<p><strong>ಇಂಫಾಲ</strong>: ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಿಂದ 2023 ರಿಂದ ಈ ವರ್ಷದ ಮಾರ್ಚ್ ಅಂತ್ಯದವರೆಗೆ 58,821 ಜನರು ನಿರ್ವಸಿತಗರಾಗಿದ್ದಾರೆ ಎಂದು ರಾಜ್ಯ ಸರ್ಕಾರ ಬುಧವಾರ ತಿಳಿಸಿದೆ.</p><p>ಮಣಿಪುರ ಕಾಂಗ್ರೆಸ್ ನಾಯಕ ಹರೇಶ್ವರ್ ಗೋಸ್ವಾಮಿ ಅವರು ಸಲ್ಲಿಸಿದ್ದ ಮಾಹಿತಿ ಹಕ್ಕು ಕಾಯ್ದೆ (RTI) ಅರ್ಜಿಗೆ ಏಪ್ರಿಲ್ 20 ರಂದು ಗೃಹ ಸಚಿವಾಲಯವು ಈ ಅಂಕಿಅಂಶಗಳನ್ನು ನೀಡಿದೆ.</p><p>ಜನಾಂಗೀಯ ಹಿಂಸಾಚಾರದಲ್ಲಿ 217 ಜನರು ಮೃತಪಟ್ಟಿದ್ದಾರೆ. ಮೃತರ ವಾರಸುದಾರರಿಗೆ ನೀಡಿದ ಪರಿಹಾರದ ಆಧಾರದ ಮೇಲೆ ಈ ಅಂಕಿ ಅಂಶ ನೀಡಲಾಗಿದೆ.</p><p>2026 ಮಾರ್ಚ್ ಅಂತ್ಯದವರೆಗಿನ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಒಟ್ಟು 174 ಪರಿಹಾರ ಶಿಬಿರಗಳು ಕಾರ್ಯನಿರ್ವಹಿಸುತ್ತಿದ್ದು ಇವುಗಳಲ್ಲಿ ಸಾವಿರಾರು ಜನರು ಆಶ್ರಯ ಪಡೆದಿದ್ದಾರೆ ಎಂದು ಮಾಹಿತಿಯಲ್ಲಿ ಉಲ್ಲೇಖಿಸಲಾಗಿದೆ. </p><p>ಜನಾಂಗೀಯ ಹಿಂಸಾಚಾರದ ಪರಿಣಾಮ ಇಲ್ಲಿಯವರೆಗೂ 7,894 ಮನೆಗಳು ಸಂಪೂರ್ಣ ನಾಶವಾಗಿದ್ದು 2,646 ಮನೆಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಇಲಾಖೆ ಮಾಹಿತಿ ನೀಡಿದೆ.</p><p>ಸಂತ್ರಸ್ತರಿಗೆ ಮಣಿಪುರ ಪೊಲೀಸ್ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ 3,000 ತಾತ್ಕಾಲಿಕ (ಪ್ರಿ-ಫ್ಯಾಬ್ರಿಕೇಟೆಡ್) ಮನೆಗಳನ್ನು ನಿರ್ಮಿಸಿದೆ. </p><p>ನಿರ್ವಸಿತರಾದವರ ಮಾಹಿತಿ ಕಲೆ ಹಾಕಲು ನಮಗೆ ಏಳು ತಿಂಗಳ ಬೇಕಾಯಿತು ಎಂದು ಹರೇಶ್ವರ್ ಗೋಸ್ವಾಮಿ ಹೇಳಿದ್ದಾರೆ.</p><p>ಮಣಿಪುರದ ಕಣಿವೆಯಲ್ಲಿ ಮೈತೇಯಿ ಸಮುದಾಯ ಮತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುವ ಕುಕಿ ಸಮುದಾಯಗಳ ನಡುವೆ 2023ರಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು.</p>.ಮಣಿಪುರ | ಜನಾಂಗೀಯ ಹಿಂಸಾಚಾರ : ಬಲಬೀರ್ ಸಿಂಗ್ ತನಿಖಾ ಸಮಿತಿ ಅಧ್ಯಕ್ಷ.ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ: ಗೀತಾ ಮಿತ್ತಲ್ ಸಮಿತಿಯ ಅವಧಿ ವಿಸ್ತರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ</strong>: ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಿಂದ 2023 ರಿಂದ ಈ ವರ್ಷದ ಮಾರ್ಚ್ ಅಂತ್ಯದವರೆಗೆ 58,821 ಜನರು ನಿರ್ವಸಿತಗರಾಗಿದ್ದಾರೆ ಎಂದು ರಾಜ್ಯ ಸರ್ಕಾರ ಬುಧವಾರ ತಿಳಿಸಿದೆ.</p><p>ಮಣಿಪುರ ಕಾಂಗ್ರೆಸ್ ನಾಯಕ ಹರೇಶ್ವರ್ ಗೋಸ್ವಾಮಿ ಅವರು ಸಲ್ಲಿಸಿದ್ದ ಮಾಹಿತಿ ಹಕ್ಕು ಕಾಯ್ದೆ (RTI) ಅರ್ಜಿಗೆ ಏಪ್ರಿಲ್ 20 ರಂದು ಗೃಹ ಸಚಿವಾಲಯವು ಈ ಅಂಕಿಅಂಶಗಳನ್ನು ನೀಡಿದೆ.</p><p>ಜನಾಂಗೀಯ ಹಿಂಸಾಚಾರದಲ್ಲಿ 217 ಜನರು ಮೃತಪಟ್ಟಿದ್ದಾರೆ. ಮೃತರ ವಾರಸುದಾರರಿಗೆ ನೀಡಿದ ಪರಿಹಾರದ ಆಧಾರದ ಮೇಲೆ ಈ ಅಂಕಿ ಅಂಶ ನೀಡಲಾಗಿದೆ.</p><p>2026 ಮಾರ್ಚ್ ಅಂತ್ಯದವರೆಗಿನ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಒಟ್ಟು 174 ಪರಿಹಾರ ಶಿಬಿರಗಳು ಕಾರ್ಯನಿರ್ವಹಿಸುತ್ತಿದ್ದು ಇವುಗಳಲ್ಲಿ ಸಾವಿರಾರು ಜನರು ಆಶ್ರಯ ಪಡೆದಿದ್ದಾರೆ ಎಂದು ಮಾಹಿತಿಯಲ್ಲಿ ಉಲ್ಲೇಖಿಸಲಾಗಿದೆ. </p><p>ಜನಾಂಗೀಯ ಹಿಂಸಾಚಾರದ ಪರಿಣಾಮ ಇಲ್ಲಿಯವರೆಗೂ 7,894 ಮನೆಗಳು ಸಂಪೂರ್ಣ ನಾಶವಾಗಿದ್ದು 2,646 ಮನೆಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಇಲಾಖೆ ಮಾಹಿತಿ ನೀಡಿದೆ.</p><p>ಸಂತ್ರಸ್ತರಿಗೆ ಮಣಿಪುರ ಪೊಲೀಸ್ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ 3,000 ತಾತ್ಕಾಲಿಕ (ಪ್ರಿ-ಫ್ಯಾಬ್ರಿಕೇಟೆಡ್) ಮನೆಗಳನ್ನು ನಿರ್ಮಿಸಿದೆ. </p><p>ನಿರ್ವಸಿತರಾದವರ ಮಾಹಿತಿ ಕಲೆ ಹಾಕಲು ನಮಗೆ ಏಳು ತಿಂಗಳ ಬೇಕಾಯಿತು ಎಂದು ಹರೇಶ್ವರ್ ಗೋಸ್ವಾಮಿ ಹೇಳಿದ್ದಾರೆ.</p><p>ಮಣಿಪುರದ ಕಣಿವೆಯಲ್ಲಿ ಮೈತೇಯಿ ಸಮುದಾಯ ಮತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುವ ಕುಕಿ ಸಮುದಾಯಗಳ ನಡುವೆ 2023ರಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು.</p>.ಮಣಿಪುರ | ಜನಾಂಗೀಯ ಹಿಂಸಾಚಾರ : ಬಲಬೀರ್ ಸಿಂಗ್ ತನಿಖಾ ಸಮಿತಿ ಅಧ್ಯಕ್ಷ.ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ: ಗೀತಾ ಮಿತ್ತಲ್ ಸಮಿತಿಯ ಅವಧಿ ವಿಸ್ತರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>