ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ: ಟಿಕೆಟ್‌ಗಾಗಿ ಹಿಂಸಾಚಾರ

Last Updated 30 ಜನವರಿ 2022, 17:59 IST
ಅಕ್ಷರ ಗಾತ್ರ

ಗುವಾಹಟಿ: ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ ಗಲಭೆಗೆ ಕಾರಣವಾಗಿದೆ.ಟಿಕೆಟ್ ಸಿಗದ್ದಕ್ಕೆ ಅಸಮಾಧಾನಗೊಂಡ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿ ಕಚೇರಿಗಳ ಮೇಲೆ ಭಾನುವಾರ ದಾಳಿ ನಡೆಸಿದ್ದಾರೆ ಎಂದು ‘ಎನ್‌ಡಿಟಿವಿ’ ವರದಿ
ಮಾಡಿದೆ.

ಫಲಕಗಳನ್ನು ಹಿಡಿದು ಬೀದಿಗಿಳಿದ ‍ಪ್ರತಿಭಟನಕಾರರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಎನ್. ಬೀರೇನ್ ಸಿಂಗ್ ಅವರ ಪ್ರತಿಕೃತಿ ದಹಿಸಿದ್ದಾರೆ. ಇಂಫಾಲದ ಬಿಜೆಪಿ ಕೇಂದ್ರ ಕಚೇರಿಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಟಿಕೆಟ್ ಆಕಾಂಕ್ಷಿಗಳಾಗಿದ್ದ ಕೆಲವು ಮುಖಂಡರು ಪಕ್ಷದ ಮೇಲೆ ಮುನಿಸಿಕೊಂಡಿದ್ದು, ರಾಜೀನಾಮೆ ನೀಡಿದ್ದಾರೆ. ಆದರೆ ರಾಜೀನಾಮೆ ನೀಡಿದವರ ಸಂಖ್ಯೆ ಎಷ್ಟು ಎಂಬುದು ಖಚಿತಪಟ್ಟಿಲ್ಲ.ಮೂಲಗಳ ಪ್ರಕಾರ, ಕಾಂಗ್ರೆಸ್‌ನಿಂದ ಪಕ್ಷಾಂತರ ಆಗಿರುವ ಮುಖಂಡರಿಗೆ ಅವಕಾಶ ಕಲ್ಪಿಸಿದ್ದರಿಂದ, ಮೂಲ ಬಿಜೆಪಿಯಲ್ಲಿದ್ದ ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ವಲಸೆ ಬಂದಿದ್ದ 10 ಜನರಿಗೆ ಬಿಜೆಪಿ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT