ಪರಿಶಿಷ್ಟ ಪಂಗಡ ಸ್ಥಾನಮಾನ ನೀಡಬೇಕೆಂಬ ಬಹುಸಂಖ್ಯಾತ ಮೈತೇಯಿ ಸಮುದಾಯದ ಬೇಡಿಕೆ ವಿರುದ್ಧ ಬುಡಕಟ್ಟು ಸಮುದಾಯಗಳು ಸುಮಾರು 10 ಜಿಲ್ಲೆಗಳಲ್ಲಿ ಮೇ 3ರಂದು ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯು ಹಿಂಸಾತ್ಮಕ ಸ್ವರೂಪ ತಾಳಿ ರಾಜ್ಯದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಹಿಂಸಾಚಾರದಲ್ಲಿ 60ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 231 ಮಂದಿ ಗಾಯಗೊಂಡಿದ್ದಾರೆ. ಧಾರ್ಮಿಕ ಸ್ಥಳಗಳೂ ಸೇರಿ 1,700 ಮನೆಗಳು ಸುಟ್ಟು ಬೂದಿಯಾಗಿವೆ ಎಂದು ಬಿರೇನ್ ಸಿಂಗ್ ಸೋಮವಾರ ತಿಳಿಸಿದ್ದಾರೆ.