ನವದೆಹಲಿ: ಮಣಿಪುರದ ಇಂಫಾಲದ ಪ್ಯಾಲೇಸ್ ಗ್ರೌಂಡ್ನಿಂದ 'ಭಾರತ್ ಜೋಡೊ ನ್ಯಾಯ ಯಾತ್ರೆ' ಆರಂಭಿಸಲು ಅವಕಾಶ ನಿರಾಕರಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಹಾಗೂ ಕೆ.ಸಿ. ವೇಣುಗೋಪಾಲ್, ಭಾರತ್ ಜೋಡೊ ನ್ಯಾಯ ಯಾತ್ರೆಯ ಕರಪತ್ರ ಹಾಗೂ ವೆಬ್ಸೈಟ್ ಅನ್ನು ಇಂದು ಬಿಡುಗಡೆಗೊಳಿಸಿದ್ದಾರೆ.
ಈ ವೇಳೆ ಮಾತನಾಡಿದ ವೇಣುಗೋಪಾಲ್, ಇಂಫಾಲದ ಪ್ಯಾಲೇಸ್ ಗ್ರೌಂಡ್ನಿಂದ ಯಾತ್ರೆ ಆರಂಭಿಸಲು ಮಣಿಪುರದ ಸರ್ಕಾರ ಅವಕಾಶ ನಿರಾಕರಿಸಿದೆ ಎಂದು ಹೇಳಿದ್ದಾರೆ.
ಮಣಿಪುರದಿಂದ ಯಾತ್ರೆ ಆರಂಭಿಸಲು ಕಾಂಗ್ರೆಸ್ ನಿರ್ಧರಿಸಿತ್ತು. ಈಗ ಇಂಫಾಲದ ಮತ್ತೊಂದು ಸ್ಥಳದಿಂದ ಯಾತ್ರೆ ಆರಂಭಿಸಲು ಅವಕಾಶ ಕೋರಲಾಗಿದೆ ಎಂದು ಅವರು ತಿಳಿಸಿದ್ದಾರೆ.