<p><strong>ಗುವಾಹಟಿ</strong>: ‘ಪಂಗಲ್’ ಎಂಬ ಮೈತೇಯಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಅಂಗವಿಕಲ ವ್ಯಕ್ತಿ ಚೇಸಂ ಅಬ್ದುಲ್ ಖಾದಿರ್ ಅವರ ಮೃತದೇಹವು ಮಂಗಳವಾರ ಬೆಳಿಗ್ಗೆ ದೊರೆತಿದ್ದು, ಮೈತೇಯಿ ಸಮುದಾಯದವು ಹೆಚ್ಚಿನ ಸಂಖ್ಯೆಯಲ್ಲಿರುವ ಪಶ್ಚಿಮ ಇಂಫಾಲ್ ಜಿಲ್ಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಇವರು ಜೂನ್ 10ರಿಂದ ಕಾಣೆಯಾಗಿದ್ದರು.</p><p>‘ಹತ್ಯೆಯ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು. ಖಾದಿರ್ ಅವರ ಮೃತದೇಹವನ್ನು ಹೊರತೆಗೆಯುತ್ತಿದ್ದಂತೆಯೇ, ಘಟನಾ ಸ್ಥಳದಲ್ಲಿ ಸೇರಿದ್ದ ಜನರು ಭದ್ರತಾ ಪಡೆಗಳತ್ತ ಕಲ್ಲೆಸೆದರು. ಪ್ರತಿಭಟನೆಯನ್ನೂ ನಡೆಸಿದರು. ಪ್ರತಿಭಟನಕಾರರನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಸಿಡಿಸಿದರು.</p><p>ಈ ಪ್ರಕರಣದಕ್ಕೆ ಸಂಬಂಧಿಸಿ ಮೈತೇಯಿ ಬಂಡುಕೋರ ಸಂಘಟನೆ ‘ಅರಂಬಾಯ್ ಟೆಂಗೋಲ್’ನ ಆರು ಸದಸ್ಯರನ್ನು ಹಾಗೂ ಇತರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ‘ಇನ್ನಷ್ಟು ಜನರನ್ನು ಬಂಧಿಸುವ ಸಾಧ್ಯೆತೆ ಇದೆ’ ಎಂದು ಪೊಲೀಸರು ಹೇಳಿದರು. ‘ಮೈತೇಯಿ ಮತ್ತು ಪಂಗಲ್ ಸಮುದಾಯಗಳ ಮಧ್ಯೆ ಇರುವ ಸೌಹಾರ್ದವನ್ನು ಹದಗೆಡಿಸಲು ಈ ಹತ್ಯೆ ನಡೆಸಲಾಗಿದೆ’ ಎಂದು ಮೈತೇಯಿ ಪಂಗಲ್ ಒಕ್ಕೂಟ ಸಮಿತಿಯು ಹೇಳಿಕೆ ಬಿಡುಗಡೆ ಮಾಡಿದೆ.</p><p>ಮಣಿಪುರದ ಒಟ್ಟು ಜನಸಂಖ್ಯೆಯಲ್ಲಿ ಪಂಗಲ್ ಸಮುದಾಯವು ಶೇ 9ರಷ್ಟಿದೆ. 2023ರಿಂದ ಆರಂಭವಾದ ಜನಾಂಗೀಯ ಸಂಘರ್ಷದಲ್ಲಿ ಈ ಸಮುದಾಯದ ಜನರು ಸಾಕಷ್ಟು ಸಂಕಷ್ಟ ಅನುಭವಿಸಿದ್ದಾರೆ. ಸಂಘರ್ಷದ ವೇಳೆ ಹಲವರು ಮೃತಪಟ್ಟಿದ್ದರೆ, ಹಲವರು ತಮ್ಮ ಮನೆ ಕಳೆದುಕೊಂಡಿದ್ದರು. ಆದರೂ ಈ ಸಮುದಾಯದ ಜನರು ಸಂಘರ್ಷದಿಂದ ದೂರ ಉಳಿದಿದ್ದರು. ಆದರೆ, ಖಾದಿರ್ ಅವರ ಹತ್ಯೆಯು ಈ ಸಮುದಾಯದವರನ್ನು ಕೆರಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ‘ಪಂಗಲ್’ ಎಂಬ ಮೈತೇಯಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಅಂಗವಿಕಲ ವ್ಯಕ್ತಿ ಚೇಸಂ ಅಬ್ದುಲ್ ಖಾದಿರ್ ಅವರ ಮೃತದೇಹವು ಮಂಗಳವಾರ ಬೆಳಿಗ್ಗೆ ದೊರೆತಿದ್ದು, ಮೈತೇಯಿ ಸಮುದಾಯದವು ಹೆಚ್ಚಿನ ಸಂಖ್ಯೆಯಲ್ಲಿರುವ ಪಶ್ಚಿಮ ಇಂಫಾಲ್ ಜಿಲ್ಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಇವರು ಜೂನ್ 10ರಿಂದ ಕಾಣೆಯಾಗಿದ್ದರು.</p><p>‘ಹತ್ಯೆಯ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು. ಖಾದಿರ್ ಅವರ ಮೃತದೇಹವನ್ನು ಹೊರತೆಗೆಯುತ್ತಿದ್ದಂತೆಯೇ, ಘಟನಾ ಸ್ಥಳದಲ್ಲಿ ಸೇರಿದ್ದ ಜನರು ಭದ್ರತಾ ಪಡೆಗಳತ್ತ ಕಲ್ಲೆಸೆದರು. ಪ್ರತಿಭಟನೆಯನ್ನೂ ನಡೆಸಿದರು. ಪ್ರತಿಭಟನಕಾರರನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಸಿಡಿಸಿದರು.</p><p>ಈ ಪ್ರಕರಣದಕ್ಕೆ ಸಂಬಂಧಿಸಿ ಮೈತೇಯಿ ಬಂಡುಕೋರ ಸಂಘಟನೆ ‘ಅರಂಬಾಯ್ ಟೆಂಗೋಲ್’ನ ಆರು ಸದಸ್ಯರನ್ನು ಹಾಗೂ ಇತರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ‘ಇನ್ನಷ್ಟು ಜನರನ್ನು ಬಂಧಿಸುವ ಸಾಧ್ಯೆತೆ ಇದೆ’ ಎಂದು ಪೊಲೀಸರು ಹೇಳಿದರು. ‘ಮೈತೇಯಿ ಮತ್ತು ಪಂಗಲ್ ಸಮುದಾಯಗಳ ಮಧ್ಯೆ ಇರುವ ಸೌಹಾರ್ದವನ್ನು ಹದಗೆಡಿಸಲು ಈ ಹತ್ಯೆ ನಡೆಸಲಾಗಿದೆ’ ಎಂದು ಮೈತೇಯಿ ಪಂಗಲ್ ಒಕ್ಕೂಟ ಸಮಿತಿಯು ಹೇಳಿಕೆ ಬಿಡುಗಡೆ ಮಾಡಿದೆ.</p><p>ಮಣಿಪುರದ ಒಟ್ಟು ಜನಸಂಖ್ಯೆಯಲ್ಲಿ ಪಂಗಲ್ ಸಮುದಾಯವು ಶೇ 9ರಷ್ಟಿದೆ. 2023ರಿಂದ ಆರಂಭವಾದ ಜನಾಂಗೀಯ ಸಂಘರ್ಷದಲ್ಲಿ ಈ ಸಮುದಾಯದ ಜನರು ಸಾಕಷ್ಟು ಸಂಕಷ್ಟ ಅನುಭವಿಸಿದ್ದಾರೆ. ಸಂಘರ್ಷದ ವೇಳೆ ಹಲವರು ಮೃತಪಟ್ಟಿದ್ದರೆ, ಹಲವರು ತಮ್ಮ ಮನೆ ಕಳೆದುಕೊಂಡಿದ್ದರು. ಆದರೂ ಈ ಸಮುದಾಯದ ಜನರು ಸಂಘರ್ಷದಿಂದ ದೂರ ಉಳಿದಿದ್ದರು. ಆದರೆ, ಖಾದಿರ್ ಅವರ ಹತ್ಯೆಯು ಈ ಸಮುದಾಯದವರನ್ನು ಕೆರಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>