<p><strong>ಇಂಫಾಲ್</strong>: ರಾಜ್ಯದ ಜಿರಿಬಾಮ್ ಜಿಲ್ಲೆಯಲ್ಲಿ ಕಳೆದ ವರ್ಷ ಮೈತೇಯಿ ಸಮುದಾಯದ ಆರು ಜನರ ಹತ್ಯೆ ಕುರಿತು ನಡೆಯುತ್ತಿರುವ ತನಿಖೆಯಲ್ಲಿನ ಪ್ರಗತಿ ಕುರಿತಂತೆ ‘ವಿಸ್ತೃತ ವರದಿ’ಯನ್ನು ಸಲ್ಲಿಸುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ(ಎನ್ಐಎ) ಮಣಿಪುರ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>‘ಈ ಪ್ರಕರಣಕ್ಕೆ ಸಂಬಂಧಿಸಿ, ಆರೋಪಪಟ್ಟಿಯನ್ನು ಸಲ್ಲಿಸದೇ ಇದ್ದಲ್ಲಿ, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು’ ಎಂದು ಮುಖ್ಯ ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಅಹಂತೆಮ್ ಬಿಮಲ್ ಸಿಂಗ್ ಅವರು ಇದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ಹೇಳಿದೆ.</p>.<p>ಸೋರಮ್ ತೆಕೇಂದ್ರಜಿತ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯನ್ನು ನ್ಯಾಯಪೀಠ ನಡೆಸಿತು.</p>.<p>ಕಳೆದ ವರ್ಷ ನವೆಂಬರ್ 11ರಂದು ಜಿರಿಬಾಮ್ ಜಿಲ್ಲೆಯ ಬೊರೊಬೆಕ್ರಾ ಪ್ರದೇಶದಲ್ಲಿ ಕುಕಿ ಹಮರ್ ಬಂಡುಕೋರರು ಮೈತೇಯಿ ಸಮುದಾಯಕ್ಕೆ ಸೇರಿದ ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳನ್ನು ಹತ್ಯೆ ಮಾಡಿದ್ದರು. </p>.<p>ವಿಚಾರಣೆ ವೇಳೆ, ಪ್ರಕರಣ ಕುರಿತ ತನಿಖೆಯಲ್ಲಿ ಪ್ರಗತಿ ಕಂಡುಬಂದಿಲ್ಲ ಎಂದು ನ್ಯಾಯಪೀಠ ಕಳವಳ ವ್ಯಕ್ತಪಡಿಸಿತು.</p>.<p>‘ಘಟನೆ ನಡೆದ ದಿನವೇ ಸಂಬಂಧಪಟ್ಟ ಪ್ರಾಧಿಕಾರವು ಎಫ್ಐಆರ್ ದಾಖಲಿಸಿದೆ. ಆದರೆ, ಈ ವರೆಗೂ ತನಿಖೆಯಲ್ಲಾದ ಪ್ರಗತಿ ಕುರಿತು ಎನ್ಐಎ ವರದಿ ಸಲ್ಲಿಸಿಲ್ಲ. ಆರೋಪಪಟ್ಟಿಯನ್ನೂ ದಾಖಲಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ವಿಚಾರಣೆಯನ್ನು ಜುಲೈ 24ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್</strong>: ರಾಜ್ಯದ ಜಿರಿಬಾಮ್ ಜಿಲ್ಲೆಯಲ್ಲಿ ಕಳೆದ ವರ್ಷ ಮೈತೇಯಿ ಸಮುದಾಯದ ಆರು ಜನರ ಹತ್ಯೆ ಕುರಿತು ನಡೆಯುತ್ತಿರುವ ತನಿಖೆಯಲ್ಲಿನ ಪ್ರಗತಿ ಕುರಿತಂತೆ ‘ವಿಸ್ತೃತ ವರದಿ’ಯನ್ನು ಸಲ್ಲಿಸುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ(ಎನ್ಐಎ) ಮಣಿಪುರ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>‘ಈ ಪ್ರಕರಣಕ್ಕೆ ಸಂಬಂಧಿಸಿ, ಆರೋಪಪಟ್ಟಿಯನ್ನು ಸಲ್ಲಿಸದೇ ಇದ್ದಲ್ಲಿ, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು’ ಎಂದು ಮುಖ್ಯ ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಅಹಂತೆಮ್ ಬಿಮಲ್ ಸಿಂಗ್ ಅವರು ಇದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ಹೇಳಿದೆ.</p>.<p>ಸೋರಮ್ ತೆಕೇಂದ್ರಜಿತ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯನ್ನು ನ್ಯಾಯಪೀಠ ನಡೆಸಿತು.</p>.<p>ಕಳೆದ ವರ್ಷ ನವೆಂಬರ್ 11ರಂದು ಜಿರಿಬಾಮ್ ಜಿಲ್ಲೆಯ ಬೊರೊಬೆಕ್ರಾ ಪ್ರದೇಶದಲ್ಲಿ ಕುಕಿ ಹಮರ್ ಬಂಡುಕೋರರು ಮೈತೇಯಿ ಸಮುದಾಯಕ್ಕೆ ಸೇರಿದ ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳನ್ನು ಹತ್ಯೆ ಮಾಡಿದ್ದರು. </p>.<p>ವಿಚಾರಣೆ ವೇಳೆ, ಪ್ರಕರಣ ಕುರಿತ ತನಿಖೆಯಲ್ಲಿ ಪ್ರಗತಿ ಕಂಡುಬಂದಿಲ್ಲ ಎಂದು ನ್ಯಾಯಪೀಠ ಕಳವಳ ವ್ಯಕ್ತಪಡಿಸಿತು.</p>.<p>‘ಘಟನೆ ನಡೆದ ದಿನವೇ ಸಂಬಂಧಪಟ್ಟ ಪ್ರಾಧಿಕಾರವು ಎಫ್ಐಆರ್ ದಾಖಲಿಸಿದೆ. ಆದರೆ, ಈ ವರೆಗೂ ತನಿಖೆಯಲ್ಲಾದ ಪ್ರಗತಿ ಕುರಿತು ಎನ್ಐಎ ವರದಿ ಸಲ್ಲಿಸಿಲ್ಲ. ಆರೋಪಪಟ್ಟಿಯನ್ನೂ ದಾಖಲಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ವಿಚಾರಣೆಯನ್ನು ಜುಲೈ 24ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>