ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ:ರಾಜ್ಯದ ಪ್ರಾದೇಶಿಕ ಸಮಗ್ರತೆ ಕಾಪಾಡುವ ನಿರ್ಣಯಕ್ಕೆ 23 ಬಿಜೆಪಿ ಶಾಸಕರ ಸಹಿ

Published 12 ಸೆಪ್ಟೆಂಬರ್ 2023, 5:23 IST
Last Updated 12 ಸೆಪ್ಟೆಂಬರ್ 2023, 5:23 IST
ಅಕ್ಷರ ಗಾತ್ರ

ಇಂಫಾಲ್: ಮಣಿಪುರದ ಆಡಳಿತರೂಢ ಬಿಜೆಪಿ ಸರ್ಕಾರದ 23 ಶಾಸಕರು ರಾಜ್ಯದ ಪ್ರಾದೇಶಿಕ ಸಮಗ್ರತೆ ಕಾಪಾಡುವ ನಿರ್ಣಯಕ್ಕೆ ಸಹಿ ಹಾಕಿದ್ದಾರೆ.

ಈ ಮೂಲಕ ಹಿಂಸಾಚಾರ ಪೀಡಿತ ಕಣಿವೆ ರಾಜ್ಯದ ಪ್ರಾದೇಶಿಕ ಸಮಗ್ರತೆ ಕಾಪಾಡಲು ಪ್ರತಿಜ್ಞೆ ಮಾಡಿದ್ದಾರೆ.

ಕುತೂಹಲವೆಂಬಂತೆ, ಸಹಿ ಮಾಡಿದ ಶಾಸಕರ ಪಟ್ಟಿಯಲ್ಲಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಹೆಸರು ಇಲ್ಲ ಎಂದು ತಿಳಿದು ಬಂದಿದೆ.

ಬಿಕ್ಕಟ್ಟಿಗೆ ಆದಷ್ಟು ಬೇಗ ಪರಿಹಾರಕ್ಕಾಗಿ ಕೇಂದ್ರ ನಾಯಕತ್ವವನ್ನು ಮನವೊಲಿಸಲು ಶಾಸಕರ ನಿಯೋಗವು ಶೀಘ್ರದಲ್ಲೇ ದೆಹಲಿಗೆ ತೆರಳುವುದನ್ನು ಸಭೆಯಲ್ಲಿ ಅಂಗೀಕರಿಸಲಾಯಿತು.

ಮಣಿಪುರದ ಪ್ರಾದೇಶಿಕ ಸಮಗ್ರತೆ ಪರವಾಗಿ ನಾವು ನಿಲ್ಲುತ್ತೇವೆ. ಯಾವುದೇ ಪ್ರತ್ಯೇಕ ಆಡಳಿತವನ್ನು ಒಪ್ಪುವುದಿಲ್ಲ ಎಂದು ಶಾಸಕರು ಸರ್ವಾನುಮತದಿಂದ ಒಪ್ಪಿ ಅಂಗೀಕರಿಸಿದ್ದಾಗಿ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ಕುಕಿ ಸಮುದಾಯದ ಪ್ರತ್ಯೇಕ ಆಡಳಿತ ಬೇಡಿಕೆಯನ್ನು ವಿರೋಧಿಸಲಾಗಿದೆ.

ಮೇ 3ರಂದು ಆರಂಭವಾಗಿರುವ ಮಣಿಪುರ ಹಿಂಸಾಚಾರದಲ್ಲಿ ಈವರೆಗೆ 160ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT