<p><strong>ಇಂಫಾಲ್ (ಪಿಟಿಐ):</strong> ಬುಡಕಟ್ಟು ಸಮುದಾಯಗಳಿಗೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಒದಗಿಸಲು ಆಗ್ರಹಿಸಿ ಕುಕಿ–ಜೋ ಸಮುದಾಯವು ಮಣಿಪುರದ ಕಾಂಗ್ಪೋಪಿ ಜಿಲ್ಲೆಯಲ್ಲಿ ಗುರುವಾರ ಧರಣಿ ನಡೆಸಿತು. </p>.<p>ಸಾದರ್ ಹಿಲ್ಸ್ ಜಿಲ್ಲೆಯ ಬುಡಕಟ್ಟು ಸಮಿತಿ(ಸಿಒಟಿಯು) ಆಶ್ರಯದಲ್ಲಿ ಧರಣಿ ನಡೆಯಿತು. ‘ನಾವು ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದೇವೆ. ಸರ್ಕಾರ ನಮಗೆ (ಬುಡಕಟ್ಟು ಜನರಿಗೆ) ಪ್ರತ್ಯೇಕ ಆಡಳಿತ ಕಲ್ಪಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು. </p>.<p>ಇದರ ಜತೆಗೆ, ಕಾರ್ಯಾಚರಣೆ ಅಮಾನತಿಗೆ(ಸಸ್ಪೆಂನ್ಶನ್ ಆಫ್ ಆಪರೇಷನ್) ಸಂಬಂಧಿಸಿದಂತೆ ಸರ್ಕಾರಗಳ ಜತೆ ಒಪ್ಪಂದ ಮಾಡಿಕೊಂಡಿರುವ ಕುಕಿ ಸಮುದಾಯದ ಸಂಘಟನೆಗಳ ಜತೆ ಕೇಂದ್ರ ಸರ್ಕಾರ ಮಾತುಕತೆ ನಡೆಸಬೇಕು ಎಂದೂ ಒತ್ತಾಯಿಸಿದರು.</p>.<p>ಕುಕಿ ಸಮುದಾಯದ ಸಂಘಟನೆಗಳಾದ ಯುನೈಟೆಡ್ ಪೀಪಲ್ಸ್ ಫ್ರಂಟ್ (ಯುಪಿಎಫ್) ಮತ್ತು ಕುಕಿ ನ್ಯಾಷನಲ್ ಆರ್ಗನೈಸೇಷನ್ (ಕೆಎನ್ಒ)ನೊಂದಿಗೆ ಕೇಂದ್ರ ಸರ್ಕಾರ ಮತ್ತು ಮಣಿಪುರ ಸರ್ಕಾರ 2008ರಲ್ಲಿ ಒಪ್ಪಂದ ಮಾಡಿಕೊಂಡಿವೆ. ಒಪ್ಪಂದವನ್ನು ಕಾಲಕಾಲಕ್ಕೆ ವಿಸ್ತರಿಸಲಾಗಿದೆ. </p>.<p>ಮೈತೇಯಿ ಮತ್ತು ಬುಡಕಟ್ಟು ಸಮುದಾಯಗಳ ನಡುವಿನ ಘರ್ಷಣೆ ಹಿನ್ನೆಲೆಯಲ್ಲಿ, ತಮ್ಮ ಸಮುದಾಯಕ್ಕೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಕಲ್ಪಿಸುವಂತೆ ಚಿನ್–ಕುಕಿ–ಮಿಜೊ–ಜೋಮಿ ಸಮುದಾಯದ ಹತ್ತು ಶಾಸಕರು ಈ ಹಿಂದೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು. ಮುಖ್ಯಮಂತ್ರಿ ಬಿರೇನ್ ಸಿಂಗ್ ಈ ಬೇಡಿಕೆಯನ್ನು ತಿರಸ್ಕರಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್ (ಪಿಟಿಐ):</strong> ಬುಡಕಟ್ಟು ಸಮುದಾಯಗಳಿಗೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಒದಗಿಸಲು ಆಗ್ರಹಿಸಿ ಕುಕಿ–ಜೋ ಸಮುದಾಯವು ಮಣಿಪುರದ ಕಾಂಗ್ಪೋಪಿ ಜಿಲ್ಲೆಯಲ್ಲಿ ಗುರುವಾರ ಧರಣಿ ನಡೆಸಿತು. </p>.<p>ಸಾದರ್ ಹಿಲ್ಸ್ ಜಿಲ್ಲೆಯ ಬುಡಕಟ್ಟು ಸಮಿತಿ(ಸಿಒಟಿಯು) ಆಶ್ರಯದಲ್ಲಿ ಧರಣಿ ನಡೆಯಿತು. ‘ನಾವು ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದೇವೆ. ಸರ್ಕಾರ ನಮಗೆ (ಬುಡಕಟ್ಟು ಜನರಿಗೆ) ಪ್ರತ್ಯೇಕ ಆಡಳಿತ ಕಲ್ಪಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು. </p>.<p>ಇದರ ಜತೆಗೆ, ಕಾರ್ಯಾಚರಣೆ ಅಮಾನತಿಗೆ(ಸಸ್ಪೆಂನ್ಶನ್ ಆಫ್ ಆಪರೇಷನ್) ಸಂಬಂಧಿಸಿದಂತೆ ಸರ್ಕಾರಗಳ ಜತೆ ಒಪ್ಪಂದ ಮಾಡಿಕೊಂಡಿರುವ ಕುಕಿ ಸಮುದಾಯದ ಸಂಘಟನೆಗಳ ಜತೆ ಕೇಂದ್ರ ಸರ್ಕಾರ ಮಾತುಕತೆ ನಡೆಸಬೇಕು ಎಂದೂ ಒತ್ತಾಯಿಸಿದರು.</p>.<p>ಕುಕಿ ಸಮುದಾಯದ ಸಂಘಟನೆಗಳಾದ ಯುನೈಟೆಡ್ ಪೀಪಲ್ಸ್ ಫ್ರಂಟ್ (ಯುಪಿಎಫ್) ಮತ್ತು ಕುಕಿ ನ್ಯಾಷನಲ್ ಆರ್ಗನೈಸೇಷನ್ (ಕೆಎನ್ಒ)ನೊಂದಿಗೆ ಕೇಂದ್ರ ಸರ್ಕಾರ ಮತ್ತು ಮಣಿಪುರ ಸರ್ಕಾರ 2008ರಲ್ಲಿ ಒಪ್ಪಂದ ಮಾಡಿಕೊಂಡಿವೆ. ಒಪ್ಪಂದವನ್ನು ಕಾಲಕಾಲಕ್ಕೆ ವಿಸ್ತರಿಸಲಾಗಿದೆ. </p>.<p>ಮೈತೇಯಿ ಮತ್ತು ಬುಡಕಟ್ಟು ಸಮುದಾಯಗಳ ನಡುವಿನ ಘರ್ಷಣೆ ಹಿನ್ನೆಲೆಯಲ್ಲಿ, ತಮ್ಮ ಸಮುದಾಯಕ್ಕೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಕಲ್ಪಿಸುವಂತೆ ಚಿನ್–ಕುಕಿ–ಮಿಜೊ–ಜೋಮಿ ಸಮುದಾಯದ ಹತ್ತು ಶಾಸಕರು ಈ ಹಿಂದೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು. ಮುಖ್ಯಮಂತ್ರಿ ಬಿರೇನ್ ಸಿಂಗ್ ಈ ಬೇಡಿಕೆಯನ್ನು ತಿರಸ್ಕರಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>