<p><strong>ಚುರಾಚಂದಪುರ</strong>: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.</p><p>ಬುಧವಾರ ತುಯಿಬೊಂಗ್ ಪ್ರದೇಶದಲ್ಲಿರುವ ಮನೆಯಿಂದ ರಿಷಿಕಾಂತ ಸಿಂಗ್ ಎಂಬ ವ್ಯಕ್ತಿಯನ್ನು ಮನೆಯಿಂದ ಅಪಹರಿಸಿದ ಬಂಡುಕೋರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ಘಟನೆಯಿಂದ ಇಲ್ಲಿನ ಕೆಲವು ಸ್ಥಳಗಳಲ್ಲಿ ಕಲ್ಲು ತೂರಾಟ ನಡೆದಿದೆ. ಹಾಗೂ ಪ್ರತಿಭಟನೆಗಳು ನಡೆದಿವೆ ಎಂದು ಪೊಲೀಸರು ಹೇಳಿದ್ದಾರೆ.</p><p>ಹತ್ಯೆ ಮಾಡಿದವರನ್ನು ಯುನೈಟೆಡ್ ಕುಕಿ ನ್ಯಾಷನಲ್ ಆರ್ಮಿ ಸಂಘಟನೆಗೆ ಸೇರಿದವರು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯ ಸಮುದಾಯಗಳ ನಡುವಿನ ಶಾಂತಿ ಮಾತುಕತೆಗೆ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿರುವಾಗಲೇ ಈ ಘಟನೆ ನಡೆದಿದೆ.</p><p>2023ರಲ್ಲಿ ಆರಂಭವಾದ ಮಣಿಪುರ ಹಿಂಸಾಚಾರದಲ್ಲಿ ಇಲ್ಲಿಯವರೆಗೂ 260ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಜನ ಮನೆ–ಮಠ ಕಳೆದುಕೊಂಡಿದ್ದಾರೆ.</p>.ಮಣಿಪುರ| ಸುಲಿಗೆಯಲ್ಲಿ ಭಾಗಿ ಆರೋಪ: ನಾಲ್ವರು ಬಂಡುಕೋರರ ಬಂಧನ.ಮಣಿಪುರ: ಮೂವರು ಬಂಡುಕೋರರ ಸೆರೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚುರಾಚಂದಪುರ</strong>: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.</p><p>ಬುಧವಾರ ತುಯಿಬೊಂಗ್ ಪ್ರದೇಶದಲ್ಲಿರುವ ಮನೆಯಿಂದ ರಿಷಿಕಾಂತ ಸಿಂಗ್ ಎಂಬ ವ್ಯಕ್ತಿಯನ್ನು ಮನೆಯಿಂದ ಅಪಹರಿಸಿದ ಬಂಡುಕೋರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ಘಟನೆಯಿಂದ ಇಲ್ಲಿನ ಕೆಲವು ಸ್ಥಳಗಳಲ್ಲಿ ಕಲ್ಲು ತೂರಾಟ ನಡೆದಿದೆ. ಹಾಗೂ ಪ್ರತಿಭಟನೆಗಳು ನಡೆದಿವೆ ಎಂದು ಪೊಲೀಸರು ಹೇಳಿದ್ದಾರೆ.</p><p>ಹತ್ಯೆ ಮಾಡಿದವರನ್ನು ಯುನೈಟೆಡ್ ಕುಕಿ ನ್ಯಾಷನಲ್ ಆರ್ಮಿ ಸಂಘಟನೆಗೆ ಸೇರಿದವರು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯ ಸಮುದಾಯಗಳ ನಡುವಿನ ಶಾಂತಿ ಮಾತುಕತೆಗೆ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿರುವಾಗಲೇ ಈ ಘಟನೆ ನಡೆದಿದೆ.</p><p>2023ರಲ್ಲಿ ಆರಂಭವಾದ ಮಣಿಪುರ ಹಿಂಸಾಚಾರದಲ್ಲಿ ಇಲ್ಲಿಯವರೆಗೂ 260ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಜನ ಮನೆ–ಮಠ ಕಳೆದುಕೊಂಡಿದ್ದಾರೆ.</p>.ಮಣಿಪುರ| ಸುಲಿಗೆಯಲ್ಲಿ ಭಾಗಿ ಆರೋಪ: ನಾಲ್ವರು ಬಂಡುಕೋರರ ಬಂಧನ.ಮಣಿಪುರ: ಮೂವರು ಬಂಡುಕೋರರ ಸೆರೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>