<p><strong>ಗುವಾಹಟಿ:</strong> ಜನಾಂಗೀಯ ಸಂಘರ್ಷ ಪೀಡಿತ ರಾಜ್ಯ ಮಣಿಪುರದಲ್ಲಿ ಶಾಂತಿ ಮರುಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಗುರುವಾರ ಅಶ್ರುವಾಯು ಶೆಲ್ ದಾಳಿ ನಡೆಸಿದ್ದಾರೆ. ಇದರಿಂದ ಮೈತೇಯಿ ಸಮುದಾಯಕ್ಕೆ ಸೇರಿದ ಎಂಟು ಜನರು ಮತ್ತು ವಿಡಿಯೊ ಪತ್ರಕರ್ತರೊಬ್ಬರು ಗಾಯಗೊಂಡಿದ್ದಾರೆ. </p>.<p>ಇಂಫಾಲ್ನ ಅಖಂಪತ್ ಪ್ರದೇಶದಲ್ಲಿನ ಪರಿಹಾರ ಶಿಬಿರದ ಕಡೆಯಿಂದ ಪ್ರತಿಭಟನಾ ಮೆರವಣಿಗೆ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಅಧಿಕೃತ ನಿವಾಸದ ಕಡೆಗೆ ಸಾಗಿದಾಗ, ಪೊಲೀಸರು ಅಶ್ರುವಾಯು ಶೆಲ್ ದಾಳಿ ನಡೆಸಿದರು ಎಂದು ಮೂಲಗಳು ತಿಳಿಸಿವೆ. </p>.<p>ಶಾಂತಿ ಮರುಸ್ಥಾಪನೆಗೆ ಒತ್ತಾಯಿಸಿದ ಪ್ರತಿಭಟನಕಾರರು, ತೆಂಗ್ನೌಪಾಲ್ ಮತ್ತು ಚುರಾಚಂದಪುರ ಜಿಲ್ಲೆಯ ಕುಕಿ ಪ್ರಾಬಲ್ಯದ ಪ್ರದೇಶದಲ್ಲಿನ ತಮ್ಮ ನಿವಾಸಗಳಿಗೆ ತೆರಳಲು ಅವಕಾಶ ಮಾಡಿಕೊಡುವಂತೆ ಆಗ್ರಹಿಸಿದರು. ಕಳೆದ ವರ್ಷದ ಮೇ 3ರಂದು ಹಿಂಸಾಚಾರ ಭುಗಿಲೆದ್ದ ಬಳಿಕ, ಆ ಪ್ರದೇಶಗಳಲ್ಲಿನ ಜನರು ಮೈತೇಯಿ ಪ್ರಾಬಲ್ಯದ ಇಂಫಾಲ್ನಲ್ಲಿ ಆಶ್ರಯ ಪಡೆದಿದ್ದಾರೆ.</p>.<p>ಕುಕಿ ಮತ್ತು ಮೈತೇಯಿ ಜನಾಂಗಗಳ ನಡುವೆ ಸಂಘರ್ಷ ಆರಂಭವಾದಾಗಿನಿಂದ 226 ಜನರು ಮೃತಪಟ್ಟಿದ್ದು, 60,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಜನಾಂಗೀಯ ಸಂಘರ್ಷ ಪೀಡಿತ ರಾಜ್ಯ ಮಣಿಪುರದಲ್ಲಿ ಶಾಂತಿ ಮರುಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಗುರುವಾರ ಅಶ್ರುವಾಯು ಶೆಲ್ ದಾಳಿ ನಡೆಸಿದ್ದಾರೆ. ಇದರಿಂದ ಮೈತೇಯಿ ಸಮುದಾಯಕ್ಕೆ ಸೇರಿದ ಎಂಟು ಜನರು ಮತ್ತು ವಿಡಿಯೊ ಪತ್ರಕರ್ತರೊಬ್ಬರು ಗಾಯಗೊಂಡಿದ್ದಾರೆ. </p>.<p>ಇಂಫಾಲ್ನ ಅಖಂಪತ್ ಪ್ರದೇಶದಲ್ಲಿನ ಪರಿಹಾರ ಶಿಬಿರದ ಕಡೆಯಿಂದ ಪ್ರತಿಭಟನಾ ಮೆರವಣಿಗೆ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಅಧಿಕೃತ ನಿವಾಸದ ಕಡೆಗೆ ಸಾಗಿದಾಗ, ಪೊಲೀಸರು ಅಶ್ರುವಾಯು ಶೆಲ್ ದಾಳಿ ನಡೆಸಿದರು ಎಂದು ಮೂಲಗಳು ತಿಳಿಸಿವೆ. </p>.<p>ಶಾಂತಿ ಮರುಸ್ಥಾಪನೆಗೆ ಒತ್ತಾಯಿಸಿದ ಪ್ರತಿಭಟನಕಾರರು, ತೆಂಗ್ನೌಪಾಲ್ ಮತ್ತು ಚುರಾಚಂದಪುರ ಜಿಲ್ಲೆಯ ಕುಕಿ ಪ್ರಾಬಲ್ಯದ ಪ್ರದೇಶದಲ್ಲಿನ ತಮ್ಮ ನಿವಾಸಗಳಿಗೆ ತೆರಳಲು ಅವಕಾಶ ಮಾಡಿಕೊಡುವಂತೆ ಆಗ್ರಹಿಸಿದರು. ಕಳೆದ ವರ್ಷದ ಮೇ 3ರಂದು ಹಿಂಸಾಚಾರ ಭುಗಿಲೆದ್ದ ಬಳಿಕ, ಆ ಪ್ರದೇಶಗಳಲ್ಲಿನ ಜನರು ಮೈತೇಯಿ ಪ್ರಾಬಲ್ಯದ ಇಂಫಾಲ್ನಲ್ಲಿ ಆಶ್ರಯ ಪಡೆದಿದ್ದಾರೆ.</p>.<p>ಕುಕಿ ಮತ್ತು ಮೈತೇಯಿ ಜನಾಂಗಗಳ ನಡುವೆ ಸಂಘರ್ಷ ಆರಂಭವಾದಾಗಿನಿಂದ 226 ಜನರು ಮೃತಪಟ್ಟಿದ್ದು, 60,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>