<p><strong>ಇಂಫಾಲ್</strong> : ಮಹಿಳೆಯರ ಬೆತ್ತಲೆ ಮೆರವಣಿಗೆ ಕೃತ್ಯ ಖಂಡಿಸಿ ಮಣಿಪುರದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮುಂದೆ ನಾಗಾ ಸಂಘಟನೆಗಳು ಬೇಡಿಕೆ ಮುಂದಿಟ್ಟಿವೆ.</p>.<p>ಈ ನಡುವೆಯೇ ಕುಕಿ ಬುಡಕಟ್ಟು ಸಮುದಾಯದವರಿಗೆ ಪ್ರತ್ಯೇಕ ಆಡಳಿತ ವ್ಯವಸ್ಥೆ ರೂಪಿಸಬೇಕು ಎಂದು ಕೂಗು ಮತ್ತೆ ಕೇಳಿಬಂದಿದೆ. ಈ ಸಮುದಾಯ ಹೆಚ್ಚಿರುವ ಚುರಚಂದಪುರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ ಕುಕಿ ಸಮುದಾಯದವರು, ತ್ವರಿತವಾಗಿ ಕ್ರಮಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.</p>.<p>ನಾಗಾ ನಾಗರಿಕ ಸೊಸೈಟಿ, ಯುನೈಟೆಡ್ ನಾಗಾ ಕೌನ್ಸಿಲ್ (ಯುಎನ್ಸಿ), ಅಖಿಲ ಮಣಿಪುರ ನಾಗಾ ವಿದ್ಯಾರ್ಥಿಗಳ ಒಕ್ಕೂಟ (ಎಎನ್ಎಸ್ಎಎಂ), ನಾಗಾ ಪೀಪಲ್ ಫ್ರಂಟ್, ಕೃತ್ಯವನ್ನು ಕಟುವಾಗಿ ಖಂಡಿಸಿ ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿವೆ. </p>.<p>ಅಮಾನವೀಯ ಕೃತ್ಯ ಎಸಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಶೀಘ್ರಗತಿ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಆ ಮೂಲಕ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಎಂದು ಯುಎನ್ಸಿ ಆಗ್ರಹಿಸಿದೆ.</p>.<p>ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ನಡೆಸಿರುವುದು ಖಂಡನೀಯ. ಇದು ರಾಜ್ಯ ಸರ್ಕಾರ ಹಾಗೂ ಪೊಲೀಸರ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ದೂರಿದೆ.</p>.<p>* ಕಣಿವೆ ರಾಜ್ಯದಲ್ಲಿ ಅಧ್ಯಯನಕ್ಕೆ ತೊಡಕಾಗಿದೆ. ಹಾಗಾಗಿ, ಬೇರೆ ವಿ.ವಿಗಳಿಗೆ ನಮ್ಮನ್ನು ವರ್ಗಾವಣೆ ಮಾಡಬೇಕು ಎಂದು ಮಣಿಪುರ ವಿಶ್ವವಿದ್ಯಾಲಯದ 99 ವಿದ್ಯಾರ್ಥಿಗಳು ಬೇಡಿಕೆ ಮುಂದಿಟ್ಟಿದ್ದಾರೆ.</p>.<p>* ಮಣಿಪುರದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದ್ದು, ಶಾಂತಿ ಪುನರ್ ಸ್ಥಾಪನೆಗಾಗಿ ಮಧ್ಯಪ್ರವೇಶಿಸುವಂತೆ ಕೋರಿ ಜಾರ್ಖಂಡ್ನ ಮುಖ್ಯಮಂತ್ರಿ ಹೇಮಂತ್ ಸೂರೆನ್ ಅವರು, ರಾಷ್ಟ್ರಪತಿ ಅವರಿಗೆ ಪತ್ರ ಬರೆದಿದ್ದಾರೆ.</p>.<div><blockquote>ಮಣಿಪುರದ ಸದ್ಯದ ಸ್ಥಿತಿಗತಿ ಬಗ್ಗೆ ಕೇಂದ್ರ ಸರ್ಕಾರವು ಸಂಸತ್ ಅಧಿವೇಶನದಲ್ಲಿಯೇ ಪ್ರತಿಪಕ್ಷಗಳ ಪ್ರಶ್ನೆಗೆ ಉತ್ತರ ನೀಡಲು ಸಿದ್ಧವಿದೆ</blockquote><span class="attribution">ಕಿರಣ್ ರಿಜಿಜು, ಕೇಂದ್ರ ಭೂವಿಜ್ಞಾನ ಸಚಿವ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್</strong> : ಮಹಿಳೆಯರ ಬೆತ್ತಲೆ ಮೆರವಣಿಗೆ ಕೃತ್ಯ ಖಂಡಿಸಿ ಮಣಿಪುರದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮುಂದೆ ನಾಗಾ ಸಂಘಟನೆಗಳು ಬೇಡಿಕೆ ಮುಂದಿಟ್ಟಿವೆ.</p>.<p>ಈ ನಡುವೆಯೇ ಕುಕಿ ಬುಡಕಟ್ಟು ಸಮುದಾಯದವರಿಗೆ ಪ್ರತ್ಯೇಕ ಆಡಳಿತ ವ್ಯವಸ್ಥೆ ರೂಪಿಸಬೇಕು ಎಂದು ಕೂಗು ಮತ್ತೆ ಕೇಳಿಬಂದಿದೆ. ಈ ಸಮುದಾಯ ಹೆಚ್ಚಿರುವ ಚುರಚಂದಪುರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ ಕುಕಿ ಸಮುದಾಯದವರು, ತ್ವರಿತವಾಗಿ ಕ್ರಮಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.</p>.<p>ನಾಗಾ ನಾಗರಿಕ ಸೊಸೈಟಿ, ಯುನೈಟೆಡ್ ನಾಗಾ ಕೌನ್ಸಿಲ್ (ಯುಎನ್ಸಿ), ಅಖಿಲ ಮಣಿಪುರ ನಾಗಾ ವಿದ್ಯಾರ್ಥಿಗಳ ಒಕ್ಕೂಟ (ಎಎನ್ಎಸ್ಎಎಂ), ನಾಗಾ ಪೀಪಲ್ ಫ್ರಂಟ್, ಕೃತ್ಯವನ್ನು ಕಟುವಾಗಿ ಖಂಡಿಸಿ ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿವೆ. </p>.<p>ಅಮಾನವೀಯ ಕೃತ್ಯ ಎಸಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಶೀಘ್ರಗತಿ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಆ ಮೂಲಕ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಎಂದು ಯುಎನ್ಸಿ ಆಗ್ರಹಿಸಿದೆ.</p>.<p>ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ನಡೆಸಿರುವುದು ಖಂಡನೀಯ. ಇದು ರಾಜ್ಯ ಸರ್ಕಾರ ಹಾಗೂ ಪೊಲೀಸರ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ದೂರಿದೆ.</p>.<p>* ಕಣಿವೆ ರಾಜ್ಯದಲ್ಲಿ ಅಧ್ಯಯನಕ್ಕೆ ತೊಡಕಾಗಿದೆ. ಹಾಗಾಗಿ, ಬೇರೆ ವಿ.ವಿಗಳಿಗೆ ನಮ್ಮನ್ನು ವರ್ಗಾವಣೆ ಮಾಡಬೇಕು ಎಂದು ಮಣಿಪುರ ವಿಶ್ವವಿದ್ಯಾಲಯದ 99 ವಿದ್ಯಾರ್ಥಿಗಳು ಬೇಡಿಕೆ ಮುಂದಿಟ್ಟಿದ್ದಾರೆ.</p>.<p>* ಮಣಿಪುರದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದ್ದು, ಶಾಂತಿ ಪುನರ್ ಸ್ಥಾಪನೆಗಾಗಿ ಮಧ್ಯಪ್ರವೇಶಿಸುವಂತೆ ಕೋರಿ ಜಾರ್ಖಂಡ್ನ ಮುಖ್ಯಮಂತ್ರಿ ಹೇಮಂತ್ ಸೂರೆನ್ ಅವರು, ರಾಷ್ಟ್ರಪತಿ ಅವರಿಗೆ ಪತ್ರ ಬರೆದಿದ್ದಾರೆ.</p>.<div><blockquote>ಮಣಿಪುರದ ಸದ್ಯದ ಸ್ಥಿತಿಗತಿ ಬಗ್ಗೆ ಕೇಂದ್ರ ಸರ್ಕಾರವು ಸಂಸತ್ ಅಧಿವೇಶನದಲ್ಲಿಯೇ ಪ್ರತಿಪಕ್ಷಗಳ ಪ್ರಶ್ನೆಗೆ ಉತ್ತರ ನೀಡಲು ಸಿದ್ಧವಿದೆ</blockquote><span class="attribution">ಕಿರಣ್ ರಿಜಿಜು, ಕೇಂದ್ರ ಭೂವಿಜ್ಞಾನ ಸಚಿವ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>