ಮಣಿಪುರ ರೈಫಲ್ಸ್ ಕ್ಯಾಂಪ್ನ ಶಸ್ತ್ರಾಗಾರದ ಮೇಲೆ ಗುಂಪೊಂದು ದಾಳಿ ಮಾಡಿ, ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ ಬಳಿಕ ಈ ಆದೇಶ ಹೊರಬಿದ್ದಿದೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಗಂಭೀರ ಪರಿಣಾಮಗಳನ್ನು ಉಂಟುಮಾಡುವ, ಸಾರ್ವಜನಿಕರನ್ನು ಪ್ರಚೋದಿಸುವ ಚಿತ್ರಗಳು, ದ್ವೇಷದ ಭಾಷಣಗಳು ಮತ್ತು ದ್ವೇಷದ ವಿಡಿಯೊ ಸಂದೇಶಗಳ ಪ್ರಸಾರಕ್ಕಾಗಿ ಸಮಾಜ ವಿರೋಧಿಗಳು ಸಾಮಾಜಿಕ ಮಾಧ್ಯಮವನ್ನು ವ್ಯಾಪಕವಾಗಿ ಬಳಸುತ್ತಾರೆ ಎಂಬ ಆತಂಕದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಹಿಂಸಾಚಾರ ಇಲ್ಲದ ಜಿಲ್ಲಾ ಕೇಂದ್ರಗಳಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು ಸರ್ಕಾರ ಮರುಸ್ಥಾಪಿಸಲಿದೆ ಎಂದು ಆದೇಶಲ್ಲಿ ತಿಳಿಸಲಾಗಿದೆ.