<p><strong>ಇಂಫಾಲ್:</strong> ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರನ್ನು ಭದ್ರತಾ ಪಡೆ ಬಂಧಿಸಿದೆ.</p>.<p>ನಿಷೇಧಿತ ಪ್ರಿಪಾಕ್ನ ಮೂವರು ಕಾರ್ಯಕರ್ತರನ್ನು ಕೆಯಿರಾವೋ ಖುನೌ ಪ್ರದೇಶದಲ್ಲಿ ಬಂಧಿಸಲಾಗಿದೆ. ಅವರಲ್ಲಿ ಇಬ್ಬರು ಕಾನೂನು ಸಂಘರ್ಷ ಎದುರಿಸುತ್ತಿರುವ ಬಾಲಕರಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.</p>.<p>ನಿಷೇಧಿತ ಕಾಂಗ್ಲೆಯಿಪಾಕ್ ಕಮ್ಯುನಿಸ್ಟ್ ಪಾರ್ಟಿಯ (ಪಿಡಬ್ಲ್ಯೂಜಿ) ಇಬ್ಬರು ಸಕ್ರಿಯ ಕಾರ್ಯಕರ್ತರನ್ನು ಭಾನುವಾರ ಬಂಧಿಸಲಾಗಿದೆ. ಇವರು ಸುಲಿಗೆ ಚಟುವಟಿಕೆಯಲ್ಲಿ ತೊಡಗಿದ್ದರು. ಸುಲಿಗೆಗೆ ಬಂದಾಗ ಅವರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.</p>.<p>ಬಿಷ್ಣುಪುರ ಜಿಲ್ಲೆಯಲ್ಲಿ ಶನಿವಾರ ನಡೆಸಿದ ಕಾರ್ಯಾಚರಣೆಯಲ್ಲಿ ಎರಡು ಪಿಸ್ತೂಲ್, ಎರಡು ಖಾಲಿ ಮ್ಯಾಗಝೀನ್ಗಳು ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆ ವಶಪಡಿಸಿಕೊಂಡಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್:</strong> ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರನ್ನು ಭದ್ರತಾ ಪಡೆ ಬಂಧಿಸಿದೆ.</p>.<p>ನಿಷೇಧಿತ ಪ್ರಿಪಾಕ್ನ ಮೂವರು ಕಾರ್ಯಕರ್ತರನ್ನು ಕೆಯಿರಾವೋ ಖುನೌ ಪ್ರದೇಶದಲ್ಲಿ ಬಂಧಿಸಲಾಗಿದೆ. ಅವರಲ್ಲಿ ಇಬ್ಬರು ಕಾನೂನು ಸಂಘರ್ಷ ಎದುರಿಸುತ್ತಿರುವ ಬಾಲಕರಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.</p>.<p>ನಿಷೇಧಿತ ಕಾಂಗ್ಲೆಯಿಪಾಕ್ ಕಮ್ಯುನಿಸ್ಟ್ ಪಾರ್ಟಿಯ (ಪಿಡಬ್ಲ್ಯೂಜಿ) ಇಬ್ಬರು ಸಕ್ರಿಯ ಕಾರ್ಯಕರ್ತರನ್ನು ಭಾನುವಾರ ಬಂಧಿಸಲಾಗಿದೆ. ಇವರು ಸುಲಿಗೆ ಚಟುವಟಿಕೆಯಲ್ಲಿ ತೊಡಗಿದ್ದರು. ಸುಲಿಗೆಗೆ ಬಂದಾಗ ಅವರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.</p>.<p>ಬಿಷ್ಣುಪುರ ಜಿಲ್ಲೆಯಲ್ಲಿ ಶನಿವಾರ ನಡೆಸಿದ ಕಾರ್ಯಾಚರಣೆಯಲ್ಲಿ ಎರಡು ಪಿಸ್ತೂಲ್, ಎರಡು ಖಾಲಿ ಮ್ಯಾಗಝೀನ್ಗಳು ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆ ವಶಪಡಿಸಿಕೊಂಡಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>