ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ ಹಿಂಸಾಚಾರ ಪ್ರಕರಣ: ಕರ್ಫ್ಯೂ ಸಡಿಲಿಕೆ

Published 7 ಆಗಸ್ಟ್ 2023, 13:24 IST
Last Updated 7 ಆಗಸ್ಟ್ 2023, 13:24 IST
ಅಕ್ಷರ ಗಾತ್ರ

ಇಂಫಾಲ್‌: ಹಿಂಸಾಚಾರ ಪೀಡಿತ ಮಣಿಪುರದ ಪೂರ್ವ ಮತ್ತು ಪಶ್ಚಿಮ ಜಿಲ್ಲೆಗಳಲ್ಲಿ ಸೋಮವಾರ ಬೆಳಿಗ್ಗೆ 5ಗಂಟೆಯಿಂದ ಮಧ್ಯಾಹ್ನದ ವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿತ್ತು.

‘ಔಷಧ ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸಲು ಜನರಿಗೆ ಅನುಕೂಲವಾಗುವಂತೆ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ’ ಎಂದು ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪ್ರತ್ಯೇಕ ಹೇಳಿಕೆಗಳಲ್ಲಿ ತಿಳಿಸಿದ್ದಾರೆ.

ವಿಷ್ಣುಪುರ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಮೂವರನ್ನು ಹತ್ಯೆ ಮಾಡಿದ ಬಳಿಕ ಈ ಎರಡು ಜಿಲ್ಲೆಗಳಲ್ಲಿ ಬೆಳಿಗ್ಗೆ 5ರಿಂದ ಸಂಜೆ 6ರ ವರೆಗಿದ್ದ ಕರ್ಫ್ಯೂ ಸಡಿಲಿಕೆ ಅವಧಿಯನ್ನು ಬೆಳಿಗ್ಗೆ 5ರಿಂದ 10.30ರ ವರೆಗೆ ಮೊಟಕುಗೊಳಿಸಲಾಗಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT