ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಣಿಪುರ: ಸಿಎಂ ಬಿರೇನ್ ಸಿಂಗ್ ಬೆಂಗಾವಲು ಪಡೆಯ ಮೇಲೆ ಹೊಂಚುದಾಳಿ; ಒಬ್ಬರಿಗೆ ಗಾಯ

Published 10 ಜೂನ್ 2024, 8:06 IST
Last Updated 10 ಜೂನ್ 2024, 8:06 IST
ಅಕ್ಷರ ಗಾತ್ರ

ಇಂಫಾಲ: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಸಮೀಪ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಭದ್ರತಾ ಬೆಂಗಾವಲು ಪಡೆಯ ಮೇಲೆ ಶಂಕಿತ ಉಗ್ರರು ಹೊಂಚುದಾಳಿ ನಡೆಸಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂಸಾಚಾರ ಪೀಡಿತ ಜಿರಿಬಾಮ್ ಜಿಲ್ಲೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಭದ್ರತಾ ಪಡೆಗಳ ವಾಹನಗಳ ಮೇಲೆ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಎಚ್ಚೆತ್ತ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿವೆ. ಕೋಟ್ಲೆನ್ ಗ್ರಾಮದ ಬಳಿ ಇನ್ನೂ ಗುಂಡಿನ ದಾಳಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ದೆಹಲಿಯಲ್ಲಿದ್ದು, ಇಂಫಾಲಗೆ ತಲುಪಿದ ನಂತರ ಜಿರಿಬಾಮ್‌ಗೆ ಭೇಟಿ ನೀಡಲು ಯೋಜಿಸಿದ್ದರು ಎಂದು ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT