<p><strong>ಇಂಫಾಲ:</strong> ಮಣಿಪುರದ ತಮೆಂಗ್ಲೊಂಗ್ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ನಾಗಾ ಗ್ರಾಮಗಳ ನಡುವೆ ಉಂಟಾದ ಸಂಘರ್ಷದಲ್ಲಿ 12 ಭದ್ರತಾ ಸಿಬ್ಬಂದಿ ಸೇರಿದಂತೆ ಕನಿಷ್ಠ 25 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಸಂಘರ್ಷದ ಹಿನ್ನೆಲೆಯಲ್ಲಿ ತಮೆಂಗ್ಲೊಂಗ್ ಜಿಲ್ಲೆಯ ಕೆಲವು ಭಾಗಗಳಲ್ಲಿ ನಿಷೇಧಾಜ್ಞೆ ಹೇರಲಾಗಿದೆ. </p><p>ಬುಧವಾರ ಸಂಜೆ ಹಳೆಯ ತಮೆಂಗ್ಲೊಂಗ್ ಗ್ರಾಮದ ಸುಮಾರು 2,000 ನಿವಾಸಿಗಳು ಭೂ ವಿವಾದ ಸಂಬಂಧ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಕಚೇರಿಗೆ ಮನವಿ ಸಲ್ಲಿಸುವ ನಿಟ್ಟಿನಲ್ಲಿ ರ್ಯಾಲಿ ನಡೆಸುತ್ತಿದ್ದ ಸಂದರ್ಭದಲ್ಲಿ ಸಂಘರ್ಷ ಉಂಟಾಗಿದೆ. </p><p>ಈ ವೇಳೆ ದಾಯಿಲೊಂಗ್ ಗ್ರಾಮದ ನಿವಾಸಿಗಳು ರ್ಯಾಲಿ ಮೇಲೆ ಕಲ್ಲುತೂರಾಟ ನಡೆಸಿರುವುದು ಘರ್ಷಣೆಗೆ ಕಾರಣವಾಗಿದೆ. ಸಮೀಪದ ಡುಯಿಗೈಲೊಂಗ್ ಗ್ರಾಮದ ಜನರು ದಾಯಿಲೊಂಗ್ ಬೆಂಬಲಕ್ಕಾಗಿ ಧಾವಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಉದ್ರಿಕ್ತ ಗುಂಪು ಸರ್ಕಾರಿ ಪಿಬ್ಲ್ಯುಡಿ ಕಟ್ಟಡಕ್ಕೆ ಬೆಂಕಿ ಹಚ್ಚಿದರು. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. </p><p>ಮುಂದಿನ ಸೂಚನೆವರೆಗೆ ಬಿಎನ್ಎಸ್ಎಸ್ ಸೆಕ್ಷನ್ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. </p><p>ಈಗಿನ ಸಂಘರ್ಷಕ್ಕೂ 2023ರ ಮೇ ತಿಂಗಳಲ್ಲಿ ಆರಂಭವಾಗಿರುವ ಮೈತೇಯಿ ಹಾಗೂ ಕುಕಿ ಸಮುದಾಯದ ನಡುವಣ ಜನಾಂಗೀಯ ಸಂಘರ್ಷಕ್ಕೂ ಯಾವುದೇ ನಂಟು ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.ಮಣಿಪುರ: ಚುನಾಯಿತ ಸರ್ಕಾರವನ್ನೇ ಮರುಸ್ಥಾಪಿಸಿ; ಶಾಗೆ ಶಾಸಕರಿಂದ ಪತ್ರ .ಮಣಿಪುರ: ನಿಷೇಧಿತ ಸಂಘಟನೆಗಳ 10 ಉಗ್ರರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ:</strong> ಮಣಿಪುರದ ತಮೆಂಗ್ಲೊಂಗ್ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ನಾಗಾ ಗ್ರಾಮಗಳ ನಡುವೆ ಉಂಟಾದ ಸಂಘರ್ಷದಲ್ಲಿ 12 ಭದ್ರತಾ ಸಿಬ್ಬಂದಿ ಸೇರಿದಂತೆ ಕನಿಷ್ಠ 25 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಸಂಘರ್ಷದ ಹಿನ್ನೆಲೆಯಲ್ಲಿ ತಮೆಂಗ್ಲೊಂಗ್ ಜಿಲ್ಲೆಯ ಕೆಲವು ಭಾಗಗಳಲ್ಲಿ ನಿಷೇಧಾಜ್ಞೆ ಹೇರಲಾಗಿದೆ. </p><p>ಬುಧವಾರ ಸಂಜೆ ಹಳೆಯ ತಮೆಂಗ್ಲೊಂಗ್ ಗ್ರಾಮದ ಸುಮಾರು 2,000 ನಿವಾಸಿಗಳು ಭೂ ವಿವಾದ ಸಂಬಂಧ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಕಚೇರಿಗೆ ಮನವಿ ಸಲ್ಲಿಸುವ ನಿಟ್ಟಿನಲ್ಲಿ ರ್ಯಾಲಿ ನಡೆಸುತ್ತಿದ್ದ ಸಂದರ್ಭದಲ್ಲಿ ಸಂಘರ್ಷ ಉಂಟಾಗಿದೆ. </p><p>ಈ ವೇಳೆ ದಾಯಿಲೊಂಗ್ ಗ್ರಾಮದ ನಿವಾಸಿಗಳು ರ್ಯಾಲಿ ಮೇಲೆ ಕಲ್ಲುತೂರಾಟ ನಡೆಸಿರುವುದು ಘರ್ಷಣೆಗೆ ಕಾರಣವಾಗಿದೆ. ಸಮೀಪದ ಡುಯಿಗೈಲೊಂಗ್ ಗ್ರಾಮದ ಜನರು ದಾಯಿಲೊಂಗ್ ಬೆಂಬಲಕ್ಕಾಗಿ ಧಾವಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಉದ್ರಿಕ್ತ ಗುಂಪು ಸರ್ಕಾರಿ ಪಿಬ್ಲ್ಯುಡಿ ಕಟ್ಟಡಕ್ಕೆ ಬೆಂಕಿ ಹಚ್ಚಿದರು. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. </p><p>ಮುಂದಿನ ಸೂಚನೆವರೆಗೆ ಬಿಎನ್ಎಸ್ಎಸ್ ಸೆಕ್ಷನ್ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. </p><p>ಈಗಿನ ಸಂಘರ್ಷಕ್ಕೂ 2023ರ ಮೇ ತಿಂಗಳಲ್ಲಿ ಆರಂಭವಾಗಿರುವ ಮೈತೇಯಿ ಹಾಗೂ ಕುಕಿ ಸಮುದಾಯದ ನಡುವಣ ಜನಾಂಗೀಯ ಸಂಘರ್ಷಕ್ಕೂ ಯಾವುದೇ ನಂಟು ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.ಮಣಿಪುರ: ಚುನಾಯಿತ ಸರ್ಕಾರವನ್ನೇ ಮರುಸ್ಥಾಪಿಸಿ; ಶಾಗೆ ಶಾಸಕರಿಂದ ಪತ್ರ .ಮಣಿಪುರ: ನಿಷೇಧಿತ ಸಂಘಟನೆಗಳ 10 ಉಗ್ರರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>