<p><strong>ಇಂಫಾಲ್:</strong> ಬಿಷ್ಣುಪುರ ಜಿಲ್ಲೆಯ ಫುಬಲಾ ಗ್ರಾಮದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಗುಂಪಿನ ಮೇಲೆ ಹತ್ತಿರದ ಗುಡ್ಡಗಾಡು ಪ್ರದೇಶಗಳಿಂದ ಗುಂಡಿನ ದಾಳಿ ನಡೆಸಿದ್ದರಿಂದ ರೈತರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ನಿಂಗ್ತೌಜಮ್ ಬಿರೇನ್ ಅವರು ಗುಂಡಿನ ದಾಳಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. </p>.<p>‘ನಾನು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಐದು ಸುತ್ತು ಗುಂಡಿನ ದಾಳಿ ನಡೆಸಿದರು. ಸುತ್ತಲಿನ ಗುಡ್ಡಗಾಡು ಪ್ರದೇಶದಿಂದಲೇ ಈ ದಾಳಿ ನಡೆದಿದೆ’ ಎಂದು ಅವರು ತಿಳಿಸಿದರು.</p>.<p class="title">ಇಂಫಾಲ್ ಕಣಿವೆಯ ಹೊರವಲಯದಲ್ಲಿರುವ ಫುಬಲಾ ವಿಸ್ತಾರವಾದ ಕೃಷಿ ಭೂಮಿಯನ್ನು ಹೊಂದಿದ್ದು, ಒಂದು ಭಾಗದಲ್ಲಿ ಚುರಾಚಾಂದ್ಪುರದ ಬೆಟ್ಟ ಗುಡ್ಡಗಳನ್ನು ಒಳಗೊಂಡಿದೆ. ಘಟನೆ ನಡೆದ ಬಳಿಕ ಭದ್ರತಾ ಪಡೆಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.</p>.<p class="title">‘ಸ್ಥಳೀಯರು ಫುಬಲಾವನ್ನು ಸಂಪೂರ್ಣ ಬಂದ್ ಮಾಡಿ, ಪ್ರತಿಭಟನೆ ನಡೆಸಿದರು. ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಸಂಚಾರ ಮಾಡುವುದನ್ನು ನಿರ್ಬಂಧಿಸಿ, ಭದ್ರತಾ ಪಡೆಗಳು ಕ್ರಮ ಕೈಗೊಂಡಿವೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್:</strong> ಬಿಷ್ಣುಪುರ ಜಿಲ್ಲೆಯ ಫುಬಲಾ ಗ್ರಾಮದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಗುಂಪಿನ ಮೇಲೆ ಹತ್ತಿರದ ಗುಡ್ಡಗಾಡು ಪ್ರದೇಶಗಳಿಂದ ಗುಂಡಿನ ದಾಳಿ ನಡೆಸಿದ್ದರಿಂದ ರೈತರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ನಿಂಗ್ತೌಜಮ್ ಬಿರೇನ್ ಅವರು ಗುಂಡಿನ ದಾಳಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. </p>.<p>‘ನಾನು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಐದು ಸುತ್ತು ಗುಂಡಿನ ದಾಳಿ ನಡೆಸಿದರು. ಸುತ್ತಲಿನ ಗುಡ್ಡಗಾಡು ಪ್ರದೇಶದಿಂದಲೇ ಈ ದಾಳಿ ನಡೆದಿದೆ’ ಎಂದು ಅವರು ತಿಳಿಸಿದರು.</p>.<p class="title">ಇಂಫಾಲ್ ಕಣಿವೆಯ ಹೊರವಲಯದಲ್ಲಿರುವ ಫುಬಲಾ ವಿಸ್ತಾರವಾದ ಕೃಷಿ ಭೂಮಿಯನ್ನು ಹೊಂದಿದ್ದು, ಒಂದು ಭಾಗದಲ್ಲಿ ಚುರಾಚಾಂದ್ಪುರದ ಬೆಟ್ಟ ಗುಡ್ಡಗಳನ್ನು ಒಳಗೊಂಡಿದೆ. ಘಟನೆ ನಡೆದ ಬಳಿಕ ಭದ್ರತಾ ಪಡೆಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.</p>.<p class="title">‘ಸ್ಥಳೀಯರು ಫುಬಲಾವನ್ನು ಸಂಪೂರ್ಣ ಬಂದ್ ಮಾಡಿ, ಪ್ರತಿಭಟನೆ ನಡೆಸಿದರು. ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಸಂಚಾರ ಮಾಡುವುದನ್ನು ನಿರ್ಬಂಧಿಸಿ, ಭದ್ರತಾ ಪಡೆಗಳು ಕ್ರಮ ಕೈಗೊಂಡಿವೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>