ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ ಹಿಂಸಾಚಾರ: ಸದನದಲ್ಲಿ ಡೆರಿಕ್ ಒಬ್ರಿಯಾನ್‌– ಜಗದೀಪ್ ಧನಕರ್‌ ವಾಗ್ವಾದ

Published 28 ಜುಲೈ 2023, 14:33 IST
Last Updated 28 ಜುಲೈ 2023, 14:33 IST
ಅಕ್ಷರ ಗಾತ್ರ

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರದ ಬಗ್ಗೆ ಸದನದಲ್ಲಿ ಚರ್ಚೆ ನಡೆಸುವ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಶುಕ್ರವಾರ ಟಿಎಂಸಿ ಸದಸ್ಯ ಡೆರಿಕ್ ಒಬ್ರಿಯಾನ್‌ ಮತ್ತು ಸಭಾಪತಿ ಜಗದೀಪ್ ಧನಕರ್‌ ನಡುವೆ ಮಾತಿನ ಚಕಮಕಿ ನಡೆಯಿತು.

ನಿಯಮ 267ರ ಅಡಿಯಲ್ಲಿ ಮಣಿಪುರದಲ್ಲಿನ ಪರಿಸ್ಥಿತಿಯ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳ ಸದಸ್ಯರು ನೀಡಿದ ನೋಟಿಸ್‌ ಸ್ವೀಕರಿಸದಿರುವ ಬಗ್ಗೆ ಪ್ರಸ್ತಾಪಿಸುವಾಗ ಒಬ್ರಿಯಾನ್‌ ಅವರು ಮೇಜು ಕುಟ್ಟಿ, ಸಭಾಪತಿ ಅವರೊಂದಿಗೆ ವಾಗ್ವಾದಕ್ಕೆ ಇಳಿದರು. ಇದರಿಂದ ವಿಚಲಿತರಾದಂತೆ ಕಂಡುಬಂದ ಧನಕರ್‌ ಅವರು ‘ನಿಮ್ಮ ವರ್ತನೆ ನಾಟಕೀಯವಾಗಿದೆ. ಇದನ್ನು ಸಹಿಸಲಾಗದು’ ಎಂದು ಹೇಳಿ, ಕಲಾಪವನ್ನು ಹಠಾತ್ತನೆ ಸೋಮವಾರಕ್ಕೆ ಮುಂದೂಡಿದರು.

ಕಾಂಗ್ರೆಸ್‌, ಎಡಪಕ್ಷಗಳು, ಟಿಎಂಸಿ, ಎಸ್‌ಪಿ, ಎಎಪಿ, ಎನ್‌ಸಿಪಿ ಮತ್ತು ಡಿಎಂಕೆ ಸೇರಿದಂತೆ ವಿರೋಧ ಪಕ್ಷಗಳ 47 ಸಂಸದರು ಶುಕ್ರವಾರ ನೋಟಿಸ್‌ ನೀಡಿದ್ದರು. ಪಟ್ಟಿ ಮಾಡಿರುವ ವಿಷಯಗಳನ್ನು ಬದಿಗಿರಿಸಿ, ಮಣಿಪುರ ವಿಷಯ ಚರ್ಚೆಗೆ ಕೈಗೆತ್ತಿಕೊಳ್ಳಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT