<p><strong>ಇಂಫಾಲ್:</strong> ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ರಾಜಭವನದಲ್ಲಿ ಪೊಲೀಸ್, ಸಿಆರ್ಪಿಎಫ್, ಬಿಎಸ್ಎಫ್, ಅಸ್ಸಾಂ ರೈಫಲ್ಸ್ನ ಹಿರಿಯ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದರು. ರಾಜ್ಯದ ಭದ್ರತಾ ಸ್ಥಿತಿಗತಿಯ ಬಗ್ಗೆ ಸಮಗ್ರ ಮಾಹಿತಿ ಪಡೆದರು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.</p>.<p>‘ಭದ್ರತಾ ಪರಿಕರಗಳು ಮತ್ತು ಅವುಗಳ ನಿಯೋಜನೆಯನ್ನು ಪರಿಶೀಲಿಸಿದರು’ ಎಂದು ಹೇಳಿಕೆ ತಿಳಿಸಿದೆ.</p>.<p>ರಾಜ್ಯದ ಜನರ ಸುರಕ್ಷತೆ ಮತ್ತು ರಕ್ಷಣೆಗೆ ಆದ್ಯತೆ ನೀಡಬೇಕೆಂದು ಡಿಜಿಪಿ ಅವರಿಗೆ ಸೂಚಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಆಡಳಿತಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಸೇನೆ ಮತ್ತು ಅರೆಸೇನಾ ಪಡೆಯ ಅಧಿಕಾರಿಗಳಿಗೆ ಮನವಿ ಮಾಡಿದರು.</p>.<p>ಸರ್ಕಾರದ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್, ಡಿಜಿಪಿ ರಾಜೀವ್ ಸಿಂಗ್, ಐಜಿಎಆರ್ (ದಕ್ಷಿಣ) ಮೇಜರ್ ಜನರಲ್ ರಾವ್ರೂಪ್ ಸಿಂಗ್ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.</p>.<p><strong>‘ಹೊಣೆಯಿಂದ ತಪ್ಪಿಸಿಕೊಳ್ಳಲಾಗದು’</strong></p><p><strong>ನವದೆಹಲಿ:</strong> ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಸಂಭವಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಟೀಕಾಪ್ರಹಾರ ನಡೆಸಿರುವ ಕಾಂಗ್ರೆಸ್, ರಾಜಧರ್ಮವನ್ನು ಪಾಲಿಸದ ಸಾಂವಿಧಾನಿಕ ಹೊಣೆಗಾರಿಕೆಯಿಂದ ಅವರು ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದೆ.</p><p>ಮಣಿಪುರದಲ್ಲಿ ಸಂಘರ್ಷ ಮುಂದುವರಿಯುವಂತೆ ನೋಡಿಕೊಳ್ಳುವಲ್ಲಿ ಬಿಜೆಪಿಗೆ ಸ್ವಹಿತಾಸಕ್ತಿ ಇದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್:</strong> ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ರಾಜಭವನದಲ್ಲಿ ಪೊಲೀಸ್, ಸಿಆರ್ಪಿಎಫ್, ಬಿಎಸ್ಎಫ್, ಅಸ್ಸಾಂ ರೈಫಲ್ಸ್ನ ಹಿರಿಯ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದರು. ರಾಜ್ಯದ ಭದ್ರತಾ ಸ್ಥಿತಿಗತಿಯ ಬಗ್ಗೆ ಸಮಗ್ರ ಮಾಹಿತಿ ಪಡೆದರು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.</p>.<p>‘ಭದ್ರತಾ ಪರಿಕರಗಳು ಮತ್ತು ಅವುಗಳ ನಿಯೋಜನೆಯನ್ನು ಪರಿಶೀಲಿಸಿದರು’ ಎಂದು ಹೇಳಿಕೆ ತಿಳಿಸಿದೆ.</p>.<p>ರಾಜ್ಯದ ಜನರ ಸುರಕ್ಷತೆ ಮತ್ತು ರಕ್ಷಣೆಗೆ ಆದ್ಯತೆ ನೀಡಬೇಕೆಂದು ಡಿಜಿಪಿ ಅವರಿಗೆ ಸೂಚಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಆಡಳಿತಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಸೇನೆ ಮತ್ತು ಅರೆಸೇನಾ ಪಡೆಯ ಅಧಿಕಾರಿಗಳಿಗೆ ಮನವಿ ಮಾಡಿದರು.</p>.<p>ಸರ್ಕಾರದ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್, ಡಿಜಿಪಿ ರಾಜೀವ್ ಸಿಂಗ್, ಐಜಿಎಆರ್ (ದಕ್ಷಿಣ) ಮೇಜರ್ ಜನರಲ್ ರಾವ್ರೂಪ್ ಸಿಂಗ್ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.</p>.<p><strong>‘ಹೊಣೆಯಿಂದ ತಪ್ಪಿಸಿಕೊಳ್ಳಲಾಗದು’</strong></p><p><strong>ನವದೆಹಲಿ:</strong> ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಸಂಭವಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಟೀಕಾಪ್ರಹಾರ ನಡೆಸಿರುವ ಕಾಂಗ್ರೆಸ್, ರಾಜಧರ್ಮವನ್ನು ಪಾಲಿಸದ ಸಾಂವಿಧಾನಿಕ ಹೊಣೆಗಾರಿಕೆಯಿಂದ ಅವರು ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದೆ.</p><p>ಮಣಿಪುರದಲ್ಲಿ ಸಂಘರ್ಷ ಮುಂದುವರಿಯುವಂತೆ ನೋಡಿಕೊಳ್ಳುವಲ್ಲಿ ಬಿಜೆಪಿಗೆ ಸ್ವಹಿತಾಸಕ್ತಿ ಇದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>