<p><strong>ನವದೆಹಲಿ</strong> : ಮಹಿಳೆಯ ಬೆತ್ತಲೆ ಮೆರವಣಿಗೆ ನಡೆಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣವೂ ಸೇರಿದಂತೆ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಸ್ಸಾಂಗೆ ವರ್ಗಾಯಿಸಿದೆ. ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಈ ಹಿಂದೆಯೇ ವಹಿಸಲಾಗಿದೆ.</p><p>ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಪೀಠವು, ಪ್ರಕರಣಗಳ ನಿರ್ವಹಣೆಗೆ ಒಂದು ಅಥವಾ ಅದಕ್ಕಿಂತ ಹೆಚ್ಚು ನ್ಯಾಯಾಲಯಗಳನ್ನು ನಿಯೋಜನೆ ಮಾಡಬೇಕು ಎಂದು ಗುವಾಹಟಿ ಹೈಕೋರ್ಟ್ನ ಮುಖ್ಯ<br>ನ್ಯಾಯಮೂರ್ತಿ ಅವರಿಗೆ ಸೂಚನೆಯನ್ನೂ ನೀಡಿದೆ.</p><p>ಹಿಂಸಾಚಾರದಲ್ಲಿ ಎರಡೂ ಕಡೆ ಯವರೂ ನೊಂದಿದ್ದಾರೆ. ಹೀಗಾಗಿ ಕ್ರಿಮಿನಲ್ ನ್ಯಾಯದ ‘ನ್ಯಾಯೋಚಿತ ಪ್ರಕ್ರಿಯೆ’ಯನ್ನು ಖಾತರಿಪಡಿಸುವ ಉದ್ದೇಶದಿಂದ ಈ ಕ್ರಮ ಅನುಸರಿಸಿರುವುದಾಗಿ ಕೋರ್ಟ್ ಹೇಳಿದೆ. </p><p>ಮಣಿಪುರದ ಹಿಂಸಾಚಾರ ಪ್ರಕರಣ ಗಳಿಗೆ ಸಂಬಂಧಿಸಿದಂತೆ ಕೋರ್ಟ್ ಹಲವು ನಿರ್ದೇಶನಗಳನ್ನು ನೀಡಿದೆ. ಸಂತ್ರಸ್ತರಿಗೆ ಮಣಿಪುರದಿಂದಲೇ ವಿಡಿಯೊ ಕಾನ್ಫರೆನ್ಸ್ ಮೂಲಕ ಹೇಳಿಕೆ ದಾಖಲಿಸಲು ಅವಕಾಶ ಮಾಡಿಕೊಡಬೇಕು ಎಂದು ಸೂಚಿಸಿದೆ. </p><p>ವಿಚಾರಣೆಗೆ ಗೊತ್ತುಪಡಿಸಿದ ನ್ಯಾಯಾಲಯಗಳಲ್ಲಿ ಆರೋಪಿಗಳ ಹಾಜರು ಪಡಿಸುವಿಕೆ, ಬಂಧನ ಮತ್ತು ಬಂಧನದ ಅವಧಿ ವಿಸ್ತರಣೆಗೆ ಸಂಬಂಧಿಸಿದ<br>ಪ್ರಕ್ರಿಯೆಗಳನ್ನು ಆನ್ಲೈನ್ ಮೂಲಕ ನಡೆಸಲು ಸಿಬಿಐಗೆ ಅವಕಾಶವನ್ನೂ ನೀಡಿದೆ. </p><p>ಗುವಾಹಟಿ ನ್ಯಾಯಾಲಯದಲ್ಲಿ ಆನ್ಲೈನ್ ಮೂಲಕ ವಿಚಾರಣೆ ನಡೆಸಲು ಅನುಕೂಲವಾಗುವಂತೆ ಸಮರ್ಪಕವಾದ ಇಂಟರ್ನೆಟ್ ಸೇವೆ ಒದಗಿಸುವಂತೆ ಮಣಿಪುರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong> : ಮಹಿಳೆಯ ಬೆತ್ತಲೆ ಮೆರವಣಿಗೆ ನಡೆಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣವೂ ಸೇರಿದಂತೆ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಸ್ಸಾಂಗೆ ವರ್ಗಾಯಿಸಿದೆ. ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಈ ಹಿಂದೆಯೇ ವಹಿಸಲಾಗಿದೆ.</p><p>ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಪೀಠವು, ಪ್ರಕರಣಗಳ ನಿರ್ವಹಣೆಗೆ ಒಂದು ಅಥವಾ ಅದಕ್ಕಿಂತ ಹೆಚ್ಚು ನ್ಯಾಯಾಲಯಗಳನ್ನು ನಿಯೋಜನೆ ಮಾಡಬೇಕು ಎಂದು ಗುವಾಹಟಿ ಹೈಕೋರ್ಟ್ನ ಮುಖ್ಯ<br>ನ್ಯಾಯಮೂರ್ತಿ ಅವರಿಗೆ ಸೂಚನೆಯನ್ನೂ ನೀಡಿದೆ.</p><p>ಹಿಂಸಾಚಾರದಲ್ಲಿ ಎರಡೂ ಕಡೆ ಯವರೂ ನೊಂದಿದ್ದಾರೆ. ಹೀಗಾಗಿ ಕ್ರಿಮಿನಲ್ ನ್ಯಾಯದ ‘ನ್ಯಾಯೋಚಿತ ಪ್ರಕ್ರಿಯೆ’ಯನ್ನು ಖಾತರಿಪಡಿಸುವ ಉದ್ದೇಶದಿಂದ ಈ ಕ್ರಮ ಅನುಸರಿಸಿರುವುದಾಗಿ ಕೋರ್ಟ್ ಹೇಳಿದೆ. </p><p>ಮಣಿಪುರದ ಹಿಂಸಾಚಾರ ಪ್ರಕರಣ ಗಳಿಗೆ ಸಂಬಂಧಿಸಿದಂತೆ ಕೋರ್ಟ್ ಹಲವು ನಿರ್ದೇಶನಗಳನ್ನು ನೀಡಿದೆ. ಸಂತ್ರಸ್ತರಿಗೆ ಮಣಿಪುರದಿಂದಲೇ ವಿಡಿಯೊ ಕಾನ್ಫರೆನ್ಸ್ ಮೂಲಕ ಹೇಳಿಕೆ ದಾಖಲಿಸಲು ಅವಕಾಶ ಮಾಡಿಕೊಡಬೇಕು ಎಂದು ಸೂಚಿಸಿದೆ. </p><p>ವಿಚಾರಣೆಗೆ ಗೊತ್ತುಪಡಿಸಿದ ನ್ಯಾಯಾಲಯಗಳಲ್ಲಿ ಆರೋಪಿಗಳ ಹಾಜರು ಪಡಿಸುವಿಕೆ, ಬಂಧನ ಮತ್ತು ಬಂಧನದ ಅವಧಿ ವಿಸ್ತರಣೆಗೆ ಸಂಬಂಧಿಸಿದ<br>ಪ್ರಕ್ರಿಯೆಗಳನ್ನು ಆನ್ಲೈನ್ ಮೂಲಕ ನಡೆಸಲು ಸಿಬಿಐಗೆ ಅವಕಾಶವನ್ನೂ ನೀಡಿದೆ. </p><p>ಗುವಾಹಟಿ ನ್ಯಾಯಾಲಯದಲ್ಲಿ ಆನ್ಲೈನ್ ಮೂಲಕ ವಿಚಾರಣೆ ನಡೆಸಲು ಅನುಕೂಲವಾಗುವಂತೆ ಸಮರ್ಪಕವಾದ ಇಂಟರ್ನೆಟ್ ಸೇವೆ ಒದಗಿಸುವಂತೆ ಮಣಿಪುರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>