ಮಣಿಪುರದಲ್ಲಿ ಸಂಭವಿಸಿದ ಹಿಂಸಾಚಾರದ ಪರಿಣಾಮ ಕಣಿವೆ ಪ್ರದೇಶದಲ್ಲಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಭಯದ ವಾತಾವರಣ ಸೃಷ್ಟಿಯಾಗಿದ್ದರಿಂದ ಸರಕು ಸಾಗಣೆದಾರರು ಹಿಂದಡಿ ಇಟ್ಟಿದ್ದರು. ಇದರಿಂದ ಅಗತ್ಯ ವಸ್ತುಗಳ ಪೂರೈಕೆ ಕಡಿಮೆಯಾಗುತ್ತಿದ್ದು, ಆಹಾರದ ಸಮಸ್ಯೆ ಉಲ್ಬಣಿಸಲು ಸಾಧ್ಯತೆ ಹೆಚ್ಚಿತ್ತು. ಹಾಗಾಗಿ, ಅಗತ್ಯ ವಸ್ತುಗಳ ಸಾಗಣೆಗೆ ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.