<p><strong>ಇಂಫಾಲ್</strong>: ಮಣಿಪುರದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪರಿಹಾರ ಶಿಬಿರಗಳಲ್ಲಿ ನೆಲೆಸಿರುವ ಮಕ್ಕಳಿಗಾಗಿ ‘ಸ್ಕೂಲ್ ಆನ್ ವ್ಹೀಲ್ಸ್’ ಕಾರ್ಯಕ್ರಮಕ್ಕೆ ರಾಜ್ಯಪಾಲೆ ಅನುಸೂಯ ಉಯಿಕೆ ಭಾನುವಾರ ಚಾಲನೆ ನೀಡಿದರು ಎಂದು ರಾಜಭವನ ತಿಳಿಸಿದೆ.</p>.<p>ಬಾಲ ವಿದ್ಯಾ ಮಂದಿರ ಸಂಕೀರ್ಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಗ್ರಂಥಾಲಯ, ಸ್ಮಾರ್ಟ್ ಟಿ.ವಿ, ಕಂಪ್ಯೂಟರ್ ಮತ್ತು ಕ್ರೀಡಾ ಪರಿಕರಗಳನ್ನು ಒಳಗೊಂಡಿರುವ ಶಾಲಾ ಬಸ್, ಶಿಕ್ಷಕರೊಂದಿಗೆ ಪರಿಹಾರ ಶಿಬಿರಗಳಿಗೆ ತೆರಳಲಿದೆ’ ಎಂದು ಹೇಳಿದರು.</p>.<p>‘ರಾಜ್ಯದಲ್ಲಿ ಕಳೆದ ವರ್ಷ ಮೇ 3ರಿಂದ ಆರಂಭವಾದ ಜನಾಂಗೀಯ ಸಂಘರ್ಷದಿಂದ ಸಾವಿರಾರು ಜನರು ಅದರಲ್ಲೂ ವಿದ್ಯಾರ್ಥಿಗಳು ನಲುಗಿದ್ದಾರೆ. ಈ ಯೋಜನೆಯು ವಿದ್ಯಾರ್ಥಿಗಳನ್ನು ತಲುಪಿ ಅಗತ್ಯ ಶಿಕ್ಷಣ ನೀಡಲಿದೆ’ ಎಂದು ತಿಳಿಸಿದರು.</p>.<p>ಸ್ಥಳಾಂತರಗೊಂಡಿರುವ ಜನರಿಗೆ ಶಾಶ್ವತ ನೆಲೆ ಕಲ್ಪಿಸುವಂತೆ ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ ಎಂದು ಹೇಳಿದರು.</p>.<p>ರಾಜ್ಯದಲ್ಲಿ ಸುಮಾರು 18,000 ವಿದ್ಯಾರ್ಥಿಗಳು 480 ಪರಿಹಾರ ಶಿಬಿರಗಳಲ್ಲಿ ನೆಲೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್</strong>: ಮಣಿಪುರದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪರಿಹಾರ ಶಿಬಿರಗಳಲ್ಲಿ ನೆಲೆಸಿರುವ ಮಕ್ಕಳಿಗಾಗಿ ‘ಸ್ಕೂಲ್ ಆನ್ ವ್ಹೀಲ್ಸ್’ ಕಾರ್ಯಕ್ರಮಕ್ಕೆ ರಾಜ್ಯಪಾಲೆ ಅನುಸೂಯ ಉಯಿಕೆ ಭಾನುವಾರ ಚಾಲನೆ ನೀಡಿದರು ಎಂದು ರಾಜಭವನ ತಿಳಿಸಿದೆ.</p>.<p>ಬಾಲ ವಿದ್ಯಾ ಮಂದಿರ ಸಂಕೀರ್ಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಗ್ರಂಥಾಲಯ, ಸ್ಮಾರ್ಟ್ ಟಿ.ವಿ, ಕಂಪ್ಯೂಟರ್ ಮತ್ತು ಕ್ರೀಡಾ ಪರಿಕರಗಳನ್ನು ಒಳಗೊಂಡಿರುವ ಶಾಲಾ ಬಸ್, ಶಿಕ್ಷಕರೊಂದಿಗೆ ಪರಿಹಾರ ಶಿಬಿರಗಳಿಗೆ ತೆರಳಲಿದೆ’ ಎಂದು ಹೇಳಿದರು.</p>.<p>‘ರಾಜ್ಯದಲ್ಲಿ ಕಳೆದ ವರ್ಷ ಮೇ 3ರಿಂದ ಆರಂಭವಾದ ಜನಾಂಗೀಯ ಸಂಘರ್ಷದಿಂದ ಸಾವಿರಾರು ಜನರು ಅದರಲ್ಲೂ ವಿದ್ಯಾರ್ಥಿಗಳು ನಲುಗಿದ್ದಾರೆ. ಈ ಯೋಜನೆಯು ವಿದ್ಯಾರ್ಥಿಗಳನ್ನು ತಲುಪಿ ಅಗತ್ಯ ಶಿಕ್ಷಣ ನೀಡಲಿದೆ’ ಎಂದು ತಿಳಿಸಿದರು.</p>.<p>ಸ್ಥಳಾಂತರಗೊಂಡಿರುವ ಜನರಿಗೆ ಶಾಶ್ವತ ನೆಲೆ ಕಲ್ಪಿಸುವಂತೆ ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ ಎಂದು ಹೇಳಿದರು.</p>.<p>ರಾಜ್ಯದಲ್ಲಿ ಸುಮಾರು 18,000 ವಿದ್ಯಾರ್ಥಿಗಳು 480 ಪರಿಹಾರ ಶಿಬಿರಗಳಲ್ಲಿ ನೆಲೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>