<p><strong>ಇಂಫಾಲ್/ಚುರಾಚಾಂದಪುರ:</strong> ಭದ್ರತಾ ಪಡೆಗಳು ಮಂಗಳವಾರ ಬೆಳಿಗ್ಗೆ ಇಲ್ಲಿ ನಡೆಸಿದ ಎನ್ಕೌಂಟರ್ನಲ್ಲಿ ನಿಷೇಧಿತ ಸಂಘಟನೆಗೆ ಸೇರಿದ ನಾಲ್ಕು ಮಂದಿ ಉಗ್ರರು ಹತ್ಯೆಯಾಗಿದ್ದಾರೆ.</p>.<p>‘ನಿಷೇಧಿತ ಯುನೈಟೆಡ್ ಕುಕಿ ನ್ಯಾಷನಲ್ ಆರ್ಮಿಗೆ (ಯುಕೆಎನ್ಎ) ಸೇರಿದ ಶಸ್ತ್ರಸಜ್ಜಿತ ಕಾರ್ಯಕರ್ತರು ಅಡಗಿರುವ ಕುರಿತು ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಬೆಳಿಗ್ಗೆ 5.30ರ ಸುಮಾರಿಗೆ ಜಿಲ್ಲೆಯ ಹೆಂಗ್ಲೆಪ್ ಉಪ ವಿಭಾಗದ ಖಾನ್ಪಿ ಗ್ರಾಮದಲ್ಲಿ ಕಾರ್ಯಾಚರಣೆ ಆರಂಭಿಸಿದವು. ಈ ವೇಳೆ ಎರಡು ಕಡೆಗಳ ನಡುವೆ ಭಾರಿ ಗುಂಡಿನ ಚಕಮಕಿ ನಡೆಯಿತು. ಹಲವು ಸುತ್ತಿನ ಗುಂಡಿನ ದಾಳಿ ಬಳಿಕ ನಾಲ್ಕು ಮಂದಿ ಉಗ್ರರು ಹತರಾಗಿದ್ದು, ಉಳಿದವರು ಸ್ಥಳದಿಂದ ಪರಾರಿಯಾದರು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಶಸ್ತ್ರಸಜ್ಜಿತ ಹೋರಾಟ ಕೊನೆಗೊಳಿಸಿ, ಶಾಂತಿ ಮಾತುಕತೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜೊತೆಗಿನ ಒಪ್ಪಂದಕ್ಕೆ ಯುಕೆಎನ್ಎ ಸಂಘಟನೆಯೂ ಇದುವರೆಗೂ ಸಹಿಹಾಕಿಲ್ಲ.</p>.<p>ಕಾರ್ಯಾಚರಣೆಯೂ ಮುಂದುವರಿದಿದ್ದು, ಸುತ್ತಲಿನ ಸ್ಥಳಗಳಲ್ಲಿ ಶೋಧ ಮುಂದುವರಿಸಲಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್/ಚುರಾಚಾಂದಪುರ:</strong> ಭದ್ರತಾ ಪಡೆಗಳು ಮಂಗಳವಾರ ಬೆಳಿಗ್ಗೆ ಇಲ್ಲಿ ನಡೆಸಿದ ಎನ್ಕೌಂಟರ್ನಲ್ಲಿ ನಿಷೇಧಿತ ಸಂಘಟನೆಗೆ ಸೇರಿದ ನಾಲ್ಕು ಮಂದಿ ಉಗ್ರರು ಹತ್ಯೆಯಾಗಿದ್ದಾರೆ.</p>.<p>‘ನಿಷೇಧಿತ ಯುನೈಟೆಡ್ ಕುಕಿ ನ್ಯಾಷನಲ್ ಆರ್ಮಿಗೆ (ಯುಕೆಎನ್ಎ) ಸೇರಿದ ಶಸ್ತ್ರಸಜ್ಜಿತ ಕಾರ್ಯಕರ್ತರು ಅಡಗಿರುವ ಕುರಿತು ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಬೆಳಿಗ್ಗೆ 5.30ರ ಸುಮಾರಿಗೆ ಜಿಲ್ಲೆಯ ಹೆಂಗ್ಲೆಪ್ ಉಪ ವಿಭಾಗದ ಖಾನ್ಪಿ ಗ್ರಾಮದಲ್ಲಿ ಕಾರ್ಯಾಚರಣೆ ಆರಂಭಿಸಿದವು. ಈ ವೇಳೆ ಎರಡು ಕಡೆಗಳ ನಡುವೆ ಭಾರಿ ಗುಂಡಿನ ಚಕಮಕಿ ನಡೆಯಿತು. ಹಲವು ಸುತ್ತಿನ ಗುಂಡಿನ ದಾಳಿ ಬಳಿಕ ನಾಲ್ಕು ಮಂದಿ ಉಗ್ರರು ಹತರಾಗಿದ್ದು, ಉಳಿದವರು ಸ್ಥಳದಿಂದ ಪರಾರಿಯಾದರು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಶಸ್ತ್ರಸಜ್ಜಿತ ಹೋರಾಟ ಕೊನೆಗೊಳಿಸಿ, ಶಾಂತಿ ಮಾತುಕತೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜೊತೆಗಿನ ಒಪ್ಪಂದಕ್ಕೆ ಯುಕೆಎನ್ಎ ಸಂಘಟನೆಯೂ ಇದುವರೆಗೂ ಸಹಿಹಾಕಿಲ್ಲ.</p>.<p>ಕಾರ್ಯಾಚರಣೆಯೂ ಮುಂದುವರಿದಿದ್ದು, ಸುತ್ತಲಿನ ಸ್ಥಳಗಳಲ್ಲಿ ಶೋಧ ಮುಂದುವರಿಸಲಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>