<p><strong>ಇಂಫಾಲ್:</strong> ಮಣಿಪುರದ ಉಖರುಲ್ ಜಿಲ್ಲೆಯಲ್ಲಿ, ಕುಕಿ ಸಮುದಾಯದ ಬಂಡುಕೋರರು ಹಾಗೂ ಗ್ರಾಮಸ್ಥರು ಸೆರೆ ಹಿಡಿದಿದ್ದ, ತಾಂಗಖುಲ್ ನಾಗಾ ಸಮುದಾಯದ 21 ಸದಸ್ಯರನ್ನು ಬಿಡುಗಡೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದರು. </p>.<p>ಮೂರು ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ 21 ಮಂದಿಯನ್ನು, ಬಂಡುಕೋರರು ಹಾಗೂ ಗ್ರಾಮಸ್ಥರು ಶಾಂಗ್ಕೈನಲ್ಲಿ ಬುಧವಾರ ಮಧ್ಯಾಹ್ನ ಸೆರೆ ಹಿಡಿದಿದ್ದರು. </p>.<p>‘ರಾಜ್ಯ ಸರ್ಕಾರ, ಕುಕಿ ಹಾಗೂ ನಾಗಾ ಸಮುದಾಯಗಳ ಸಂಘಟನೆಗಳ ನಡುವಿನ ಮಾತುಕತೆ ಬಳಿಕ, ಗುರುವಾರ ಮುಂಜಾನೆ 4 ಗಂಟೆಗೆ 21 ಮಂದಿಯನ್ನೂ ಬಿಡುಗಡೆ ಮಾಡಲಾಯಿತು’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. </p>.<p>ತಾಂಗಖುಲ್ ನಾಗಾ ಜಿಲ್ಲೆಯಲ್ಲಿ, ಅದರಲ್ಲೂ ಕುಕಿ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿರುವ ಕಾಂಗ್ಪೋಕ್ಪಿ ಗಡಿಯಲ್ಲಿ, ಗುರುವಾರ ಮುಂಜಾನೆ ಪರಿಸ್ಥಿತಿ ಉದ್ವಿಗ್ನವಾಗಿತ್ತು. ಹೀಗಾಗಿ ಭದ್ರತಾ ಪಡೆಗಳು ಗಸ್ತು ನಡೆಸುತ್ತಿವೆ ಎಂದು ತಿಳಿಸಿದರು. </p>.<p>ಮುಖ್ಯಮಂತ್ರಿ ವೈ. ಖೇಮಚಂದ್ ಸಿಂಗ್ ಅವರು, ನಾಗರಿಕರ ಸೆರೆ ಹಾಗೂ ಸ್ಥಳದಲ್ಲಿನ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು. ‘ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು. </p>.<p>‘ಶಾಂಗ್ಕೈನಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಜನರ ಮೇಲೆ ತಾಂಗಖುಲ್ ನಾಗಾ ಸಮುದಾಯದವರು ಗುಂಡು ಹಾರಿಸಿದರು. ದಾಳಿಗೊಳಗಾದ ಇಬ್ಬರು ನಾಪತ್ತೆಯಾಗಿದ್ದಾರೆ. ಆದ್ದರಿಂದ ಅವರನ್ನು ಸೆರೆ ಹಿಡಿದೆವು’ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್:</strong> ಮಣಿಪುರದ ಉಖರುಲ್ ಜಿಲ್ಲೆಯಲ್ಲಿ, ಕುಕಿ ಸಮುದಾಯದ ಬಂಡುಕೋರರು ಹಾಗೂ ಗ್ರಾಮಸ್ಥರು ಸೆರೆ ಹಿಡಿದಿದ್ದ, ತಾಂಗಖುಲ್ ನಾಗಾ ಸಮುದಾಯದ 21 ಸದಸ್ಯರನ್ನು ಬಿಡುಗಡೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದರು. </p>.<p>ಮೂರು ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ 21 ಮಂದಿಯನ್ನು, ಬಂಡುಕೋರರು ಹಾಗೂ ಗ್ರಾಮಸ್ಥರು ಶಾಂಗ್ಕೈನಲ್ಲಿ ಬುಧವಾರ ಮಧ್ಯಾಹ್ನ ಸೆರೆ ಹಿಡಿದಿದ್ದರು. </p>.<p>‘ರಾಜ್ಯ ಸರ್ಕಾರ, ಕುಕಿ ಹಾಗೂ ನಾಗಾ ಸಮುದಾಯಗಳ ಸಂಘಟನೆಗಳ ನಡುವಿನ ಮಾತುಕತೆ ಬಳಿಕ, ಗುರುವಾರ ಮುಂಜಾನೆ 4 ಗಂಟೆಗೆ 21 ಮಂದಿಯನ್ನೂ ಬಿಡುಗಡೆ ಮಾಡಲಾಯಿತು’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. </p>.<p>ತಾಂಗಖುಲ್ ನಾಗಾ ಜಿಲ್ಲೆಯಲ್ಲಿ, ಅದರಲ್ಲೂ ಕುಕಿ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿರುವ ಕಾಂಗ್ಪೋಕ್ಪಿ ಗಡಿಯಲ್ಲಿ, ಗುರುವಾರ ಮುಂಜಾನೆ ಪರಿಸ್ಥಿತಿ ಉದ್ವಿಗ್ನವಾಗಿತ್ತು. ಹೀಗಾಗಿ ಭದ್ರತಾ ಪಡೆಗಳು ಗಸ್ತು ನಡೆಸುತ್ತಿವೆ ಎಂದು ತಿಳಿಸಿದರು. </p>.<p>ಮುಖ್ಯಮಂತ್ರಿ ವೈ. ಖೇಮಚಂದ್ ಸಿಂಗ್ ಅವರು, ನಾಗರಿಕರ ಸೆರೆ ಹಾಗೂ ಸ್ಥಳದಲ್ಲಿನ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು. ‘ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು. </p>.<p>‘ಶಾಂಗ್ಕೈನಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಜನರ ಮೇಲೆ ತಾಂಗಖುಲ್ ನಾಗಾ ಸಮುದಾಯದವರು ಗುಂಡು ಹಾರಿಸಿದರು. ದಾಳಿಗೊಳಗಾದ ಇಬ್ಬರು ನಾಪತ್ತೆಯಾಗಿದ್ದಾರೆ. ಆದ್ದರಿಂದ ಅವರನ್ನು ಸೆರೆ ಹಿಡಿದೆವು’ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>