<p><strong>ಇಂಫಾಲ್</strong>: ಮಣಿಪುರದಲ್ಲಿ ಕುಕಿ ಸಮುದಾಯದವರಿಗೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಜಾರಿಗೆ ತರುವಂತೆ ಆಗ್ರಹಿಸಿ ಕುಕಿ ಸಮುದಾಯದ ಮುಖಂಡರು ಶನಿವಾರ ರ್ಯಾಲಿ ನಡೆಸಿದ್ದಾರೆ. ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ತಮ್ಮ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆನ್ನಲಾದ ಆಡಿಯೊ ವಿರುದ್ಧವೂ ಪ್ರತಿಭಟಿಸಿದ್ದಾರೆ.</p>.<p>‘ಕುಕಿ ಸಮುದಾಯವರಿಗೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶ ರಚಿಸುವಂತೆ ಒತ್ತಾಯಿಸಲು ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು’ ಎಂದು ಮುಖಂಡರೊಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ನಮ್ಮ ಸಮುದಾಯದ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ್ದು, ಪ್ರತಿಭಟನೆಯಲ್ಲಿ ಅದನ್ನೂ ಖಂಡಿಸಲಾಗಿದೆ’ ಎಂದು ಮತ್ತೊಬ್ಬ ಪ್ರತಿಭಟನಕಾರರು ತಿಳಿಸಿದ್ದಾರೆ.</p>.<p>ಈ ಬಗ್ಗೆ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಮಣಿಪುರ ಸರ್ಕಾರ, ‘ಮುಖ್ಯಮಂತ್ರಿಯವರದ್ದು ಎನ್ನಲಾದ ಆಡಿಯೊ ಅಸಲಿಯಲ್ಲ. ಅದನ್ನು ತಿರುಚಲಾಗಿದೆ. ಮಣಿಪುದಲ್ಲಿ ಶಾಂತಿ ಕದಡುವ ದುರುದ್ದೇಶದಿಂದ ಈ ಆಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಪೊಲೀಸರು ಈ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆ’ ಎಂದು ತಿಳಿಸಿದೆ.</p>.<p>ಪಿಟಿಐ ಜತೆಗಿನ ಸಂದರ್ಶನದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಿರೇನ್ ಸಿಂಗ್, ಪ್ರತ್ಯೇಕ ಆಡಳಿತ ಕೋರಿರುವ ಕುಕಿ ಸಮುದಾಯದ ಮನವಿಯನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್</strong>: ಮಣಿಪುರದಲ್ಲಿ ಕುಕಿ ಸಮುದಾಯದವರಿಗೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಜಾರಿಗೆ ತರುವಂತೆ ಆಗ್ರಹಿಸಿ ಕುಕಿ ಸಮುದಾಯದ ಮುಖಂಡರು ಶನಿವಾರ ರ್ಯಾಲಿ ನಡೆಸಿದ್ದಾರೆ. ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ತಮ್ಮ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆನ್ನಲಾದ ಆಡಿಯೊ ವಿರುದ್ಧವೂ ಪ್ರತಿಭಟಿಸಿದ್ದಾರೆ.</p>.<p>‘ಕುಕಿ ಸಮುದಾಯವರಿಗೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶ ರಚಿಸುವಂತೆ ಒತ್ತಾಯಿಸಲು ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು’ ಎಂದು ಮುಖಂಡರೊಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ನಮ್ಮ ಸಮುದಾಯದ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ್ದು, ಪ್ರತಿಭಟನೆಯಲ್ಲಿ ಅದನ್ನೂ ಖಂಡಿಸಲಾಗಿದೆ’ ಎಂದು ಮತ್ತೊಬ್ಬ ಪ್ರತಿಭಟನಕಾರರು ತಿಳಿಸಿದ್ದಾರೆ.</p>.<p>ಈ ಬಗ್ಗೆ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಮಣಿಪುರ ಸರ್ಕಾರ, ‘ಮುಖ್ಯಮಂತ್ರಿಯವರದ್ದು ಎನ್ನಲಾದ ಆಡಿಯೊ ಅಸಲಿಯಲ್ಲ. ಅದನ್ನು ತಿರುಚಲಾಗಿದೆ. ಮಣಿಪುದಲ್ಲಿ ಶಾಂತಿ ಕದಡುವ ದುರುದ್ದೇಶದಿಂದ ಈ ಆಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಪೊಲೀಸರು ಈ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆ’ ಎಂದು ತಿಳಿಸಿದೆ.</p>.<p>ಪಿಟಿಐ ಜತೆಗಿನ ಸಂದರ್ಶನದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಿರೇನ್ ಸಿಂಗ್, ಪ್ರತ್ಯೇಕ ಆಡಳಿತ ಕೋರಿರುವ ಕುಕಿ ಸಮುದಾಯದ ಮನವಿಯನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>