್ ಮೇಲೆ ಕಳೆದ ವರ್ಷದ ಜ. 17ರಂದು ದಾಳಿ ನಡೆಸಿದ ಆರೋಪಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ.</p>.<p>ಟೆಂಗ್ನೌಪಾಲ್ ನಿವಾಸಿ ಥಾಂಗ್ಮಿನ್ಲಾರ್ ಅಲಿಯಾಸ್ ಲೆನಿನ್ನನ್ನು ಅಸ್ಸಾಂನ ಸಿಲ್ಚಾರ್ನಲ್ಲಿ ಭಾನುವಾರ ಬಂಧಿಸಲಾಗಿದ್ದು, ಈತ ಬಂಡುಕೋರ ಗುಂಪುಗಳೊಂದಿಗೆ ನಂಟು ಹೊಂದಿರುವ ಮಾಹಿತಿ ಇನ್ನೂ ಖಚಿತಪಟ್ಟಿಲ್ಲ ಎಂದು ಎನ್ಐಎ ಹೇಳಿದೆ.</p>.<p>ಈ ಪ್ರಕರಣದಲ್ಲಿ ಬಂಧನಕ್ಕೊಳಗಾದ ಮೊದಲ ವ್ಯಕ್ತಿ ಈತನಾಗಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>